ತನಿಖೆಗೆ ಬರಲಿದೆ ರಾಜ್ಯ ಮಟ್ಟದ ತಜ್ಞರ ತಂಡ?

ಮೂರು ವಾರ ಕಳೆದರೂ ಪತ್ತೆಯಾಗಿಲ್ಲ ದ.ಕ. ಸೋಂಕಿನ ಮೂಲ

Team Udayavani, May 15, 2020, 8:59 AM IST

ತನಿಖೆಗೆ ಬರಲಿದೆ ರಾಜ್ಯ ಮಟ್ಟದ ತಜ್ಞರ ತಂಡ?

ಮಂಗಳೂರು: ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಂಪರ್ಕ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರವು ಉನ್ನತ ಮಟ್ಟದ ತನಿಖೆಗೆ ಬೆಂಗಳೂರಿನಿಂದಲೂ ಪರಿಣತರ ತಂಡವನ್ನು ಕಳುಹಿಸಲು ಮುಂದಾಗಿದೆ. ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ತಜ್ಞರ ತಂಡದ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಉನ್ನತ ಮೂಲವೊಂದು “ಉದಯವಾಣಿ’ಗೆ ತಿಳಿಸಿದೆ.

3 ಜಿಲ್ಲೆಗೆ ಸೋಂಕು
ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕಗೊಳ್ಳಲು ಪಡೀಲ್‌ನ ಆಸ್ಪತ್ರೆ ಹಾಗೂ ಬಂಟ್ವಾಳದ ಕಸ್ಬಾ ಪ್ರದೇಶ ಕಾರಣವಾಗಿದ್ದು, ಈ ಎರಡು ಜಾಗಗಳಿಗೆ ಕೋವಿಡ್ ಎಲ್ಲಿಂದ ಬಂದಿದೆ ಎನ್ನುವುದನ್ನು ಇಲ್ಲಿವರೆಗೆ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಅದರಲ್ಲಿಯೂ ಒಂದೇ ಆಸ್ಪತ್ರೆಯ ಸಂಪರ್ಕದಿಂದ ದ.ಕ. ಜಿಲ್ಲೆಯ 18, ಉತ್ತರ ಕನ್ನಡ ಜಿಲ್ಲೆ ಭಟ್ಕಳದ 21 ಮಂದಿ ಹಾಗೂ ಉಡುಪಿ ಮೂಲದ ಇಬ್ಬರ ಸಹಿತ 41 ಮಂದಿಗೆ ಕೊರೊನಾ ತಗಲಿದೆ.

ಜಿಲ್ಲಾಡಳಿತ ನೇತೃತ್ವದ ತಜ್ಞರ ತಂಡವು ಪರಿಶೀಲನೆ ನಡೆಸಿ ಫಸ್ಟ್‌ ನ್ಯೂರೋಕ್ಕೆ ಕೇರಳದ ಕಡೆಯಿಂದ ಸೋಂಕು ಹರಡಿರುವ ಅನುಮಾನ ವ್ಯಕ್ತಪಡಿಸಿದ್ದು, ಹೆಚ್ಚಿನ ತನಿಖೆಗೆ ಕೇರಳ ಸರಕಾರದ ಕಡೆಯಿಂದ ಮಾಹಿತಿ ಪಡೆಯಬೇಕಾಗಿದೆ ಎಂದಿದೆ. ಅದರಂತೆ ಆ ಆಸ್ಪತ್ರೆಗೆ ನಿಗದಿತ ಅವಧಿಯಲ್ಲಿ ಕೇರಳದಿಂದ ಬಂದು ಚಿಕಿತ್ಸೆ ಪಡೆದುಕೊಂಡವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ಜಿಲ್ಲಾ ಆರೋಗ್ಯ ಇಲಾಖೆ ಕಡೆಯಿಂದ ರಾಜ್ಯ ಸರಕಾರಕ್ಕೆ ಪತ್ರ ಕೂಡ ಬರೆಯಲಾಗಿದೆ ಎನ್ನಲಾಗಿದೆ.

ಈ ನಡುವೆ ಮೂರು ವಾರ ಕಳೆದರೂ ಸೋಂಕಿನ ಮೂಲ ಪತ್ತೆ ಮಾಡದೆ ಇದೀಗ ಕೇರಳದ ಕಡೆಗೆ ಕೈತೋರಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ- ಆರೋಪಗಳು ಕೇಳಿಬರುತ್ತಿವೆ. ವಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಸಿಪಿಐ (ಎಂ) ಮುಖಂಡರು ಕೂಡ ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸುವ ಮೂಲಕ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತಿವೆ. ಈ ನಡುವೆ ಸೋಂಕಿನ ಮೂಲದ ಬಗ್ಗೆ ಇಷ್ಟು ದಿನ ಮೌನ ವಹಿಸಿದ್ದ ಬಿಜೆಪಿ ನಾಯಕರ ಪೈಕಿ ಶಾಸಕ ಉಮಾನಾಥ ಕೋಟ್ಯಾನ್‌ ಅವರು ಪಡೀಲ್‌ ಆಸ್ಪತ್ರೆ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವುದು ವಿಶೇಷ.
ಸಚಿವರ ನಿರಾಕರಣೆ ಈ ನಡುವೆ ಬೆಂಗಳೂರಿನಿಂದ ತನಿಖೆಗೆ ತಜ್ಞರ ತಂಡವು ತನಿಖೆಗಾಗಿ ಮಂಗಳೂರಿಗೆ ಆಗಮಿಸುತ್ತಿರುವ ವಿಚಾರದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಉದಯವಾಣಿಗೆ ತಿಳಿಸಿದ್ದಾರೆ.

ಕೇರಳದ ಕಡೆಗೆ ಬೆಟ್ಟು!
ಬಂಟ್ವಾಳದ ಮಹಿಳೆಯ ಮೂಲಕವೇ ಕೋವಿಡ್ ಹರಡಿದೆ ಎಂದು ಹೇಳುವ ಪ್ರಯತ್ನವನ್ನು ಮಾಡಿದ್ದ ಕೆಲವರು ಇದೀಗ ಕೇರಳ ರಾಜ್ಯದ ಕಡೆಗೆ ಕೈ ತೋರಿಸುತ್ತಿದ್ದಾರೆ. ಕೇರಳದಿಂದ ಬಂದ ರೋಗಿಗಳ ಗಂಟಲ ದ್ರವ ಮಾದರಿಯನ್ನು ಪರೀಕ್ಷೆ ಮಾಡಲು ಅಲ್ಲಿನ ಸರಕಾರದೊಂದಿಗೆ ಮಾತನಾಡಿ, ಆ ರೋಗಿಗಳ ಗಂಟಲ ದ್ರವ ಮಾದರಿ ಪರೀಕ್ಷೆ ವರದಿಯನ್ನಾಧರಿಸಿ ಮೂಲ ನಿರ್ಧರಿಸಲು ಮುಂದಾಗಿದ್ದಾರೆ. ಈ ಒಟ್ಟು ಬೆಳವಣಿಗೆಗೆ ಇನ್ನೆಷ್ಟು ಸಮಯ ಹಿಡಿಯಬಹುದೋ ಗೊತ್ತಿಲ್ಲ.

2,218 ಮಂದಿಯ ತಪಾಸಣೆ ಅಗತ್ಯ!
ಆರೋಗ್ಯ ಇಲಾಖೆಯ ಮೂಲಗಳ ಮಾಹಿತಿ ಪ್ರಕಾರ, ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಫೆ. 1ರಿಂದ ಎ.24ರ ನಡುವೆ ಕೇರಳದಿಂದ ಒಟ್ಟು 1,606 ಮಂದಿ ಹೊರರೋಗಿಗಳು ಮತ್ತು 612 ಮಂದಿ ಒಳರೋಗಿಗಳು ಚಿಕಿತ್ಸೆ ಪಡೆದು ತೆರಳಿದ್ದಾರೆ. ಹೀಗಿರುವಾಗ ವಾಸ್ತವದಲ್ಲಿ ಕೇರಳದಿಂದ ಬಂದು ಹೋದ 2,218 ಮಂದಿಯನ್ನೂ ಕೋವಿಡ್ ತಪಾಸಣೆಗೆ ಒಳಪಡಿಸಿದ ಬಳಿಕವಷ್ಟೇ ದಕ್ಷಿಣ ಕನ್ನಡದ ಕೋವಿಡ್ ಮೂಲ ಪತ್ತೆಯಾಗಬಹುದು ಎನ್ನುವುದು ತಜ್ಞ ವೈದ್ಯರ ತಂಡದ ಲೆಕ್ಕಾಚಾರ. ಆದರೆ ಕೇರಳ ಸರಕಾರವು ಕರ್ನಾಟಕದ ಈ ಮನವಿಗೆ ಯಾವ ರೀತಿ ಸ್ಪಂದಿಸಬಹುದು ಎನ್ನುವುದೇ ಬಹುದೊಡ್ಡ ಪ್ರಶ್ನೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.