ಪೊಲೀಸರು, ಜಿಲ್ಲಾಡಳಿತಕ್ಕೆ ಹೊಸ ಸವಾಲು

ಕೋವಿಡ್ ಬಾಧಿತ ಆರೋಪಿಗಳ ಚಿಕಿತ್ಸೆಗೆ ಪ್ರತ್ಯೇಕ ಕೊಠಡಿ ಇಲ್ಲ

Team Udayavani, Jul 20, 2020, 9:42 AM IST

ಪೊಲೀಸರು, ಜಿಲ್ಲಾಡಳಿತಕ್ಕೆ ಹೊಸ ಸವಾಲು

ಸಾಂದರ್ಭಿಕ ಚಿತ್ರ

ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಬಂಧಿತರಾಗುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಕೋವಿಡ್‌ ಪರೀಕ್ಷೆ ಮಾಡಿಸಬೇಕಿದ್ದು, ಅದರ ವರದಿ ಬರುವ ತನಕ ಹಾಗೂ ವರದಿ ಪಾಸಿಟಿವ್‌ ಬಂದ ಸಂದರ್ಭದಲ್ಲಿ ಅವರನ್ನು ದಾಖಲಿಸಲು ಕೊರೊನಾ ಆಸ್ಪತ್ರೆಯಾಗಿರುವ ವೆನ್ಲಾಕ್‌ನಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲದಿರುವುದು ಪೊಲೀಸರಿಗೂ ಜಿಲ್ಲಾಡಳಿತಕ್ಕೂ ತಲೆ ನೋವಾಗಿ ಪರಿಣಮಿಸಿದೆ.

ಆರೋಪಿಗಳಿಗಾಗಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಘಟಕವನ್ನು (ವಿಚಾರಣಾಧೀನ ಕೈದಿಗಳ ಸೆಲ್‌ ಇರುವಂತೆ) ತೆರೆಯುವಂತೆ ಪೊಲೀಸರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದು, ಈವರೆಗೆ ವ್ಯವಸ್ಥೆ ಆಗಿಲ್ಲ. ಕೋವಿಡ್‌ ಪರೀಕ್ಷೆಯ ವರದಿ ಬರುವ ತನಕ ಆರೋಪಿಗಳನ್ನು ಠಾಣೆಯಲ್ಲಿಯೇ ಇರಿಸಬೇಕಾಗುತ್ತದೆ. ವರದಿ ಪಾಸಿಟಿವ್‌ ಬಂದರೆ ಕೊರೊನಾ ಆಸ್ಪತ್ರೆ (ವೆನ್ಲಾಕ್‌)ಗೆ ದಾಖಲಿಸಲಾಗುತ್ತದೆ. ಅಲ್ಲಿ ಅವರಿಗೆ ಪ್ರತ್ಯೇಕ ಕೊಠಡಿ ಇಲ್ಲದ ಕಾರಣ ಇತರ ಸಾಮಾನ್ಯ ರೋಗಿಗಳ ಹಾಗೆ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

ಬೆಂಗಾವಲು ಅನಿವಾರ್ಯ
ಕೋವಿಡ್ ಪರೀಕ್ಷೆಯ ವರದಿ ಬರಲು 2-3 ದಿನ ತಗಲುತ್ತಿದ್ದು, ಈ ಅವಧಿಯಲ್ಲಿ ಹಾಗೂ ಆಸ್ಪತ್ರೆಗೆ ದಾಖಲಿಸಿ ಗುಣಮುಖರಾಗುವ ತನಕ ಆರೋಪಿಗಳಿಗೆ ಬೆಂಗಾವಲು ಒದಗಿಸಲೇಬೇಕಾಗುತ್ತದೆ. ಆಸ್ಪತ್ರೆಯಿಂದ ಬಿಡುಗಡೆ ಆಗಲು ಕೆಲವು ಸಂದರ್ಭಗಳಲ್ಲಿ 14ರಿಂದ 21 ದಿನಗಳು ಬೇಕಾಗುತ್ತವೆ. ಅಷ್ಟೂ ದಿನ ಅವರಿಗೆ ಕಾವಲು ಅನಿವಾರ್ಯ. ಸಾಮಾನ್ಯವಾಗಿ ಒಬ್ಬ ಆರೋಪಿಗೆ ಓರ್ವ ಸಿಎಆರ್‌/ ಡಿಎಆರ್‌ ಸಿಬಂದಿ ಮತ್ತು ಠಾಣೆಯ ಓರ್ವ ಸಿಬಂದಿ ಸೇರಿದಂತೆ ಇಬ್ಬರು ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಅವರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇಂತಹ ಕರ್ತವ್ಯ ಭಾರದಿಂದಲೇ ಕೆಲವು ಮಂದಿ ಪೊಲೀಸರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ.

ದ.ಕ.: 22 ಆರೋಪಿಗಳಿಗೆ, 78 ಪೊಲೀಸರಿಗೆ ಪಾಸಿಟಿವ್‌
ದ.ಕ. ಜಿಲ್ಲೆಯಲ್ಲಿ ಮಾರ್ಚ್‌ 22ರ ಬಳಿಕ ಪೊಲೀಸರು ಬಂಧಿಸಿರುವ ಆರೋಪಿಗಳ ಪೈಕಿ 22 ಮಂದಿಗೆ ಹಾಗೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದ 78 ಪೊಲೀಸರಿಗೆ ಕೊರೊನಾ ಸೋಂಕು ತಗಲಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 17 ಆರೋಪಿಗಳಿಗೆ, 68 ಪೊಲೀಸರು ಮತ್ತು ಇಬ್ಬರು ಗೃಹರಕ್ಷಕರನ್ನು ಕೊರೊನಾ ಬಾಧಿಸಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಐವರು ಆರೋಪಿಗಳಿಗೆ ಮತ್ತು 10 ಪೊಲೀಸರಿಗೆ ಸೋಂಕು ತಗಲಿದೆ. ಬಾಧಿತ ಪೊಲೀಸರ ಕುಟುಂಬದವರೂ ಕ್ವಾರಂಟೈನ್‌ಗೆ ಒಳಗಾಗಬೇಕಾದ ಅನಿವಾರ್ಯತೆ ಎದುರಾಗುತ್ತಿದೆ.

ಪ್ರತ್ಯೇಕ ಕೊಠಡಿಗೆ ಕೋರಿಕೆ
ಬಂಧಿತರ ಕೋವಿಡ್‌ ಪರೀಕ್ಷೆಯ ವರದಿ ಬರುವ ತನಕ / ಕೊರೊನಾ ದೃಢವಾಗಿ ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದರೆ ಅವರಿಗೆ ಪ್ರತ್ಯೇಕ ಸೆಲ್‌/ ಕೊಠಡಿ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತವನ್ನು ಕೋರಲಾಗಿದೆ. ವಿವಿಧ ಸಭೆಗಳಲ್ಲಿಯೂ ಪ್ರಸ್ತಾವಿಸಲಾಗಿದೆ. ಈ ತನಕ ವ್ಯವಸ್ಥೆ ಆಗಿಲ್ಲ. ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿದರೆ ಪೊಲೀಸರಿಗೂ ಜಿಲ್ಲಾಡಳಿತಕ್ಕೂ ಅನುಕೂಲ.
– ಲಕ್ಷ್ಮೀ ಗಣೇಶ್‌, ಡಿಸಿಪಿ, ಮಂಗಳೂರು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.