ಪರ್ಯಾಯ ರಸ್ತೆ ಸಂಚಾರ ಪುನರಾರಂಭ 


Team Udayavani, Jun 14, 2018, 4:12 PM IST

14-june-14.jpg

ಉಳ್ಳಾಲ: ಸತತ ಮಳೆಯಿಂದ ಎರಡು ದಿನ ಕಾಲ ಸಂಚಾರ ಸ್ಥಗಿತಗೊಂಡಿದ್ದ ಅಂಬ್ಲಿಮೊಗರು ಮುನ್ನೂರು ಸಂಪರ್ಕಿಸುವ ಅಂಬ್ಲಿಮೊಗರು ಅಡುವಿನಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಪರ್ಯಾಯ ರಸ್ತೆಯಲ್ಲಿ ಬುಧವಾರ ಸಂಚಾರ ಪ್ರಾರಂಭಗೊಂಡಿದ್ದರೂ, ಮಳೆ ಸುರಿದರೆ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಜನರು ಭೀತಿಯಲ್ಲೇ ಪರ್ಯಾಯ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.

ಅಂಬ್ಲಿಮೊಗರು- ಮುನ್ನೂರು ಸಂಪರ್ಕ ಸೇತುವೆಯ ಕಾಮಗಾರಿ ವಿಳಂಬದಿಂದ ಸೋಮವಾರ ಮತ್ತು ಮಂಗಳವಾರ ಸಂಚಾರ ಸ್ಥಗಿತಗೊಂಡಿತ್ತು. ಮಂಗಳವಾರ ಪರ್ಯಾಯ ರಸ್ತೆಯಲ್ಲಿ ಹೆಚ್ಚುವರಿ ಮೋರಿ ನಿರ್ಮಾಣ ಮಾಡಿದ್ದು, ಇನ್ನೊಂದು ಬದಿಯಲ್ಲಿ ಕೃತಕ ನೆರೆಯಾಗಿರುವ ಪ್ರದೇಶದಲ್ಲಿ ಮಣ್ಣು ಹಾಕಿ ನೀರು ರಭಸವಾಗಿ ಹರಿಯದಂತೆ ತಡೆಹಿಡಿಯಲಾಗಿದೆ. ಮಂಗಳವಾರ ಮತ್ತು ಬುಧವಾರ ಮಳೆ ಇಲ್ಲದ ಹಿನ್ನೆಲೆಯಲ್ಲಿ ಬುಧವಾರ ಸಂಚಾರಕ್ಕೆ ಮುಕ್ತಗೊಳಿಸಿದರೂ, ಮಳೆ ಸುರಿದರೆ ರಸ್ತೆ ಕೊಚ್ಚಿ ಹೋಗುವ ಸಾಧ್ಯತೆ ಹೆಚ್ಚಾಗಿದೆ. 

ಗುತ್ತಿಗೆದಾರರು ಇನ್ನೂ ಎಚ್ಚೆತ್ತಿಲ್ಲ
ನೂತನ ಸೇತುವೆ ಕಾಮಗಾರಿ ಅರ್ಧದಲ್ಲಿ ನಿಂತಿದ್ದು, ಬುಧವಾರ ಸೇತುವೆ ಮತ್ತು ರಸ್ತೆಯನ್ನು ಸಂಪರ್ಕಿಸುವ ಖಾಲಿ ಜಾಗದಲ್ಲಿ ಮಣ್ಣು ಹಾಕುವ ಕಾರ್ಯ ನಡೆಯಬೇಕಿತ್ತು. ಪಂಚಾಯತ್‌ ಅಧ್ಯಕ್ಷ ರಫಿಕ್‌ ಇನ್ನು ಮೂರು ದಿನಗಳಲ್ಲಿ ಸಂಚಾರ ಮುಕ್ತ ಮಾಡಬಹುದು ಎಂದು ಹೇಳಿಕೆ ನೀಡಿದರೂ, ಮಣ್ಣು ಹಾಕಿ ಕಾಂಕ್ರೀಟ್‌ ಬೆಡ್‌ ನಿರ್ಮಾಣ ಮಾಡಲು ಇನ್ನೂ ಹತ್ತು ದಿನಗಳ ಆವಶ್ಯಕತೆಯಿದ್ದು, ಇನ್ನೂ ಕಾಮಗಾರಿ ಪ್ರಾರಂಭಗೊಂಡಿಲ್ಲ. 

ಘನ ವಾಹನಗಳನ್ನು ಹೊರತುಪಡಿಸಿ ಬೇರೆ ವಾಹನಗಳಿಗೆ ಸಂಚಾರಕ್ಕೆ ಮುಕ್ತ ಮಾಡಿದರೂ ಹೊಸ ಸೇತುವೆಗೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನುತ್ತಾರೆ ಸ್ಥಳೀಯರಾದ ಲಕ್ಷ್ಮಿನಾರಾಯಣ ಅವರು. ಒಟ್ಟಾರೆಯಾಗಿ ಕಾಮಗಾರಿ ವಿಳಂಬವಾಗಿ ಪ್ರಾರಂಭಿಸಿದರೂ ಕಾಮಗಾರಿಯನ್ನು ನಿಧಾನಗತಿಯಲ್ಲಿ ನಡೆಸಿದ್ದರಿಂದ ಅಂಬ್ಲಿಮೊಗರು, ಮದಕ ಸೇರಿದಂತೆ ಈ ವ್ಯಾಪ್ತಿಯ ಜನರು ಪರದಾಡುವಂತಾಗಿದೆ. ಗುತ್ತಿಗೆದಾರರ ಮತ್ತು ಅಧಿಕಾರಿಗಳ ಅಸಡ್ಡೆಯಿಂದ ಎರಡು ಕಿ.ಮೀ. ವ್ಯಾಪ್ತಿಯನ್ನು ಕ್ರಮಿಸುವ ಜನರು ಏಳು ಕಿ.ಮೀ. ದೂರ ಕ್ರಮಿಸುವಂತಾಗಿದೆ.

ಗದ್ದೆಗೆ ಹಾನಿ
ಸೇತುವೆ ನಿರ್ಮಾಣದಿಂದ ಪಕ್ಕದ ಖಾಸಗಿ ಗದ್ದೆಯಲ್ಲಿ ಪರ್ಯಾಯ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ಪರ್ಯಾಯ ರಸ್ತೆಯಲ್ಲಿ ಸಂಚಾರಕ್ಕೆ ತಡೆಯಾದಾಗ ಇಡೀ ಗದ್ದೆಯಲ್ಲಿ ಕಲ್ಲು ಮಣ್ಣು ತುಂಬಿಸಿದ್ದು, ಇದೀಗ ಹೊಸ ಮೋರಿ ನಿರ್ಮಾಣ ಮಾಡಿ ನೀರು ಪಕ್ಕದ ಗದ್ದೆಗಳಿಗೆ ಬಿಟ್ಟಿದ್ದು ಗದ್ದೆಗಳಿಗೆ ಹಾನಿಯಾಗಿದೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.