ಬಸ್‌ ಚಾಲಕ-ನಿರ್ವಾಹಕರಿಗೆ ವಿಶೇಷ ಕಾರ್ಯಾಗಾರ

ಚಾಲಕ-ನಿರ್ವಾಹಕ, ಪ್ರಯಾಣಿಕರ ನಡುವೆ ಸಮನ್ವಯ ಸಾಧಿಸುವ ಉದ್ದೇಶ

Team Udayavani, Dec 9, 2022, 11:26 AM IST

8

ಮಹಾನಗರ: ಸಿಟಿ ಬಸ್‌ ಚಾಲಕ- ನಿರ್ವಾಹಕರು ಮತ್ತು ಪ್ರಯಾಣಿಕರ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಚಾಲಕ ಮತ್ತು ನಿರ್ವಾಹಕರಿಗೆ ವಿಶೇಷ ಕಾರ್ಯಾಗಾರ ನಡೆಸಲು ಸಿಟಿ ಬಸ್‌ ಮಾಲಕರ ಸಂಘ ಮುಂದಾಗಿದೆ.

ಪ್ರತೀ ದಿನ ಸುಮಾರು 320ಕ್ಕೂ ಹೆಚ್ಚಿನ ಬಸ್‌ಗಳು ನಗರ ದೊಳಗೆ ಸಂಚರಿಸುತ್ತವೆ. ಅನೇಕ ಸಂದರ್ಭ ನಿರ್ವಾಹಕ, ಪ್ರಯಾಣಿಕರ ನಡುವಣ ಜಗಳಕ್ಕೆ ಕಾರಣವಾಗುತ್ತದೆ. ಇದನ್ನು ತಪ್ಪಿಸಲು ಮತ್ತು ಚಾಲಕ-ನಿರ್ವಾಹಕರ ವರ್ತನೆ ಬದಲಾಯಿಸುವ ನಿಟ್ಟಿನಲ್ಲಿ ಮಂಗಳೂರಿನ ಬೆಂದೂರ್‌ವೆಲ್‌ ಸೆಬಾಸ್ಟಿಯನ್‌ ಹಾಲ್‌ ನಲ್ಲಿ ಡಿ. 13, 14ರಂದು ಕಾರ್ಯಾಗಾರ ನಡೆಯಲಿದೆ. ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರು, ಜಿಲ್ಲೆಯ ಸಾಮಾಜಿಕ ಹೋರಾಟಗಾರರು ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ನಗರದಲ್ಲಿ ಸಂಚರಿಸುವ ಬಹುತೇಕ ಬಸ್‌ ಚಾಲಕ-ನಿರ್ವಾಹಕರು ಕಾರ್ಯಾಗಾರದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅವರ ಕೆಲಸಕ್ಕೆ ತೊಂದರೆಯಾಗದ ರೀತಿಯಲ್ಲಿ ಕಾರ್ಯಾಗಾರಕ್ಕೆ ಪ್ರತ್ಯೇಕ ಪಾಳಿಯ ವ್ಯವಸ್ಥೆ ನಿಗದಿಪಡಿಸಲಾಗಿದೆ. ಪ್ರಯಾಣಿಕರ ಸಮಸ್ಯೆ, ನಿರ್ವಾಹಕ – ಚಾಲಕರ ಸಮಸ್ಯೆಗಳು ಪ್ರತ್ಯೇಕವಾಗಿ ಚರ್ಚೆ ನಡೆಯಲಿದೆ. ಸಮರ್ಪಕ ಉತ್ತರ, ಮಾಹಿತಿಯನ್ನು ತಜ್ಞರು ಕಾರ್ಯಾಗಾರದಲ್ಲಿ ನೀಡಲಿದ್ದಾರೆ.

ಪ್ರತ್ಯೇಕ ಬ್ಯಾಜ್‌ ವ್ಯವಸ್ಥೆ

ಸಿಟಿ ಬಸ್‌ಗಳಲ್ಲಿ ಈವರಗೆ ನಿರ್ವಾಹಕರಿಗೆ ಚಾಲಕರಿಗೆ ಪ್ರತ್ಯೇಕ ಗುರುತಿನ ಚೀಟಿ ಇರಲಿಲ್ಲ. ಇದೀಗ ಗುರುತಿನ ಚೀಟಿಯನ್ನು ನೀಡಲು ಸಂಘ ಮುಂದಾಗಿದೆ. ದತ್ತಾಂಶ ಕಲೆ ಹಾಕುವ ಸಲುವಾಗಿ ಖಾಸಗಿ ಸಿಟಿ ಬಸ್‌ ಮಾಲಕರ ಸಂಘವು ಚಾಲಕರು, ಮಾಲಕರಿಗೆ ಕೆಲವು ವರ್ಷಗಳ ಹಿಂದೆಯೇ ಮುಂದಾಗಿತ್ತು.

ಅರ್ಜಿಗಳನ್ನು ನೀಡಿ, ಚಾಲಕ, ನಿರ್ವಾಹಕರ ಆಧಾರ್‌ ಕಾರ್ಡ್‌ ಅನ್ನು ಪರಿಶೀಲಿಸಿ, ಅದರಲ್ಲಿ ನಮೂದಾಗಿರುವ ಅವರ ಹೆಸರು, ವಿಳಾಸ, ಪೋನ್‌ ನಂಬರ್‌ ದಾಖಲಿಸಬೇಕಿದೆ. ಜತೆಗೆ ಬಸ್‌ ಹೆಸರು, ಬಸ್‌ ರೂಟ್‌, ಬಸ್‌ ನಂಬರ್‌ ಸಹಿತ ಇನ್ನಷ್ಟು ಮಾಹಿತಿಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಿ ನೀಡಬೇಕಿತ್ತು. ಬಳಿಕ ಈ ವ್ಯವಸ್ಥೆ ಅಷ್ಟೊಂದು ಮುನ್ನಲೆಗೆ ಬರಲಿಲ್ಲ. ಇದೀಗ ಮತ್ತೆ ಬ್ಯಾಜ್‌ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಪ್ರಯಾಣಿಕರಿಗೆ ಇನ್ನೂ ಸಿಗುತ್ತಿಲ್ಲ ಟಿಕೆಟ್‌

ಸಿಟಿ ಬಸ್‌ಗಳಲ್ಲಿ ನಿರ್ವಾಹಕರು ಪ್ರತಿಯೊಬ್ಬ ಪ್ರಯಾಣಿಕರಿಗೂ ಟಿಕೆಟ್‌ ನೀಡಬೇಕು ಎಂದು ಸಂಘ ಸೂಚನೆ ನೀಡಿ ಹಲವು ವರ್ಷಗಳು ಕಳೆದರೂ ಇನ್ನೂ ಹಲವು ಬಸ್‌ಗಳಲ್ಲಿ ಇದು ಜಾರಿಯಾಗಿಲ್ಲ. ಪ್ರತಿಯೊಬ್ಬ ಪ್ರಯಾಣಿಕ ಟಿಕೆಟ್‌ ಪಡೆದುಕೊಳ್ಳುವಂತೆ ಬಸ್‌ನಲ್ಲಿ ಬೋರ್ಡ್‌ ಅಳವಡಿಸಲಾಗಿದೆ. ಸಹಾಯಕ ದೂರವಾಣಿ ಸಂಖ್ಯೆಯನ್ನೂ ನಮೂದಿಸಲಾಗಿದೆ ಆದರೂ ನಿರ್ವಾಹಕರು ಟಿಕೆಟ್‌ ನೀಡಲು ಒಪ್ಪುತ್ತಿಲ್ಲ. ಈ ಕುರಿತು ಪ್ರಯಾಣಿಕರಿಂದಲೂ ಆಕ್ಷೇಪಗಳು ಕೇಳಿ ಬಂದಿವೆ. ಈ ವಿಚಾರವೂ ಕಾರ್ಯಾಗಾರದಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

ಸಮನ್ವಯ ಸಾಧಿಸುವ ಆಶಯ

ಸಿಟಿ ಬಸ್‌ ಚಾಲಕರು, ನಿರ್ವಾಹಕರು ಪ್ರಯಾಣಿಕರ ನಡುವಣ ಸಮಚಿತ್ತದಿಂದ ವರ್ತಿಸಲು, ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಿಟಿ ಬಸ್‌ ಮಾಲಕರ ಸಂಘದಿಂದ ಬಸ್‌ ಚಾಲಕರು ಮತ್ತು ನಿರ್ವಾಹಕರಿಗೆ ಪ್ರತ್ಯೇಕ ಕಾರ್ಯಾಗಾರ ನಡೆಸಲು ನಿರ್ಧರಿಸಿದ್ದೇವೆ. ಎರಡು ದಿನಗಳ ಕಾಲ ಕಾರ್ಯಾಗಾರ ನಡೆಯಲಿದೆ. ನಾವು ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಲಿದ್ದೇವೆ. –ಜಯಶೀಲ ಅಡ್ಯಂತಾಯ, ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.