ಅಕ್ರಮ ಮರಳುಗಾರಿಕೆ, ಗಣಿಗಾರಿಕೆ ತಡೆಗೆ ಕ್ರಮ: ಡಿಸಿ
ದೋಣಿಗಳ ತೆರವಿಗೆ ಸೂಚನೆ
Team Udayavani, Jun 20, 2020, 5:15 AM IST
ಮಹಾನಗರ: ನೇತ್ರಾವತಿ, ಫಲ್ಗುಣಿ/ ಗುರುಪುರ ಹಾಗೂ ಶಾಂಭವಿ ನದಿಗಳ ದಂಡೆಯಾದ ಸರಕಾರಿ ಜಮೀನಿನಲ್ಲಿ ಇರಿಸಿರುವ ದೋಣಿಗಳನ್ನು ಅನಧಿಕೃತ ಮರಳುಗಾರಿಕೆಗೆ ಬಳಸುವ ಸಾಧ್ಯತೆ ಇರುವುದರಿಂದ ಅವುಗಳನ್ನು 3 ದಿನಗಳೊಳಗೆ ಅದರ ಮಾಲಕರು ತೆರವು ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸೂಚನೆ ನೀಡಿದ್ದಾರೆ.
ಅಕ್ರಮ ಮರಳುಗಾರಿಕೆ, ಗಣಿಗಾರಿಕೆ ನಿಯಂತ್ರಣ ಕುರಿತು ಶುಕ್ರವಾರ ಜರಗಿದ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ದೋಣಿಗಳನ್ನು ತೆರವುಗೊಳಿಸದಿದ್ದರೆ ದೋಣಿಗಳನ್ನು ವಶಪಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಯವರು ಹೇಳಿದರು.
ಹಗಲು ರಾತ್ರಿ ಕಾರ್ಯಾಚರಣೆ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತಂಡಗಳು ಪ್ರತಿ ನಿತ್ಯ ಹಗಲು-ರಾತ್ರಿ ಕಾರ್ಯಾಚರಣೆ ನಡೆಸುತ್ತಿದ್ದು ಜೂ.18ರಂದು ಮೂಡುಬಿದಿರೆಯ ನಿಡ್ಡೋಡಿ, ನೀರುಡೆ ಪ್ರದೇಶಗಳಲ್ಲಿ ಮತ್ತು ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಪ್ರದೇಶಗಳಿಗೆ ದಾಳಿ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ತಹಶೀಲ್ದಾರ್ರವರ ನೇತೃತ್ವದ ತಂಡವು ಜೂ.17ರಂದು ಅಡ್ಯಾರ್, ಶಾಂಭವಿ ನದಿ, ಮಳವೂರು, ಅದ್ಯಪಾಡಿ ಡ್ಯಾಂ ಪ್ರದೇಶಗಳಲ್ಲಿ ತೀವ್ರ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅನಧಿಕೃತ ಮರಳುಗಾರಿಕೆ ಹಾಗೂ ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಂಡಗಳು ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ