ಪಡೀಲ್‌ ಪರಿಸರದಲ್ಲಿ ನೆರೆ ಸಮಸ್ಯೆ; ಶಾಶ್ವತ ಪರಿಹಾರ ಅಗತ್ಯ


Team Udayavani, Aug 1, 2022, 2:35 PM IST

13

ಮಹಾನಗರ: ಮುಂಗಾರು ಬಿರುಸು ಪಡದು ಮಂಗಳೂರು ನಗರದಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ಪಡೀಲ್‌ ಪರಿಸರದಲ್ಲಿ ಕೃತಕ ನೆರೆಯಿಂದಾಗಿ ಅವಾಂತರ ಸೃಷ್ಟಿಯಾಗಿತ್ತು. ಕೆಲವು ವರ್ಷಗಳಿಗೆ ಹೋಲಿಸಿದರೆ ಪಡೀಲ್‌ ಪರಿಸರದಲ್ಲಿ ಈ ವರ್ಷದ ಭಾರೀ ಮಳೆಗೆ ಉಂಟಾದ ನೆರೆ ವ್ಯಾಪಕವಾಗಿತ್ತು. ಈ ಸಮಸ್ಯೆಯಿಂದ ಸುತ್ತಲಿನ ಸಾರ್ವಜನಿಕರು ಸಂಕಷ್ಟಪಡುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ.

ಸುಮಾರು 20 ವರ್ಷಗಳ ಹಿಂದೆ ಪಡೀಲ್‌, ಕಣ್ಣೂರು, ಅಡ್ಯಾರ್‌ ಪ್ರದೇಶ ಗದ್ದೆಯಿಂದ ಕೂಡಿತ್ತು. ಸದ್ಯ ವಿಶಾಲ ಗದ್ದೆಗಳಿಗೆ ಮಣ್ಣು ತುಂಬಿಸಿ ಕಟ್ಟಡಗಳನ್ನು ಕಟ್ಟಲಾಗಿದೆ. ನೀರಿನ ತೋಡುಗಳು ಮಾಯವಾಗಿವೆ. ಕಾಲಾನುಕ್ರಮೇಣ ಬಹುಮಹಡಿ ಕಟ್ಟಡಗಳು ಸುತ್ತಲೂ ತಲೆ ಎತ್ತಿದೆ. ಸಣ್ಣ ಓಣಿ ರಸ್ತೆಗಳು ಅಗಲಗೊಂಡಿದೆ. ಹೆದ್ದಾರಿಯೂ ಚತುಷ್ಪತಗೊಂಡಿದೆ. ಆದರೆ ಸುಮಾರು ಐದು ಕಿಲೋ ಮೀಟರ್‌ ದೂರದಿಂದ ಹರಿದು ಬರುವ ರಾಜಕಾಲುವೆ ಮಾತ್ರ ಇನ್ನೂ ವಿಸ್ತರಣೆಗೊಂಡಿಲ್ಲ. ಇದೇ ಕಾರಣಕ್ಕೆ ನೆರೆ ನೀರು ರಾಜಕಾಲುವೆಯಲ್ಲಿ ಸರಾಗವಾಗಿ ಹರಿಯದೆ ರಸ್ತೆಗೆ ನುಗ್ಗುತ್ತಿದೆ.

ಕಿರಿದಾದ ರಾಜಕಾಲುವೆ!

ಇಲ್ಲಿನ ರಾಜಕಾಲುವೆಗೆ ಸರಿಪಲ್ಲ, ಕನ್ನಡಗುಡ್ಡೆ ಸೇರಿ ಸುಮಾರು ಐದು ಕಿ.ಮೀ. ವ್ಯಾಪ್ತಿ ನೀರು ಹರಿದು ಬರುತ್ತದೆ. ಈ ರಾಜಕಾಲುವೆ ತೀರಾ ಕಿರಿದಾಗಿದೆ. ನೀರಿನ ರಭಸ ತಡೆಯುವ ಶಕ್ತಿ ಕಾಲುವೆಗಳಿಗಿಲ್ಲ. ಪರಿಣಾಮ, ಪಡೀಲ್‌ ಬಳಿ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆಗೆ ನುಗ್ಗಿ ಸಮಸ್ಯೆಗೆ ಕಾರಣವಾಗುತ್ತದೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಹೀಗಿದ್ದಾಗ, ಸಮಸ್ಯೆಗೆ ಪರಿಹಾರ ಶೀಘ್ರ ದೊರಕಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಅಧಿಕಾರಿಗಳಿಂದ ಪರಿಶೀಲನೆ

ಸ್ಥಳೀಯ ಮನಪಾ ಸದಸ್ಯೆ ಚಂದ್ರಾವತಿ “ಸುದಿನ’ಕ್ಕೆ ಪ್ರತಿಕ್ರಿಯಿಸಿ,” ಪಡೀಲ್‌, ಕೊಡಕ್ಕಲ್‌ ಸುತ್ತಲಿನ ಪ್ರದೇಶ ಈ ಹಿಂದೆ ಗದ್ದೆಯಿಂದ ಕೂಡಿತ್ತು. ಸದ್ಯ ಅಭಿವೃದ್ಧಿ ಹೊಂದಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವೇಳೆ ಇಲ್ಲಿನ ರಾಜಕಾಲುವೆ ವಿಸ್ತ ರಣೆಗೊಂಡಿಲ್ಲ. ಇದೇ ಕಾರಣಕ್ಕೆ ನೀರು ಸಮರ್ಪಕವಾಗಿ ಹರಿಯುವುದಿಲ್ಲ. ಈಗಾಗಲೇ ಎರಡು ಬಾರಿ ರಾಜಕಾಲುವೆ ಹೂಳೆತ್ತಲಾಗಿದೆ. ಆದರೂ ಶನಿವಾರ ಸುರಿದ ಭಾರೀ ಮಳೆಗೆ ತೋಡಿನಲ್ಲಿ ಒಂದು ಲೋಡ್‌ ಕಸ ಸಂಗ್ರಹವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಎನ್‌ಐಟಿಕೆ ತಜ್ಞರು, ಸಣ್ಣ ನೀರಾವರಿ ಇಲಾಖೆ ಮತ್ತು ಪಾಲಿಕೆ ಅಧಿಕಾರಿಗಳು ಕೆಲ ದಿನಗಳ ಹಿಂದೆ ಈ ಪ್ರದೇಶ ಪರಿಶೀಲಿಸಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ಭರವಸೆ ಇದೆ’ ಎನ್ನುತ್ತಾರೆ.

ಸದ್ಯದಲೇ ಹೆದ್ದಾರಿ ಪ್ರಾಧಿಕಾರ ಸಭೆ: ಕೆಲವು ದಿನಗಳ ಹಿಂದೆ ಎರಡು ಬಾರಿ ಸುರಿದ ಬಿರುಸಿನ ಮಳೆಗೆ ಪಡೀಲ್‌ ಸುತ್ತಲಿನ ಪ್ರದೇಶ ಜಲಾವೃತ ಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು. ಇಲ್ಲಿನ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹೋಗದಿರುವುದು ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಪಾಲಿಕೆಯಿಂದ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಸಭೆ ಕರೆದು ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. –ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.