ಅಮರಸುಳ್ಯ ದಂಗೆ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ

ತಿರಂಗಾ ಯಾತ್ರೆಗೆ ಚಾಲನೆ ನೀಡಿ ಶಾಸಕ ವೇದವ್ಯಾಸ ಕಾಮತ್‌

Team Udayavani, Aug 15, 2022, 8:47 AM IST

ಅಮರಸುಳ್ಯ ದಂಗೆ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ

ಮಂಗಳೂರು : ಬ್ರಿಟಿಷರ ವಿರುದ್ಧ ಜಿಲ್ಲೆಯಲ್ಲಿ 1837ರಲ್ಲಿ ನಡೆದಿದ್ದ ಅಮರ ಸುಳ್ಯ ದಂಗೆ ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು ಇತಿಹಾಸದಲ್ಲಿ ಇದಕ್ಕೆ ಪ್ರಾಶಸ್ತ್ಯ ಸಿಗದಿರುವುದು ದುರದೃಷ್ಟಕರ ಎಂದು ಶಾಸಕ ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಅಮರ ಸುಳ್ಯ ದಂಗೆಯ ಹೋರಾಟಗಾರರನ್ನು ಗಲ್ಲಿಗೇರಿಸಿದ್ದ ಬಿಕರ್ನಕಟ್ಟೆ ಯಲ್ಲಿ ಸ್ವಾತಂತ್ರ್ಯದ 75ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ರವಿವಾರ ಜರಗಿದ ತಿರಂಗಾ ಯಾತ್ರೆಯ ನ್ನುದ್ದೇಶಿಸಿ ಅವರು ಮಾತನಾಡಿದರು.

ಅಂದು ಬ್ರಿಟಿಷರನ್ನು ಹೊಡೆದೋ ಡಿಸಿ ಬಾವುಟಗುಡ್ಡೆಯಲ್ಲಿ ದೇಶದ ಮೊಟ್ಟ ಮೊದಲ ಸ್ವಾತಂತ್ರ್ಯ ಬಾವುಟ 13 ದಿನಗಳ ಕಾಲ ರಾರಾಜಿಸಿತ್ತು. ಕೆದಂಬಾಡಿ ರಾಮಯ್ಯ ಗೌಡ, ಗುಡ್ಡೆಮನೆ ಅಪ್ಪಯ್ಯ ಗೌಡ, ಕಟ್ಟಿಮನೆ ಅಪ್ಪಯ್ಯ ಗೌಡರು, ಸುಬ್ರಾಯ ಹೆಗ್ಡೆ, ಕಲ್ಯಾಣಪ್ಪ, ಬಂಗರಸು, ಮಂಜಯ್ಯ ಮುಂತಾದವರು ನೇತೃತ್ವ ವಹಿಸಿದ್ದರು ಎಂದು ವಿವರಿಸಿದರು.

ಬಳಿಕ ನಡೆದ ಹೋರಾಟದಲ್ಲಿ ಹೋರಾಟಗಾರಿಗೆ ಸೋಲಾಗಿತ್ತು. ಹೋರಾಟದ ನೇತೃತ್ವ ವಹಿಸಿದ್ದ ಕಲ್ಯಾಣಪ್ಪ, ಬಂಗರಸು, ಮಂಜಯ್ಯ, ಬೀರಣ್ಣ, ಮುತ್ತಣ ಅವರನ್ನು ಬಿಕರ್ನಕಟ್ಟೆಯಲ್ಲಿ ಭೀಕರವಾಗಿ ಗಲ್ಲಿಗೇರಿಸಲಾಯಿತು. ಕೆದಂಬಾಡಿ ರಾಮಯ್ಯ ಗೌಡ ಅವರನ್ನು ವಿದೇಶಕ್ಕೆ ಗಡೀಪಾರು ಮಾಡಲಾಯಿತು. ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಮಡಿಕೇರಿಯಲ್ಲಿ ಗಲ್ಲಿಗೇರಿಸಲಾ ಯಿತು. ಕಟ್ಟಿಮನೆ ಅಪ್ಪಯ್ಯ ಗೌಡರು ಹುತಾತ್ಮರಾಗಿದ್ದರು. ಇದೇ ರೀತಿ ಸ್ವಾತಂತ್ರ್ಯಕ್ಕಾಗಿ ಪೋರ್ಚುಗೀಸರ ವಿರುದ್ಧ ಹೋರಾಟ ನಡೆಸಿದ್ದ ಉಳ್ಳಾಲದ ರಾಣಿ ಅಬ್ಬಕ್ಕ ಅವರನ್ನು ಕೂಡ ಸ್ಮರಿಸಬೇಕಾಗಿದೆ ಎಂದರು.

ಬಿಕರ್ನಕಟ್ಟೆಯಲ್ಲಿ ತಿರಂಗಾ ಯಾತ್ರೆ
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಇತಿಹಾಸವನ್ನು ನೆನಪಿಸುವ ಮುಂದಿನ ಪೀಳಿಗೆಗೆ ಕಟ್ಟಿಕೊಡುವ ನಿಟ್ಟಿನಲ್ಲಿ ಇಂದು ಬಿಕರ್ನಕಟ್ಟೆಯಲ್ಲಿ ತಿರಂಗಾ ಯಾತ್ರೆ ನಡೆಸಲಾಗಿದೆ ಎಂದರು. ಹಿರಿಯರಾದ ಪದವು ಮೇಗಿನಮನೆ ಉಮೇಶ್‌ ರೈ ಬಿಕರ್ನಕಟ್ಟೆಯ ಮುಂಭಾಗದಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಸಿದರು.

ಮೇಯರ್‌ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ, ಮುಖಂಡರಾದ ಮೋನಪ್ಪ ಭಂಡಾರಿ, ನಿತಿನ್‌ ಕುಮಾರ್‌, ರವಿಶಂಕರ ಮಿಜಾರು, ಕಸ್ತೂರಿ ಪಂಜ, ಸುಧೀರ್‌ ಶೆಟ್ಟಿ, ಜಗದೀಶ ಶೇಣವ, ರಮೇಶ್‌ ಕಂಡೆಟ್ಟು, ವಿಕಾಸ್‌ ಪುತ್ತೂರು, ಸುಧಾಕರ ಅಡ್ಯಾರ್‌, ಕಾವ್ಯ ನಟರಾಜ್‌, ಕಟ್ಟಿಮನೆ ಅಪ್ಪಯ ಗೌಡರ ವಂಶಸ್ಥ ಅನಿಂದಿತ್‌ ಗೌಡ ಉಪಸ್ಥಿತರಿದ್ದರು.

ಇತಿಹಾಸದ ಪುಟಗಳಲ್ಲಿ ಮೆರೆಯಲಿ
ಅಮರ ಸುಳ್ಯ ದಂಗೆಯ ಬಗ್ಗೆ ಯಾರೂ ಕೂಡ ಮಾತನಾಡಬಾರದು, ಇದನ್ನು ಎಲ್ಲೂ ಉಲ್ಲೇಖ ಮಾಡಬಾರದು ಮತ್ತು ಪ್ರಚಾರ ಮಾಡಬಾರದು, ಉಲ್ಲಂಘಿಸಿದವರನ್ನು ಗಲ್ಲಿಗೇರಿಸಲಾಗುವುದು ಎಂದು ಬ್ರಿಟಿಷರು ಆದೇಶ ಹೊರಡಿಸಿ ಇತಿಹಾಸವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದ್ದರು. ಆದರೆ ಇತಿಹಾಸದ ಪುಟಗಳಲ್ಲಿ ಅಮರ ಸುಳ್ಯ ದಂಗೆ ಅಮರವಾಗಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಶೀಘ್ರದಲ್ಲೇ ಸ್ಥಾಪನೆಯಾಗಲಿದೆ ಎಂದು ವೇದವ್ಯಾಸ ಕಾಮತ್‌ ಹೇಳಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.