3 ವರ್ಷಗಳಿಂದ ರಸ್ತೆ ಬದಿ ನಿಂತಿದೆ ಕಲ್ಲು ತುಂಬಿದ ಟಿಪ್ಪರ್ !
Team Udayavani, Jun 25, 2020, 12:24 PM IST
ಮಹಾನಗರ: ನಗರದ ಮರೋಳಿ ಬಳಿ ರಸ್ತೆ ಬದಿಯಲ್ಲಿ ಕಳೆದ ಮೂರು ವರ್ಷಗಳಿಂದ ಕಲ್ಲು ತುಂಬಿದ ಟಿಪ್ಪರ್ ನಿಲ್ಲಿಸಲಾಗಿದ್ದು, ಇದರಿಂದಾಗಿ ಸ್ಥಳೀಯರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ. ಕುಲಶೇಖರ ಕಡೆಯಿಂದ ಪಡೀಲ್ ಕಡೆಗೆ ತೆರಳುವಾಗ ವಾಹನ ಸವಾರರಿಗೆ ಈ ಟಿಪ್ಪರ್ ಸ್ಪಷ್ಟವಾಗಿ ಕಾಣದೆ ಅಪಘಾತ ಉಂಟಾಗುವ ಸಾಧ್ಯತೆ ಇದೆ. ಕಳೆದ ಕೆಲ ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಪೊಲೀಸ್ ಠಾಣೆ ಇತ್ತು. ಆ ವೇಳೆ ಮುಟ್ಟುಗೋಲು ಹಾಕಿದ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗುತ್ತಿತ್ತು. ಇದೀಗ ವಾಮಂಜೂರಿಗೆ ಪೊಲೀಸ್ ಠಾಣೆ ಸ್ಥಳಾಂತರವಾಗಿದೆ. ಆದರೆ ಟಿಪ್ಪರ್ ಮಾತ್ರ ರಸ್ತೆ ಬದಿಯಲ್ಲೇ ನಿಲ್ಲಿಸಲಾಗಿದೆ.
“ಈಗಾಗಲೇ ಮಳೆಗಾಲ ಆರಂಭವಾಗಿದ್ದು, ನಗರದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಹೀಗಿ ದ್ದಾಗ ವಾಹನಗಳು ತುಕ್ಕು ಹಿಡಿದು ನೀರು ನಿಲ್ಲುವ ಸಾಧ್ಯತೆ ಹೆಚ್ಚಿದೆ. ಇನ್ನು, ಈ ಟಿಪ್ಪರ್ನ ಕೆಲ ಭಾಗ ಈಗಾಗಲೇ ತುಕ್ಕು ಹಿಡಿದಿದೆ. ಬಿಡಿ ಭಾಗಗಳೆಲ್ಲ ಹಾಳಾಗಿವೆ. ಹೀಗಿರುವಾಗ ಟಿಪ್ಪರ್ ಅನ್ನು ತೆರವು ಮಾಡಬೇಕು’ ಎನ್ನುತ್ತಾರೆ ಸ್ಥಳೀಯರಾದ ಗಾವಳಿ ಸುರೇಶ್ ಎನ್. ಶೆಟ್ಟಿ ಅವರು. ಈ ಬಗ್ಗೆ ಮಂಗಳೂರು ಟ್ರಾಫಿಕ್ ವಿಭಾಗದ ಎಸಿಪಿ ಮಂಜುನಾಥ ಶೆಟ್ಟಿ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ “ಈ ಹಿಂದೆ ಮರೋಳಿಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಇತ್ತು. ಆ ಸಂದರ್ಭ ಮುಟ್ಟುಗೋಲು ಹಾಕಿದ ವಾಹನ ಇದಾಗಿದೆ. ಆದರೆ ಪೊಲೀಸ್ ಠಾಣೆ ಸದ್ಯ ವಾಮಂಜೂರಿಗೆ ಸ್ಥಳಾಂತರ ಮಾಡಲಾಗಿದೆ. ಈ ಟಿಪ್ಪರ್ ತೆರವು ಮಾಡುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು