ವಿಶೇಷ ವರದಿ: ದ.ಕ.: ಮಳೆಯಿಂದಾಗಿ 824 ಮನೆಗಳಿಗೆ ಹಾನಿ; 74.72 ಲಕ್ಷ ರೂ. ನೆರೆ ಪರಿಹಾರ


Team Udayavani, Aug 11, 2020, 7:01 AM IST

ವಿಶೇಷ ವರದಿ: ದ.ಕ.: ಮಳೆಯಿಂದಾಗಿ 824 ಮನೆಗಳಿಗೆ ಹಾನಿ; 74.72 ಲಕ್ಷ ರೂ. ನೆರೆ ಪರಿಹಾರ

ಸಾಂದರ್ಭಿಕ ಚಿತ್ರ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎ. 1ರಿಂದ ಇಲ್ಲಿಯವರೆಗೆ ಭಾರೀ ಮಳೆಯಿಂದಾಗಿ 31 ಪೂರ್ಣ ಹಾಗೂ 793 ಭಾಗಶಃ ಸಹಿತ ಒಟ್ಟು 824 ಮನೆಗಳಿಗೆ ಹಾನಿಯಾಗಿದೆ. ಮನೆಗಳ ಹಾನಿಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಒಟ್ಟು 74.72 ಲಕ್ಷ ರೂ. ಪರಿಹಾರ ಮೊತ್ತವನ್ನು ಇಲ್ಲಿಯವರೆಗೆ ವಿತರಿಸಲಾಗಿದೆ. ಈ ಪೈಕಿ ಬಂಟ್ವಾಳ ತಾಲೂಕಿನ ಒಟ್ಟು 95 ಮನೆ ಹಾನಿಗೆ 7.91 ಲಕ್ಷ ರೂ., ಬೆಳ್ತಂಗಡಿಯ 90 ಮನೆಗಳ ಹಾನಿಗೆ 18.24 ಲಕ್ಷ ರೂ., ಮಂಗಳೂರು ತಾಲೂಕಿನ 116 ಮನೆಗಳ ಹಾನಿಗೆ 10.73 ಲಕ್ಷ ರೂ., ಮೂಡುಬಿದಿರೆಯ 49 ಮನೆಗಳ ಹಾನಿಗೆ 6.23 ಲಕ್ಷ ರೂ., ಪುತ್ತೂರು ತಾಲೂಕಿನ 234 ಮನೆಗಳ ಹಾನಿಗೆ 14.56 ಲಕ್ಷ ರೂ., ಕಡಬ ತಾಲೂಕಿನ 157 ಮನೆಗಳ ಹಾನಿಗೆ 9.24 ಲಕ್ಷ ರೂ. ಹಾಗೂ ಸುಳ್ಯ ತಾಲೂಕಿನ 83 ಮನೆಗಳ ಹಾನಿಗೆ 7.79 ಲಕ್ಷ ರೂ. ಪರಿಹಾರ ಇಲ್ಲಿಯವರೆಗೆ ಪಾವತಿಸಲಾಗಿದೆ.

ಪ್ರವಾಹದಿಂದ ಬಾಧಿತವಾದ ಗ್ರಾಮಗಳ ಸಂತ್ರಸ್ತರ ಬಟ್ಟೆ-ಬರೆ ಹಾಗೂ ದಿನಬಳಕೆ ವಸ್ತುಗಳಿಗಾಗಿ ಕೇಂದ್ರ ಸರಕಾರವು ಎಸ್‌ಡಿಆರ್‌ಎಫ್‌/ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಲ್ಲಿ ಪ್ರತಿ ಕುಟುಂಬಕ್ಕೆ ನಿಗದಿಪಡಿಸಿರುವ 3,800 ರೂ.ಗಳೊಂದಿಗೆ ಹೆಚ್ಚುವರಿಯಾಗಿ ರಾಜ್ಯ ಸರಕಾರದ ವತಿಯಿಂದ 6,200 ರೂ. ಸೇರಿ ಒಟ್ಟು 10,000 ರೂ. ಪರಿಹಾರವನ್ನು ಪ್ರತೀ ಕುಟುಂಬಕ್ಕೆ ನೀಡಲು ಸರಕಾರ ಮಂಜೂರಾತಿ ನೀಡಿದೆ.

ಮನೆ ಹಾನಿಗೆ ಹೆಚ್ಚುವರಿ ಪರಿಹಾರ
ಶೇ.75ಕ್ಕಿಂತ ಹೆಚ್ಚು ಸಂಪೂರ್ಣ ಮನೆ ಹಾನಿಗೆ ಪರಿಷ್ಕೃತ ಪರಿಹಾರ ಮೊತ್ತ 5 ಲಕ್ಷ ರೂ., ಶೇ.25ರಿಂದ 75ರಷ್ಟು ಭಾಗಶಃ ಮನೆಹಾನಿಗೆ (ಕೆಡವಿ ಹೊಸದಾಗಿ ನಿರ್ಮಾಣ) 5 ಲಕ್ಷ ರೂ., ಶೇ.25-75ರಷ್ಟು ಭಾಗಶಃ ಮನೆಹಾನಿ (ದುರಸ್ತಿ)ಗೆ 3 ಲಕ್ಷ ರೂ., ಶೇ.15-25ರಷ್ಟು ಅಲ್ಪಸ್ವಲ್ಪ ಮನೆ ಹಾನಿಗೆ 50,000 ರೂ.

ನೆರೆ ಸಂತ್ರಸ್ತರ ಬಟ್ಟೆ ಬರೆ ಹಾಗೂ ದಿನಬಳಕೆ ವಸ್ತುಗಳಿಗಾಗಿ 10,000 ರೂ. ಪರಿಹಾರವನ್ನು ಎಸ್‌ಡಿಆರ್‌ಎಫ್‌ ನಿಧಿಯಿಂದ ನೇರವಾಗಿ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುತ್ತದೆ. ಜಿಲ್ಲಾಧಿಕಾರಿಗಳು ವೆಚ್ಚದ ಬಗ್ಗೆ ಕುಟುಂಬವಾರು ಲೆಕ್ಕವನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ವೆಚ್ಚದ ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಪ್ರವಾಹದಿಂದ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ರಾಜೀವ್‌ ಗಾಂಧಿ ವಸತಿ ನಿಗಮ ನಿ. ವತಿಯಿಂದ ಅಭಿವೃದ್ಧಿಪಡಿಸಲಾದ ತಂತ್ರಾಂಶದ ಮೂಲಕ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ.  ಮಳೆಯಿಂದಾಗಿ ದ.ಕ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 4 (ಮಂಗಳೂರು-3, ಪುತ್ತೂರು-1) ಜೀವಹಾನಿ ಸಂಭವಿಸಿದೆ. ತಲಾ 5 ಲಕ್ಷ ರೂ.ಗಳಂತೆ ಅವರಿಗೆ 20 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಇಬ್ಬರು ಗಾಯಗೊಂಡಿದ್ದಾರೆ. ಒಂದು ಜಾನುವಾರಿಗೆ ಜೀವಹಾನಿ ಸಂಭವಿಸಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಸರ್ವ ಸಿದ್ಧತೆ
ದ.ಕ. ಜಿಲ್ಲೆಯಲ್ಲಿ ಆ. 8ರ ವರೆಗೆ 824 ಮನೆ ಹಾನಿ ಆಗಿದೆ. ಎ. 1ರಿಂದ ಆ. 4ರ ವರೆಗೆ ತಹಶೀಲ್ದಾರರ ಹಂತದಲ್ಲಿ 90.64 ಲಕ್ಷ ರೂ. ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಎಸ್‌ಡಿಆರ್‌ಎಫ್‌ ನಿಯಮಗಳನ್ವಯ ಪಾವತಿ ಮಾಡಲಾಗಿದೆ. ಮಳೆ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸರ್ವ ಸಿದ್ಧತೆಗಳನ್ನು ಮಾಡಲಾಗಿದೆ.
– ಡಾ| ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.