ಬಸ್ನಿಲ್ದಾಣದಲ್ಲಿ ವೈಫೈ ಒದಗಿಸಲು ಕ್ರಮ: ಕೋಟ್ಯಾನ್
Team Udayavani, Aug 12, 2018, 12:32 PM IST
ಮೂಡಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅವರು ನಮೋ ಬ್ರಿಗೇಡ್ ಆಹ್ವಾನದ ಮೇರೆಗೆ ಬಸ್ನಿಲ್ದಾಣಕ್ಕೆ ಬಂದು ಸಮಸ್ಯೆಗಳನ್ನು ಶುಕ್ರವಾರ ಪರಿಶೀಲಿಸಿದರು. ಬಸ್ನಿಲ್ದಾಣದ ಅವ್ಯವಸ್ಥಿತ ಪಾರ್ಕಿಂಗ್, ಬಸ್ ತಂಗುದಾಣದ ಸಮಸ್ಯೆಗಳು, ಕುಡಿಯುವ ನೀರಿನ ಸಮಸ್ಯೆ ಹಾಗೂ ಇಂದಿರಾಗಾಂಧಿ ವಾಣಿಜ್ಯ ಸಂಕೀರ್ಣ ಸೋರುತ್ತಿರುವುದನ್ನು ಅವರು ಪರಿಶೀಲಿಸಿದರು ಹಾಗೂ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪುರಸಭೆ, ಪೊಲೀಸ್ ಅಧಿಕಾರಿಗಳು, ವಾಹನ ಮಾಲಕರು ಮತ್ತು ಇಲ್ಲಿನ ವ್ಯಾಪಾರಸ್ಥರ ಜಂಟಿ ಸಭೆ ಕರೆದು ಚರ್ಚಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಪುರಸಭಾ ಸದಸ್ಯರಾದ ನಾಗರಾಜ ಪೂಜಾರಿ, ಪ್ರಸಾದ್ ಕುಮಾರ್, ಲಕ್ಷ್ಮಣ ಪೂಜಾರಿ, ಉದ್ಯಮಿ ಮೇಘನಾದ್ ಶೆಟ್ಟಿ, ಹೊಸಬೆಟ್ಟು ಪಂಚಾಯತ್ ಸದಸ್ಯ ಸತೀಶ್ ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
ವೈಫೈ ಸೌಲಭ್ಯ
ಬಸ್ ನಿಲ್ದಾಣಗಳಲ್ಲಿ ಜನರು ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳ ಅನುಕೂಲತೆಗಾಗಿ ವೈಫೈ ಸೌಲಭ್ಯದ ಅವಶ್ಯಕತೆ ಇರುವುದನ್ನು ಮನಗಂಡಿದ್ದು ಮೂಡಬಿದಿರೆ, ಮೂಲ್ಕಿ, ಬಜಪೆ ಬಸ್ನಿಲ್ದಾಣಗಳಲ್ಲಿ ಉಚಿತ ವೈಫೈ ಒದಗಿಸುವ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳೊಂದಿಗೆ ತಾವು ಮಾತುಕತೆ ನಡೆಸಿದ್ದು ಮೂರು ತಿಂಗಳೊಳಗೆ
ಅನುಷ್ಠಾನಗೊಳಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ