ಪಡಿತರ ಚೀಟಿಗೆ ಆಧಾರ್ ಲಿಂಕ್; ಮತ್ತೆ ಆರಂಭವಾಗಲಿದೆ ಇ-ಕೆವೈಸಿ
Team Udayavani, Oct 22, 2020, 6:10 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕೊರೊನಾದಿಂದ ಸ್ಥಗಿತಗೊಂಡಿರುವ ಪಡಿತರ ಚೀಟಿಗೆ ಆಧಾರ್ ಜೋಡಿಸುವ ಇ-ಕೆವೈಸಿ ನೋಂದಣಿ ಪ್ರಕ್ರಿಯೆ ರಾಜ್ಯಾದ್ಯಂತ ಮತ್ತೆ ಆರಂಭವಾಗುವ ನಿರೀಕ್ಷೆಯಿದೆ. ರಾಜ್ಯದ ಒಟ್ಟು ಪಡಿತರ ಚೀಟಿಗಳ ಪೈಕಿ ಇಲ್ಲಿಯವರೆಗೆ ಅರ್ಧದಷ್ಟು ಮಾತ್ರ ಇ-ಕೆವೈಸಿ ನೋಂದಣಿ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶೇ.59, ಉಡುಪಿ ಜಿಲ್ಲೆಯಲ್ಲಿ ಶೇ. 49ರಷ್ಟು ಇ-ಕೆವೈಸಿ ಆಗಿದೆ.
ಇ-ಕೆವೈಸಿಗೆ ಬಯೋಮೆಟ್ರಿಕ್ ಅಗತ್ಯವಿದ್ದು, ಕೊರೊನಾ ಪ್ರಸರಣವಾಗಬಹುದು ಎಂಬುದಕ್ಕಾಗಿ ನೋಂದಣಿ ಸ್ಥಗಿತ ಮಾಡಲಾಗಿತ್ತು. ಆಹಾರ ಇಲಾಖೆಯ ಮೂಲಗಳ ಪ್ರಕಾರ ಕೊರೊನಾ ತೀವ್ರತೆ ಕಡಿಮೆಯಾದ ತತ್ಕ್ಷಣ ನೋಂದಣಿ ಆರಂಭಿಸಲಾಗುತ್ತದೆ. ಈ ಬಾರಿ ಪೂರ್ಣ ಪ್ರಮಾಣದಲ್ಲಿ ನೋಂದಣಿ ನಡೆಸಿ ಗಡುವು ಬಳಿಕವೂ ನೋಂದಣಿ ಮಾಡದಿದ್ದರೆ ಅಂಥ ಪಡಿತರ ಚೀಟಿಗಳನ್ನು ತಡೆಹಿಡಿಯಲು ಇಲಾಖೆ ನಿರ್ಧರಿಸಿದೆ.
ಇ-ಕೆವೈಸಿ ಏಕೆ ?
ರಾಜ್ಯಾದ್ಯಂತ ನಾಲ್ಕು ವರ್ಷಗಳ ಅವಧಿಯಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಪಡಿತರ ಚೀಟಿ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಹೆಸರಿನಲ್ಲಿ ಪಡಿತರ ಪಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಪಡಿತರ ಚೀಟಿಗೆ ಆಧಾರ್ ಜೋಡಿಸುವ ಇ-ಕೆವೈಸಿ ನಿಯಮವನ್ನು ಆಹಾರ ಇಲಾಖೆ ಜಾರಿಗೆ ತಂದಿತ್ತು. ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಯಲ್ಲಿಯೇ ಇದನ್ನು ಮಾಡಬೇಕಿತ್ತು. ಇದರಡಿ ಪಡಿತರ ಚೀಟಿಯಲ್ಲಿ ಇರುವ ಎಲ್ಲ ಸದಸ್ಯರೂ ಬಯೋಮೆಟ್ರಿಕ್ ನೀಡಬೇಕು. ವರ್ಷದ ಹಿಂದೆ ನೋಂದಣಿ ಆರಂಭವಾಗಿದ್ದರೂ ಬಳಿಕ ಸರ್ವರ್ ಸಮಸ್ಯೆ ಸಹಿತ ತಾಂತ್ರಿಕ ಕಾರಣಗಳಿಂದ ಕೆಲವು ಬಾರಿ ಸ್ಥಗಿತಗೊಂಡಿತ್ತು. 2020ರ ಮಾರ್ಚ್ ಅನಂತರ ಕೊರೊನಾದಿಂದಾಗಿ ಸ್ಥಗಿತಗೊಳಿಸಲಾಗಿತ್ತು.
ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡುವ ಇ-ಕೆವೈಸಿ ನೋಂದಣಿ ಪ್ರಕ್ರಿಯೆಯನ್ನು ಕೊರೊನಾದಿಂದಾಗಿ ಸ್ಥಗಿತಗೊಳಿಸಲಾಗಿತ್ತು. ಕೊರೊನಾ ತೀವ್ರತೆ ಕೊನೆಗೊಂಡ ತತ್ಕ್ಷಣ ಮತ್ತೆ ಆರಂಭಿಸುವ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
-ಕೆ. ಗೋಪಾಲಯ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರು
ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ