ಜಿಲ್ಲಾಧಿಕಾರಿ ಕಚೇರಿ ಬಳಿ ಎಬಿವಿಪಿ ಪ್ರತಿಭಟನೆ 


Team Udayavani, Jul 7, 2018, 1:40 PM IST

7-july-7.jpg

ಮಹಾನಗರ: ಶೈಕ್ಷಣಿಕ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಹಾಗೂ ವಿದ್ಯಾರ್ಥಿಗಳ ಆವಶ್ಯಕತೆಯನ್ನು ಪೂರೈಸುವಲ್ಲಿ ರಾಜ್ಯದ ಬಜೆಟ್‌ ವಿಫಲವಾಗಿದೆ ಎಂದು ಆರೋಪಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಸಲ್ಲಿಸಿದ ಬಜೆಟ್‌ ರಾಜ್ಯದ ಬಡ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಪಾಲಿಗೆ ಇದೊಂದು ನಿರಾಶಾದಾಯಕವಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದಂತಾಗಿದೆ.

ಸತ್ವಹೀನ ಬಜೆಟ್‌
ಬಡ, ಪ್ರತಿಭಾವಂತ ಮತ್ತು ಹಿಂದುಳಿದ ವರ್ಗ ಸೇರಿದಂತೆ ಎಲ್ಲ ವಿದ್ಯಾರ್ಥಿಗಳಿಗೆ ನಿರಾಸೆ ಮೂಡಿಸುವ ಸತ್ವಹೀನ ಬಜೆಟ್‌ ಇದಾಗಿದೆ. ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಾಮುಖ್ಯವಾಗಿರುವ ಉಚಿತ ಬಸ್‌ಪಾಸ್‌ ವಿತರಣೆ, ಪ.ಜಾತಿ, ಪ.ಪಂಗಡ ಹಾಗೂ ಒಬಿಸಿ ವರ್ಗದ ವಿದ್ಯಾರ್ಥಿಗಳ ಸರಕಾರಿ ಹಾಸ್ಟೆಲ್‌ ಉನ್ನತೀಕರಣ, ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಸಿಬಂದಿ ನೇಮಕ ಸೇರಿದಂತೆ, ಶಿಕ್ಷಣ ಕ್ಷೇತ್ರದಲ್ಲಿ ಈಗಿನ ಆವಶ್ಯಕತೆಯನ್ನು ಪೂರೈಸುವಲ್ಲಿ ಬಜೆಟ್‌ ವಿಫ‌ಲವಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಇದೇ ವೇಳೆ ಪ್ರತಿಭಟನ ನಿರತ ವಿದ್ಯಾರ್ಥಿಗಳು ಪೊಲೀಸರು ಹಾಕಿದ ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಪ್ರಯತ್ನಿಸಿದರಲ್ಲದೆ, ಪೊಲೀಸ್‌ ಜೀಪನ್ನು ಸುತ್ತುವರಿದರು. ಒಂದೆರಡು ವಿದ್ಯಾರ್ಥಿಗಳನ್ನು ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರಾದರೂ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು. 

ಸರ್ವ ಕಾಲೇಜು ಎಬಿವಿಪಿ ಅಧ್ಯಕ್ಷ ವಿಖ್ಯಾತ್‌, ವಿದ್ಯಾರ್ಥಿನಿ ಪ್ರಮುಖ್‌ ಬಿಂದು, ನಗರ ಸಂಘಟನ ಕಾರ್ಯದರ್ಶಿ ಕಿರಣ್‌,
ಕಾರ್ಯಕರ್ತರಾದ ಶೀತಲ್‌ ಕುಮಾರ್‌, ಉತೇಶ್‌, ಮಯೂರೇಶ್‌, ಶಶಾಂಕ್‌, ಮಣಿಕಂಠ, ರಾಮ್‌ ನಾರಾಯಣ್‌, ತೇಜಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 

ಡಿಸಿ ಬಂದು ಮನವಿ ಸ್ವೀಕರಿಸಲು ಆಗ್ರಹ
ಹಂಪನ್‌ಕಟ್ಟೆ ವಿಶ್ವವಿದ್ಯಾಲಯ ಕಾಲೇಜು, ರಾಮಕೃಷ್ಣ ಕಾಲೇಜು, ಕೆನರಾ, ಸಹಿತ ವಿವಿಧ ಕಾಲೇಜುಗಳ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಧಿಕಾರಿ ಪ್ರತಿಭಟನ ಸ್ಥಳಕ್ಕೆ ಬಂದು ತಮ್ಮ ಮನವಿ ಸ್ವೀಕರಿಸಬೇಕು ಎಂದು ಪ್ರತಿಭಟನಕಾರರು ಘೋಷಣೆಗಳನ್ನು ಕೂಗಿದ್ದರಿಂದ ಅಪರ ಜಿಲ್ಲಾಧಿಕಾರಿ ಕುಮಾರ್‌ ಸ್ಥಳಕ್ಕೆ
ಭೇಟಿ ನೀಡಿ ಮನವಿ ಸ್ವೀಕರಿಸಿದರು. 

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.