“ಪ್ರಾಚೀನ ತುಳು ಭಾಷೆಗೆ ಅಧಿಕೃತ ಮನ್ನಣೆ ಸಿಗಬೇಕಿದೆ’
Team Udayavani, Feb 28, 2020, 11:39 PM IST
ಮಹಾನಗರ: ಪಂಚ ದ್ರಾವೀಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಗೆ ಸಿಗಬೇಕಾದ ಮನ್ನಣೆ, ಸ್ಥಾನಮಾನ, ಗೌರವ ಇನ್ನೂ ಸಿಕ್ಕಿಲ್ಲ. ಅತ್ಯಂತ ಪ್ರಾಚೀನ ಭಾಷೆಯಾದ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರದಿರುವುದು ಖೇದಕರ ಎಂದು ಹಿರಿಯ ಸಾಹಿತಿ ಡಾ| ವಾಮನ ನಂದಾವರ ಹೇಳಿದರು.
ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ತುಳುಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಬಹುಭಾಷಾ ಕವಿ ಮಹಮ್ಮದ್ ಬಡೂxರು, ಮೊಗ ಮೂರ್ತಿ ಲೋಹ ಶಿಲ್ಪಿ ಕುಂಞಿ ರಾಮನ್ ಅವರಿಗೆ ಚಾವಡಿ ಸಮ್ಮಾನ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಮಾತನಾಡಿ, ತುಳು ಭಾಷಾ ಸಂಸ್ಕೃತಿ ವಿಶಾಲವಾದುದು. ಆದರೂ ತುಳು ಭಾಷೆಗೆ ದೊರಕಬೇಕಾದ ಸ್ಥಾನಮಾನ ಇನ್ನೂ ಸಿಕ್ಕಿಲ್ಲ ಎಂಬುವುದು ಬೇಸರದ ಸಂಗತಿ. ಭಾಷೆಗೆ ಅಧಿಕೃತ ಸ್ಥಾನಮಾನ ಸಿಗುವ ನಿಟ್ಟಿನಲ್ಲಿ 2003ರಲ್ಲಿ ತುಳು ಸಹಿತ ಒಟ್ಟು 4 ಭಾಷೆಗಳು ಸಾಲಿನಲ್ಲಿದ್ದವು. ಅದರಲ್ಲಿ 3 ಭಾಷೆಗಳಿಗೆ ಸ್ಥಾನಮಾನ ಸಿಕ್ಕಿತ್ತು. ಆದರೆ ತುಳು ಭಾಷೆ ಮಾತ್ರ ಹಿಂದುಳಿಯಿತು ಎಂದರು.
ತಮ್ಮನ ಸ್ವೀಕರಿಸಿದ ಸಾಹಿತಿ ಮಹಮ್ಮದ್ ಬಡೂxರು ಮಾತನಾಡಿ, ತುಳುನಾಡಿನಲ್ಲಿರುವ ಎಲ್ಲರೂ ತುಳುವರು. ತುಳುನಾಡು ಒಂದು ಮನೆ ಇದ್ದ ಹಾಗೆ. ಈ ಭಾಷೆಯನ್ನು ಉಳಿಸಿ, ಬೆಳೆಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕು ಎಂದರು.
ಮಂಗಳೂರು ವಿ.ವಿ. ನಾರಾಯಣ ಗುರು ಅಧ್ಯಯನ ಪೀಠದ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಉಪಸ್ಥಿತರಿದ್ದರು. ತುಳು ಸಾ. ಅ. ರಿಜಿಸ್ಟ್ರಾರ್ ರಾಜೇಶ್ ಜಿ. ಸ್ವಾಗತಿಸಿದರು. ಅಕಾಡೆಮಿ ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ, ಅಕಾಡೆಮಿ ಸದಸ್ಯರಾದ ಚೇತನ್ ಪೂಜಾರಿ, ತಾರಾ ಉಮೇಶ ಆಚಾರ್ಯ ಸಮ್ಮಾನಿತರರನ್ನು ಪರಿಚಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ