ಗೊಂದಲ ಬಗೆಹರಿಯುವ ಮುನ್ನವೇ ಹೊಸ ಮೀಸಲಾತಿ ಪ್ರಕಟ!


Team Udayavani, Aug 25, 2022, 11:30 AM IST

5

ಲಾಲ್‌ಬಾಗ್‌: ಮಂಗಳೂರು ಪಾಲಿಕೆಯ ಹಾಲಿ ವರ್ಷದ (23ನೇ ಸಾಲಿನ)ಮೇಯರ್‌ ಮೀಸಲಾತಿ ವಿವಾದ ಇನ್ನೂ ಬಗೆಹರಿಯದಿರುವ ಮಧ್ಯೆಯೇ ಮುಂದಿನ ಸಾಲಿನ (24ನೇ ಅವಧಿ) ಮೇಯರ್‌-ಉಪಮೇಯರ್‌ ಹುದ್ದೆಗೆ ರಾಜ್ಯ ಸರಕಾರ ಬುಧವಾರ ಮೀಸಲಾತಿ ಪ್ರಕಟಿಸಿರುವುದು ಗೊಂದಲಕ್ಕೆ ಕಾರಣವಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್‌ ಹುದ್ದೆ “ಸಾಮಾನ್ಯ’ ಹಾಗೂ ಉಪ ಮೇಯರ್‌ ಸ್ಥಾನ “ಸಾಮಾನ್ಯ ಮಹಿಳೆ’ ಮೀಸಲಾತಿ ಎಂಬುದಾಗಿ ರಾಜ್ಯ ಸರಕಾರ ಬುಧವಾರ ಪ್ರಕಟಿಸಿದೆ.

ಪಾಲಿಕೆಯ 22ನೇ ಸಾಲಿನ ಮೇಯರ್‌ ಆಗಿ ಪ್ರೇಮಾನಂದ ಶೆಟ್ಟಿ, ಉಪಮೇಯರ್‌ ಆಗಿ ಸುಮಂಗಳಾ ರಾವ್‌ ಅಧಿಕಾರದಲ್ಲಿದ್ದಾರೆ. 23ನೇ ಮೇಯರ್‌ ಮೀಸಲಾತಿಯು ಕಳೆದ ವರ್ಷವೇ ಬಂದಿತ್ತು.

23ನೇ ಅವಧಿ ಮೀಸಲಾತಿಗೆ ಚುನಾವಣೆಯೇ ಆಗಿಲ್ಲ!

ಮಂಗಳೂರು ಪಾಲಿಕೆಯ 23ನೇ ಅವಧಿಗೆ ಮೇಯರ್‌ ಸ್ಥಾನವನ್ನು ಸಾಮಾನ್ಯ (ಜಿ) ಹಾಗೂ ಉಪಮೇಯರ್‌ ಸ್ಥಾನವನ್ನು ಹಿಂದುಳಿದ ವರ್ಗ ಎ ಮಹಿಳೆ ವರ್ಗಕ್ಕೆ ಮೀಸಲಿರಿಸಿ ಕಳೆದ ವರ್ಷವೇ ಸರಕಾರ ಆದೇಶಿಸಿತ್ತು. ಅದರಂತೆ ಮೇಯರ್‌, ಉಪಮೇಯರ್‌ ಚುನಾವಣೆ ಮಾ. 2ರಂದು ನಿಗದಿಯಾಗಿತ್ತು. ಆದರೆ ಮಹಾರಾಷ್ಟ್ರದ ರಾಹುಲ್‌ ರಮೇಶ್‌ ಅವರು ಸುಪ್ರಿಂಕೋರ್ಟ್‌ನಲ್ಲಿ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ದೂರು ಸಲ್ಲಿಸಿದ ವೇಳೆ ನ್ಯಾಯಾಲಯವು ಸ್ಥಳೀಯ ಸಂಸ್ಥೆಯ ಮೀಸಲಾತಿ ವಿಚಾರವಾಗಿ ಬೊಟ್ಟು ಮಾಡಿದ ಕಾರಣದಿಂದ ಸರಕಾರ ಮಂಗಳೂರು ಪಾಲಿಕೆ ಮೇಯರ್‌ ಸ್ಥಾನಕ್ಕೆ ಚುನಾವಣೆ ನಡೆಸಲಿಲ್ಲ.

1 ವರ್ಷಕ್ಕೆ ಮುನ್ನವೇ ಮೀಸಲಾತಿ!

ಸಾಮಾನ್ಯವಾಗಿ ಆಯಾಯ ವರ್ಷದ ಮೇಯರ್‌ -ಉಪಮೇಯರ್‌ ಮೀಸಲಾತಿ ಆಯಾ ವರ್ಷವೇ ಸರಕಾರ ಪ್ರಕಟ ಮಾಡುತ್ತದೆ. ಆದರೆ ಮಂಗಳೂರು ಪಾಲಿಕೆ ಹಾಗೂ ರಾಜ್ಯದ ಉಳಿದ ಪಾಲಿಕೆಗಳ ನಡುವೆ 1 ವರ್ಷದ ಆಡಳಿತ ಅವಧಿ ವ್ಯತ್ಯಾಸವಿದೆ. ಹೀಗಾಗಿ ಮಂಗಳೂರು ಪಾಲಿಕೆಗೆ 23ನೇ ಅವಧಿಯ ಮೇಯರ್‌-ಉಪಮೇಯರ್‌ ಆಯ್ಕೆ ನಡೆಯಲಿದ್ದರೆ, ಉಳಿದ ಪಾಲಿಕೆಗಳಲ್ಲಿ ಈ ಬಾರಿ 24ನೇ ಅವಧಿ ನಡೆಯುತ್ತಿದೆ. ಕಳೆದ ವರ್ಷವೇ 23ನೇ ಅವಧಿಯ ಮೇಯರ್‌ -ಉಪಮೇಯರ್‌ ಮೀಸಲಾತಿ ಮಂಗಳೂರು ಪಾಲಿಕೆಗೆ ಬಂದಿತ್ತು. ಅದು ಈ ವರ್ಷ ಅನುಷ್ಠಾನವಾಗಬೇಕಿತ್ತು. ಮುಂದಿನ ಸಾಲಿನ ಮೀಸಲಾತಿ ಬುಧವಾರ ಪ್ರಕಟವಾಗಿದೆ.

3ನೇ ಬಾರಿಯೂ “ಸಾಮಾನ್ಯ’ ಮೀಸಲಾತಿ!

ಪಾಲಿಕೆಯ ಬಿಜೆಪಿ ಆಡಳಿತದ ಮೊದಲ ಅವಧಿಯಲ್ಲಿ ದಿವಾಕರ್‌ ಪಾಂಡೇಶ್ವರ ಮೇಯರ್‌ ಗದ್ದುಗೆಗೇರಿದರೆ, ಎರಡನೇ ಅವಧಿಗೆ ಸಾಮಾನ್ಯ ಮೀಸಲು ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಪ್ರೇಮಾನಂದ ಶೆಟ್ಟಿ ಅವರಿಗೆ ಮೇಯರ್‌ ಹುದ್ದೆ ಒಲಿದು ಬಂದಿತ್ತು. ಕಳೆದ ವರ್ಷ ಸರಕಾರ ಪ್ರಕಟಿಸಿದ್ದ ಮೂರನೇ ಅವಧಿಯ ಮೀಸಲಾತಿಯೂ “ಸಾಮಾನ್ಯ’ ಅಭ್ಯರ್ಥಿಗೆ ನಿಗದಿಯಾಗಿತ್ತು. ಆದರೆ ಚುನಾವಣೆ ನಡೆದಿಲ್ಲ. ಇದೀಗ 4ನೇ ಅವಧಿಯ ಮೇಯರ್‌ ಮೀಸಲಾತಿಯನ್ನೂ “ಸಾಮಾನ್ಯ’ ಅಭ್ಯರ್ಥಿಗೆ ನಿಗದಿ ಮಾಡಿರುವುದು ಪಾಲಿಕೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಸರಕಾರದ ಸ್ಪಷ್ಟನೆ ಕೋರಲಾಗಿದೆ: ಮಂಗಳೂರು ಪಾಲಿಕೆಗೆ ಕಳೆದ ವರ್ಷ 23ನೇ ಅವಧಿಗೆ ಮೇಯರ್‌, ಉಪ ಮೇಯರ್‌ ಸ್ಥಾನದ ಮೀಸಲಾತಿ ಪ್ರಕಟವಾಗಿತ್ತು. ಆದರೆ ಚುನಾವಣೆ ನಡೆದಿರಲಿಲ್ಲ. ಇದೀಗ 24ನೇ ಅವಧಿಗೆ ಮೀಸಲಾತಿ ಪ್ರಕಟವಾಗಿದೆ. ಹೀಗಾಗಿ 23ನೇ ಅವಧಿಯ ಮೇಯರ್‌, ಉಪ ಮೇಯರ್‌ ಚುನಾವಣೆಗೆ ಸಂಬಂಧಿಸಿ ದಿನಾಂಕ ನಿಗದಿಯಾಗಬೇಕಾಗಿದೆ. ಈ ಬಗ್ಗೆ ಸರಕಾರದಿಂದ ಸ್ಪಷ್ಟನೆಯನ್ನು ಕೋರಲಾಗಿದೆ. – ಅಕ್ಷಯ್‌ ಶ್ರೀಧರ್‌, ಆಯುಕ್ತರು, ಮನಪಾ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.