ಎ.19: ಗೋಲ್ಮಾಲ್ ತುಳು ಸಿನೆಮಾ ತೆರೆಗೆ
Team Udayavani, Apr 17, 2019, 6:30 AM IST
ಮಂಗಳೂರು: ಮಂಜುನಾಥ ನಾಯಕ್ ಕಾರ್ಕಳ ಮತ್ತು ಅಕ್ಷಯ ಪ್ರಭು ಅಜೆಕಾರ್ ನಿರ್ಮಾಣದಲ್ಲಿ ರಮಾನಂದ ನಾಯಕ್ ನಿರ್ದೇಶನದಲ್ಲಿ ತಯಾರಾದ ತುಳುವಿನ ಅದ್ದೂರಿ ಬಜೆಟ್ನ “ಗೋಲ್ಮಾಲ್’ ಸಿನಿಮಾ ಎ.19ರಂದು ಕರಾವಳಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಚಿತ್ರದ ನಿರ್ಮಾಪಕ ಮಂಜುನಾಥ ನಾಯಕ್, “ಗೋಲ್ಮಾಲ್’ ಸಿನೆಮಾಕ್ಕೆ ಮೂರು ಹಂತಗಳಲ್ಲಿ ಮಂಗಳೂರು, ಕಾರ್ಕಳ, ಉಡುಪಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ
ನಡೆದಿದ್ದು, ತುಳುವಿನಲ್ಲಿ ನಿರ್ಮಾಣಗೊಂಡ ಭಾರೀ ಬಜೆಟ್ನ ಸಿನಿಮಾ ಇದಾ
ಗಿದ್ದು, ಕನ್ನಡದ ಖ್ಯಾತ ನಟ ಸಾಯಿ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತುಳು ಸಿನೆಮಾ ಲೋಕದಲ್ಲಿ ವಿಭಿನ್ನವಾಗಿ ಮೂಡಿಬಂದಿ ರುವ ಈ ಸಿನೆಮಾ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದು ತಿಳಿಸಿದ್ದಾರೆ.
ಚಿತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸತೀಶ್ ಬಂದಲೆ, ಸುನೀಲ್ ನೆಲ್ಲಿಗುಡ್ಡೆ, ಸುಂದರ ರೈ ಮಂದಾರ ಮೊದಲಾದ ತಾರಾ ಬಳಗವೇ ಇದೆ. ನಾಯಕ ನಟನಾಗಿ ಪೃಥ್ವಿ ಅಂಬರ್, ನಾಯಕ ನಟಿಯಾಗಿ ಶ್ರೇಯಾ ಅಂಚನ್ ಅಭಿನಯಿಸಿದ್ದಾರೆ. ಈ ಸಿನೆಮಾಕ್ಕೆ ಸುನಾದ್ ಗೌತಮ್ ಸಂಗೀತದೊಂದಿಗೆ ಛಾಯಾಗ್ರಹಣ ಮಾಡಿದ್ದಾರೆ. ಶಂಕರ್ ನಾರಾಯಣ್ ಪೆರ್ಡೂರು ಸಂಕಲನ ಮಾಡಿದ್ದಾರೆ.
ಶಿವು ಸಾಹಸ ದೃಶ್ಯ ಸಂಯೋಜಿಸಿದ್ದಾರೆ. ಕಲಾ ನಿರ್ದೇಶಕರಾಗಿ ದಿನೇಶ್ ಜೋಗಿ ದುಡಿದಿದ್ದಾರೆ. ಅತ್ಯುತ್ತಮವಾಗಿ ಚಿತ್ರ ಮೂಡಿಬಂದಿದ್ದು, ಪ್ರತಿಯೊಬ್ಬರೂ ಈ ಚಿತ್ರವನ್ನು ವೀಕ್ಷಿಸಬೇಕು ಎಂದು ಮಂಜುನಾಥ ನಾಯಕ್ ಮನವಿ ಮಾಡಿದರು.
ನಾಯಕ ನಟ ಪೃಥ್ವಿ ಅಂಬರ್, ಕಲಾವಿದ ಸುನಿಲ್ ನೆಲ್ಲಿಗುಡ್ಡೆ, ವಿನಾಯಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ