ಉಳ್ಳಾಲ ಸೇತುವೆ: ಅನಾಹುತ ತಪ್ಪಿಸಲು 500 ಮೀ. ವ್ಯಾಪ್ತಿಗೆ ಸಿ.ಸಿ. ಕೆಮರಾ


Team Udayavani, Feb 4, 2021, 5:40 AM IST

Above bridge: 500 m to avoid intruders. Coverage to C.C. Camera

ಮಹಾನಗರ,: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಸೇತುವೆಯ ರಕ್ಷಣ ಬೇಲಿ ನಿರ್ಮಾಣ ಕಾಮಗಾರಿ ಪೂರ್ತಿಗೊಂಡಿದ್ದು, ಈ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳ ಪರಿವೀಕ್ಷಣೆಗೆ 500 ಮೀ. ರೇಂಜಿನ ಸಿ.ಸಿ. ಕೆಮರಾ ಅಳವಡಿಸುವ ಪ್ರಕ್ರಿಯೆ ಇದೀಗ ಪ್ರಾರಂಭಗೊಂಡಿದೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ವತಿಯಿಂದ 63 ಲಕ್ಷ ರೂ. ವೆಚ್ಚದಲ್ಲಿ (ರಕ್ಷಣ ಬೇಲಿಗೆ 58 ಲಕ್ಷ ರೂ. ಮತ್ತು ಸಿ.ಸಿ. ಕೆಮರಾಕ್ಕೆ 5 ಲಕ್ಷ ರೂ.) ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ರಕ್ಷಣಾ ಬೇಲಿ ನಿರ್ಮಾಣ ಕಾಮಗಾರಿ ಪೂರ್ತಿಗೊಂಡು ಎರಡು ತಿಂಗಳುಗಳು ಕಳೆದಿವೆ. ಇದೀಗ ಎರಡೂ ಸೇತುವೆಗಳ ಎರಡೂ ದಿಕ್ಕುಗಳಲ್ಲಿ ಸಿಸಿ ಕೆಮರಾ ಅಳವಡಿಸಲು ಕಂಬಗಳನ್ನು ಹಾಕಲಾಗಿದೆ.

ವಾರದೊಳಗೆ ಕೇಬಲ್‌ ಸಂಪರ್ಕ
ಒಂದು ವಾರದೊಳಗೆ ಕೇಬಲ್‌ ಸಂಪರ್ಕ ಕಲ್ಪಿಸಿ, ಸಿ.ಸಿ. ಕೆಮರಾ ಅಳವಡಿಸುವ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶವನ್ನು ಮೂಡಾ ಹೊಂದಿದೆ. ರಾಜ್ಯ ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಶಾಸಕರು ಮತ್ತು ಸಚಿವರ ಲಭ್ಯತೆಯನ್ನು ನೋಡಿಕೊಂಡು ಇದರ ಉದ್ಘಾಟನೆಗೆ ಸಿದ್ಧತೆಗಳು ನಡೆದಿವೆ. ಉದ್ಘಾಟನೆಗೊಳ್ಳುವ ಒಂದು ದಿನ ಮುಂಚಿತವಾಗಿ ಸಿ.ಸಿ. ಕೆಮರಾ ವ್ಯವಸ್ಥೆಯ ಕೇಬಲ್‌ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಮೂಡಾ ಅಧಿಕಾರಿಗಳು “ಸುದಿನ’ಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ತುಮಕೂರು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಅರಣ್ಯ ನಾಶ   

ಉಳ್ಳಾಲ ಸೇತುವೆ 800 ಮೀ. ಉದ್ದವಿದ್ದು, ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಹೋಗುವ ಹಾಗೂ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬರುವ ಸೇತುವೆ ಸಹಿತ ಎರಡೂ ಸೇತುವೆಗಳಿಗೆ ಎರಡೂ ಬದಿ ರಕ್ಷಣಾ ಬೇಲಿಯನ್ನು ನಿರ್ಮಿಸಲಾಗಿದೆ. ಎರಡೂ ಸೇತುಗಳ ಎರಡೂ ತುದಿಗಳಲ್ಲಿ ಸಿ.ಸಿ. ಕೆಮರಾ (ಒಟ್ಟು 4 ಸಿ.ಸಿ. ಕೆಮರಾ) ಅಳವಡಿಸಲಾಗಿದೆ. ಸಿ.ಸಿ. ಕೆಮರಾಗಳು 500 ಮೀಟರ್‌ ದೂರದವರೆಗಿನ ಚಿತ್ರಣವನ್ನು ಸೆರೆ ಹಿಡಿಯುವ ಸಾಮರ್ಥ್ಯ ಹೊಂದಿವೆ.

ಮುಂದಿನ ದಿನಗಳಲ್ಲಿ ಈ ಸೇತುವೆಯಲ್ಲಿ ಅಥವಾ ಸೇತುವೆಯ ಎರಡೂ ದಿಕ್ಕುಗಳಲ್ಲಿ ಸಂಭವಿಸುವ ಯಾವುದೇ ಅನಾಹುತಗಳನ್ನು ಈ ಸಿ.ಸಿ. ಕೆಮರಾಗಳು ಸೆರೆ ಹಿಡಿಯಲಿವೆ. ಯಾವನೇ ವ್ಯಕ್ತಿ ಸೇತುವೆ ಮೇಲಿನಿಂದ ಕೆಳಗಿರುವ ನೇತ್ರಾವತಿ ನದಿಗೆ ಹಾರಿದರೆ ಅಥವಾ ಹಾರಲು ಯತ್ನಿಸಿದ್ದರೆ ಈ ಸಿ.ಸಿ. ಕೆಮರಾದ ದೃಶ್ಯಾವಳಿ ನೋಡಿ ತಿಳಿಯಬಹುದಾಗಿದೆ.
ಇದುವರೆಗೆ ಸೇತುವೆಯ ಮೇಲೆ ಅಥವಾ ಸೇತುವೆಯ ಅಕ್ಕ ಪಕ್ಕದಲ್ಲಿ ಅನಾಥ ವಾಹನಗಳು ಕಂಡು ಬಂದಾಗ ವಾಹನ ಸವಾರ ಎಲ್ಲಿ ಹೋಗಿದ್ದಾರೆ ಎನ್ನುವ ಸಂಶಯ ಹುಟ್ಟಿಕೊಳ್ಳುತ್ತಿದ್ದವು. ಇದರಿಂದ ಪೊಲೀಸರು ಕೆಲವೊಮ್ಮೆ ಅನಾವಶ್ಯಕವಾಗಿ ನದಿಯಲ್ಲಿ ಹುಡುಕಾಟ ನಡೆಸುವ ಪ್ರಮೇಯವಿತ್ತು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.