ನಗರದಲ್ಲೊಂದು ವಿನೂತನ “ಆಪರೇಷನ್‌’; ಮರ ಸ್ಥಳಾಂತರ ಸ್ವರೂಪದಲ್ಲೇ “ಮೀನು’ ಸ್ಥಳಾಂತರ!


Team Udayavani, Nov 26, 2022, 8:16 AM IST

2

ಕೊಡಿಯಾಲಬೈಲ್‌: ಈಗಾಗಲೇ ನಗರದ ಹಲವು ಮರಗಳ ಸ್ಥಳಾಂತರ ಕಾರ್ಯ ನಡೆದಿದೆ. ಆದರೆ ಇದೀಗ ವಿಶೇಷ ಎಂಬಂತೆ ಮೀನುಗಳನ್ನು ಕೂಡ ಒಂದು ಕಡೆಯಿಂದ ಸಂರಕ್ಷಿಸಿ ಮತ್ತೂಂದು ಕಡೆ ಬಿಡುವ ಮಾದರಿ ಕೆಲಸ ನಡೆಯುತ್ತಿದೆ.

ಕೊಡಿಯಾಲಬೈಲ್‌ ಬಳಿಯ ಟಿಎಂಎ ಪೈ ಕನ್ವೆನ್ಷನ್ ಸೆಂಟರ್‌ ಮುಂಭಾಗದ ನಿರ್ಮಾಣ ಹಂತದ ಕಟ್ಟಡದ ತಳಭಾಗ ತುಂಬಿಕೊಂಡಿದ್ದ ನೀರಿನಲ್ಲಿದ್ದ ಸಾವಿರಾರು ಮೀನು ಮತ್ತು ಮೀನಿನ ಮರಿಗಳನ್ನು ಸಂರಕ್ಷಣೆ ಮಾಡಿ ನಗರದ ವಿವಿಧ ಕೆರೆಗಳಿಗೆ ಬಿಡುವ ನಿಟ್ಟಿನಲ್ಲಿ ಕೆಲಸಗಳು ಸಾಗುತ್ತಿದೆ. ಈಗಾಗಲೇ ಸುಮಾರು 6ರಿಂದ 7 ಸಾವಿರ ಮೀನುಗಳನ್ನು ರಕ್ಷಿಸಿ ನಗರದ ಗುಜ್ಜರಕೆರೆಗೆ ಬಿಡಲಾಗಿದೆ. ಇನ್ನೂ ಸುಮಾರು 6 ಸಾವಿರಕ್ಕೂ ಹೆಚ್ಚಿನ ಮೀನುಗಳು ಅಲ್ಲಿವೆ. ಅವುಗಳನ್ನು ಗುಜ್ಜರಕೆರೆ, ಕಾವೂರು ಕೆರೆಗಳಿಗೆ ಬಿಡಲು ನಿರ್ಧರಿಸಲಾಗಿದೆ. ‌

ಮಂಗಳೂರಿನ ಪರಿಸರ ಪ್ರೇಮಿಗಳಾದ ಜೀತ್‌ ಮಿಲನ್‌ ರೋಚ್‌, ಭುವನ್‌, ಅತಿಕ್‌, ಸೆಲ್ಮಾ ಮತ್ತು ನಿಧಿ ಅವರು ಈ ಕಾರ್ಯಾ ಚರಣೆಯಲ್ಲಿ ಭಾಗಿಯಾಗಿದ್ದಾರೆ. ಕೆಲವು ದಿನಗಳಿಂದ ಬೆಳಗ್ಗೆಯಿಂದ ಸಂಜೆಯವರೆಗೆ ಈ ಕೆಲಸ ನಿರಂತರವಾಗಿ ಸಾಗುತ್ತಿದೆ.

ಎಲ್ಲಿತ್ತು ಇಷ್ಟು ಮೀನು? ಕೆಲವು ವರ್ಷಗಳಿಂದ ಅರ್ಧದಲ್ಲೇ ಕಾಮಗಾರಿ ಸ್ಥಗಿತಗೊಂಡ ಈ ಕಟ್ಟಡದಲ್ಲಿ ಮಳೆಗಾಲ ಪೂರ್ತಿ ನೀರು ನಿಲ್ಲುತ್ತಿತ್ತು. ಸಾಂಕ್ರಾಮಿಕ ರೋಗ ತಪ್ಪಿಸಲು, ಸೊಳ್ಳೆ ಉತ್ಪತ್ತಿಯಾಗಬಾರದು ಎಂಬ ನಿಟ್ಟಿನಲ್ಲಿ ಮಂಗಳೂರು ಪಾಲಿಕೆಯಿಂದ ಗಪ್ಪಿ ಮೀನಿನ ಮರಿಗಳನ್ನು ಹಾಕಿದ್ದರು. ಅವುಗಳು ಈಗ ದೊಡ್ಡದಾಗಿದೆ. ಅಲ್ಲಿ ಸುಮಾರು 10,000ಕ್ಕೂ ಹೆಚ್ಚಿನ ಮೀನುಗಳಿವೆ. ಇದೀಗ ಆ ಭಾಗದಲ್ಲಿ ಶೇಖರಣೆಯಾಗಿದ್ದ ನೀರು ಖಾಲಿ ಮಾಡಲಾಗುತ್ತಿದೆ. ಬಲೆಯನ್ನು ಉಪ ಯೋಗಿಸಿ ನೀರಿನಲ್ಲಿದ್ದ ಮೀನುಗಳನ್ನು ಹಿಡಿಯ ಲಾಗಿದೆ. ಹಿಡಿದ ಮೀನನ್ನು ನೀರು ತುಂಬಿದ ಟ್ರೇಗೆ ಹಾಕಲಾಗುತ್ತದೆ. ಹೀಗೆ ಕೆಲವು ಟ್ರೇ ತುಂಬಿದ ಕೂಡಲೇ ಕೆಲವು ನಿಮಿಷಗಳ ಅವಧಿಯಲ್ಲಿ ಆ ಮೀನನ್ನು ಕಾರಿನಲ್ಲಿ ಸಾಗಿಸಿ, ಕೆರೆಗೆ ಹಾಕಲಾಗುತ್ತಿದೆ.

ಉದ್ಯಮಿ ಧೀರಜ್‌ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ಪ್ರತಿಯೊಂದರ ಜೀವವೂ ಮುಖ್ಯ. ಹೀಗಿರುವಾಗ ಮೀನುಗಳನ್ನು ಸಂರಕ್ಷಿಸ ಬೇಕು ಎಂಬ ಯೋಚನೆ ನನಗೆ ಬಂತು. ಆ ಹಿನ್ನೆಲೆಯಲ್ಲಿ ಜೀತ್‌ ಅವರ ಬಳಿ ಕೇಳಿಕೊಂಡಾಗ ಅವರೂ ಒಪ್ಪಿದರು. ಇದೊಂದು ಪುಣ್ಯ ಕಾರ್ಯವಾಗಿದ್ದು, ಇದೇ ರೀತಿ, ಸಣ್ಣ ಸಣ್ಣ ಕೆಲಸವೇ ಖುಷಿ ಸಿಗುತ್ತದೆ’ ಎನ್ನುತ್ತಾರೆ.

ಮೀನುಗಳ ಸಂರಕ್ಷಣೆ: ನಿರ್ಮಾಣ ಹಂತದ ಕಟ್ಟಡದಲ್ಲಿ ಸುಮಾರು 10,000ಕ್ಕೂ ಹೆಚ್ಚಿನ ಮೀನುಗಳಿವೆ. ಅವುಗಳನ್ನು ಅಲ್ಲಿಂದ ಸಂರಕ್ಷಿಸಲಾಗುತ್ತಿದೆ. ಎರಡು ದಿನಗಳಿಂದ ಈ ಕೆಲಸ ನಡೆಯುತ್ತಿದೆ. ಸಂರಕ್ಷಿಸಿದ ಮೀನುಗಳನ್ನು ನಗರದ ಕಾವೂರು, ಗುಜ್ಜರಕೆರೆಗಳಿಗೆ ಬಿಡಲಾಗುತ್ತಿದೆ. –ಭುವನ್‌, ಪರಿಸರ ಪ್ರೇಮಿ 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.