Special Interview: ಸೈಬರ್‌ ಪ್ರಕರಣಗಳ ತನಿಖೆಗೂ ಎಲ್ಲ ಠಾಣೆ ಸನ್ನದ್ಧ: ಡಿಐಜಿಪಿ

ಪಶ್ಚಿಮ ವಲಯ ನೂತನ ಡಿಐಜಿಪಿ ಡಾ| ಎಂ.ಬಿ. ಬೋರಲಿಂಗಯ್ಯ

Team Udayavani, Feb 9, 2024, 8:19 AM IST

2-interview

ಮಂಗಳೂರು: ಕಳ್ಳತನ, ಹಲ್ಲೆ, ಕೊಲೆ ಮುಂತಾದ ಪ್ರಕರಣಗಳು ಮಾತ್ರವಲ್ಲದೆ ಸೈಬರ್‌ ಅಪರಾಧಗಳನ್ನು ಕೂಡ ಠಾಣೆಯ ಮಟ್ಟದಲ್ಲಿಯೇ ನಿಭಾಯಿಸುವ ಸಾಮರ್ಥ್ಯ ಪ್ರತೀ ಪೊಲೀಸ್‌ ಠಾಣೆಯ ಅಧಿಕಾರಿ, ಸಿಬಂದಿಗೂ ಬರಲಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ವಲಯದ ನೂತನ ಡಿಐಜಿಪಿ ಡಾ| ಎಂ.ಬಿ. ಬೋರಲಿಂಗಯ್ಯ ಹೇಳಿದ್ದಾರೆ.

ಡಿಐಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭ “ಉದಯವಾಣಿ’ ನಡೆಸಿದ ಸಂದರ್ಶನದಲ್ಲಿ ಅವರು ಸೈಬರ್‌ ಅಪರಾಧ, ಡ್ರಗ್ಸ್‌, ಅಪಘಾತಗಳ ತಡೆಗೆ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವ ನಿಲುವನ್ನು ವ್ಯಕ್ತಪಡಿಸಿದ್ದಾರೆ. ­

ಪೊಲೀಸರ ಮೇಲೆ ಜನತೆಯ ವಿಶ್ವಾಸ ವೃದ್ಧಿಗೆ ಏನು ಮಾಡುತ್ತೀರಿ?

ಪೊಲೀಸರು ಜನರಿಗೆ ಸಹಾಯ ಮಾಡುವುದಕ್ಕಾಗಿ ಇರುವವರೆಂಬ ಭಾವನೆ ಮೂಡಿಸಬೇಕಾಗಿದೆ. ಜನಸ್ನೇಹಿ ಪೊಲೀಸಿಂಗ್‌ಗೆ ಆದ್ಯತೆ ನೀಡುತ್ತೇವೆ. ಠಾಣೆಗೆ ಯಾರೇ ಬಂದರೂ ಅಹವಾಲುಗಳನ್ನು ಆಲಿಸಿ ನಿರ್ಲಕ್ಷ್ಯ ತೋರದೆ ಅಗತ್ಯ ಇರುವ ಎಲ್ಲ ಸಂದರ್ಭದಲ್ಲಿಯೂ ಪ್ರಕರಣ ದಾಖಲಿಸಿಕೊಳ್ಳಲಾಗುವುದು.

ಅಕ್ರಮ, ಅಪರಾಧಗಳ ತಡೆಗೆ ತತ್‌ಕ್ಷಣದ ಕ್ರಮ?

ಪ್ರತೀ ಪ್ರದೇಶಕ್ಕೂ ಪೊಲೀಸರ ಭೇಟಿ, ಓಡಾಟವನ್ನು ಕೂಡಲೇ ಹೆಚ್ಚಿಸಲಾಗುವುದು. ನೈಟ್‌ ಬೀಟ್‌, ನೈಟ್‌ ರೌಂಡ್ಸ್‌ ವ್ಯಾಪಕಗೊಳಿಸಲಾಗುವುದು. ನಾಕಾಬಂದಿ ಕೂಡ ಹೆಚ್ಚಿಸಲಾಗುವುದು. ಹಳೆಯ ಪ್ರಕರಣಗಳು, ಆರೋಪಿಗಳ ಮೇಲೆ ನಿಗಾ ಇಡಲಾಗುವುದು.

 ಆನ್‌ಲೈನ್‌ ವಂಚನೆಯಿಂದ ಜನರನ್ನು ಹೇಗೆ ರಕ್ಷಿಸುತ್ತೀರಿ?

ಆನ್‌ಲೈನ್‌, ಡಿಜಿಟಲ್‌ ವ್ಯವಹಾರಗಳು ಹೆಚ್ಚುತ್ತಿರುವ ಜತೆಗೇ ವಂಚನೆ, ಅಪರಾಧಗಳೂ ಹೆಚ್ಚುತ್ತಿವೆ. ಗ್ರಾಮೀಣ ಜನತೆ ಕೂಡ ಸೈಬರ್‌ ವಂಚಕರ ಬಲೆಗೆ ಬೀಳುತ್ತಿದ್ದಾರೆ. ಇದನ್ನು ತಡೆಯಲು ಪೊಲೀಸ್‌ ಮಹಾನಿರ್ದೇಶಕರು ಸ್ಪಷ್ಟ ಸೂಚನೆ ನೀಡಿದ್ದಾರೆ. ಅದರಂತೆ ಪ್ರತೀ ಠಾಣೆಯಲ್ಲಿ ಸೈಬರ್‌ ಅಪರಾಧಗಳ ಪತ್ತೆ, ತಡೆಗೆ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಎಲ್ಲ ಠಾಣೆಯಲ್ಲೂ ಸೈಬರ್‌ ಪ್ರಕರಣಗಳ ನಿರ್ವಹಣೆ, ಪತ್ತೆಗೆ ಪೂರಕವಾಗಿ ಸಬ್‌ ಇನ್‌ಸ್ಪೆಕ್ಟರ್‌, ಕೆಲವು ಸಿಬಂದಿಗೆ ವಿಶೇಷ ತರಬೇತಿ ನೀಡಲಾಗುವುದು. ತುಂಬಾ ಕ್ಲಿಷ್ಟ ಪ್ರಕರಣಗಳನ್ನು ಮಾತ್ರವೇ ಸೈಬರ್‌ ಠಾಣೆಗೆ ವರ್ಗಾಯಿಸಿ ಉಳಿದವನ್ನು ಸ್ಥಳೀಯ ಠಾಣೆಯಲ್ಲೇ ನಿಭಾಯಿಸುವಂತೆ ಠಾಣೆಗಳನ್ನು ಸನ್ನದ್ಧಗೊಳಿಸಲಾಗುವುದು. ­

ಮಾದಕ ಪದಾರ್ಥಗಳು ಹಳ್ಳಿಗಳಿಗೂ ವ್ಯಾಪಿಸುತ್ತಿವೆಯಲ್ಲಾ?

ಹೌದು. ಈ ಬಗ್ಗೆಯೂ ವಿಶೇಷ ನಿಗಾ ಇಡಲಾಗುವುದು. ಜಾಗೃತಿ ಮೂಡಿಸುವ ಜತೆಗೆ ಕಠಿನ ಕಾನೂನು ಕ್ರಮಗಳನ್ನು ಕೂಡ ತೆಗೆದುಕೊಳ್ಳಲಾಗುವುದು. ಮಾದಕ ದ್ರವ್ಯ ಸೇವನೆ ಮಾಡುವವರನ್ನು ಪತ್ತೆಹಚ್ಚಿ ಕೌನ್ಸೆಲಿಂಗ್‌ಗೆ ಒಳಪಡಿಸಲಾಗುವುದು. ಪೂರೈಕೆ ದಾರರ ಮೇಲೆ ಕಠಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಡ್ರಗ್ಸ್‌ ಸಾಮಾಜಿಕ ಪಿಡುಗು. ಇದನ್ನು ಹೋಗಲಾಡಿಸಲು ವಿಶೇಷ ಆದ್ಯತೆ ಅಗತ್ಯ. ಈ ಹಿಂದೆ ಉಡುಪಿ ಎಸ್‌ ಪಿಯಾಗಿ, ಅನಂತರ ಕೆಲವು ದಿನಗಳ ಕಾಲ ದ.ಕ. ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದೆ. ಆ ಸಂದರ್ಭದಲ್ಲಿಯೂ ಕೆಲವು ಡ್ರಗ್ಸ್‌ ಚಟುವಟಿಕೆ ಗಮನಿಸಿ ಕ್ರಮ ಕೈಗೊಂಡಿದ್ದೆ.

 ರಸ್ತೆ ಸಂಚಾರ ಸುರಕ್ಷೆಗೆ ಪೊಲೀಸರ ಕ್ರಮ ಏನು?

ಸಂಚಾರ ನಿಯಮ ಉಲ್ಲಂ ಸುವ ವಾಹನ ಚಾಲಕರು, ಸವಾರರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು. ರಸ್ತೆ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಜೀವ ಕಳೆದುಕೊಳ್ಳುತ್ತಿದ್ದಾರೆ. ರಸ್ತೆಗಳಲ್ಲಿ ಮ್ಯಾಪಿಂಗ್‌ ನಡೆಸಿ ಅಪಘಾತ ತಡೆಗೆ ಎಚ್ಚರಿಕೆ, ಸೂಚನಾ ಫ‌ಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು. ರಸ್ತೆಗಳ ಅವೈಜ್ಞಾನಿಕ ವಿನ್ಯಾಸ, ದುಸ್ಥಿತಿ ಕಾರಣವಾಗಿದ್ದರೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಗುವುದು.

 ಮುಂಬರುವ ಚುನಾವಣೆಗೆ ಸಿದ್ಧತೆ ಹೇಗಿದೆ?

ನಕ್ಸಲ್‌ ಚಟುವಟಿಕೆ ಇದ್ದ ಪ್ರದೇಶಗಳು ಸೇರಿದಂತೆ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಈಗಿಂದಲೇ ಹೆಚ್ಚಿನ ನಿಗಾ ಇಡಲಾಗುತ್ತಿದೆ. ಹೆಚ್ಚುವರಿ ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಾಗುವುದು. ಗಡಿಭಾಗದಲ್ಲಿ ವಿಶೇಷ ಕಣ್ಗಾವಲು ಏರ್ಪಡಿಸಲಾಗುತ್ತಿದೆ. ­

ನೈತಿಕ ಪೊಲೀಸ್‌ಗಿರಿ ತಡೆ ಹೇಗೆ?

ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ. ಕಾನೂನು, ಶಾಂತಿ ಸುವ್ಯವಸ್ಥೆ ನಮ್ಮ ಮೊದಲ ಆದ್ಯತೆ. ಎಲ್ಲರೂ ಇದಕ್ಕೆ ಸಹಕರಿಸುವರೆಂಬ ವಿಶ್ವಾಸವಿದೆ.

ಉದಯವಾಣಿ ಸಂದರ್ಶನ:- ­ಸಂತೋಷ್‌ ಬೊಳ್ಳೆಟ್ಟು

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.