ಗೂಡ್ಸ್ ಎಂಜಿನ್‌ಗಳಿಂದ ಹ್ಯೊಗೆ ಬಜಾರ್‌ನಲ್ಲಿ ಕಿರಿಕಿರಿ!

ತಪಾಸಣೆ ನಡೆಸಿಯೂ ಸುಮ್ಮನಿರುವ ಅಧಿಕಾರಿಗಳು

Team Udayavani, Mar 31, 2022, 11:11 AM IST

goods

ಹ್ಯೊಗೆಬಜಾರ್‌: ಬಂದರ್‌ನ ರೈಲ್ವೇ ಗೂಡ್‌ಶೆಡ್‌ಗೆ ತೆರಳುವ ರೈಲು ಹಳಿಯಲ್ಲಿ ಅನಾವಶ್ಯಕವಾಗಿ ರೈಲು ಎಂಜಿನ್‌ಗಳ ಓಡಾಟದಿಂದಾಗಿ ಜನರಿಗೆ ನಿತ್ಯ ಸಮಸ್ಯೆ ಆಗುತ್ತಿರುವ ಜತೆಗೆ, ಹ್ಯೊಗೆಬಜಾರ್‌ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ನಾಗರಿಕರಿಗೆ ಶಬ್ದ ಮಾಲಿನ್ಯದ ಕಿರಿಕಿರಿ ಉಂಟಾಗಿದೆ!

ರೈಲ್ವೇ ಗೂಡ್ಸ್‌ಶೆಡ್‌ ಭಾಗದಲ್ಲಿ ಮೂರು ಸಮಾನಾಂತರ ರೈಲು ಹಳಿಗಳಿದ್ದು ಗೂಡ್ಸ್‌ ಬೋಗಿಗಳನ್ನು ಹಾಗೂ ಎಂಜಿನ್‌ ಇರಿಸಲು ಅಲ್ಲಿ ಸ್ಥಳಾವಕಾಶವಿದೆ. ಆದರೆ ಗೂಡ್ಸ್‌ ಬೋಗಿಗಳನ್ನು ಗೂಡ್ಸ್‌ಶೆಡ್‌ ಭಾಗದಲ್ಲಿ ಇರಿಸಿ ಕೇವಲ ಎಂಜಿನ್‌ ಮಾತ್ರ ಹ್ಯೊಗೆಬಜಾರ್‌ ಜನವಸತಿ ಭಾಗದಲ್ಲಿ ಸತತವಾಗಿ ಚಾಲೂ ಸ್ಥಿತಿಯಲ್ಲಿ ಇರಿಸಲಾಗುತ್ತದೆ; ಜತೆಗೆ ಹಾರ್ನ್ ಮೂಲಕ ಸ್ಥಳೀಯರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂಬುದು ಸ್ಥಳೀಯರ ಆರೋಪ.

ಗೂಡ್ಸ್‌ ರೈಲಿನಿಂದಾಗಿ ಸ್ಥಳೀಯರಿಗೆ ಆಗುತ್ತಿರುವ ಶಬ್ದಮಾಲಿನ್ಯದ ಬಗ್ಗೆ ಸ್ಥಳೀಯರು ದ.ಕ. ಜಿಲ್ಲಾಧಿಕಾರಿಯವರಿಗೆ ಕಳೆದ ವರ್ಷ ಫೆ. 3ರಂದು ಮನವಿ ಸಲ್ಲಿಸಿದ್ದರು.

ಇದರಂತೆ ಸ್ಥಳ ಪರಿಶೀಲನೆ ನಡೆಸಿ ಅವಲೋಕಿಸಿ ವರದಿ ನೀಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿಯವರಿಗೆ ಫೆ. 15ರಂದು ಜಿಲ್ಲಾಡಳಿತದಿಂದ ಸೂಚಿಸಲಾಗಿತ್ತು. ಅದರಂತೆ ಮಾ. 12, 13ರಂದು ಸ್ಥಳದಲ್ಲಿ ಶಬ್ದ ಮಾಲಿನ್ಯದ ಕುರಿತು ಪರಿಸರ ಇಲಾಖಾ ಅಧಿಕಾರಿಗಳು ತಪಾಸಣೆ ನಡೆಸಿ ಎ. 21ರಂದು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದರು. ಶಬ್ದ ಮಾಲಿನ್ಯ ಆಗುತ್ತಿರುವ ಅಂಶಗಳನ್ನು ಈ ವರದಿಯಲ್ಲಿ ಉಲ್ಲೇಖೀಸಲಾಗಿತ್ತು. ಆದರೆ ಆ ಬಳಿಕ ಈ ವಿಚಾರ ಮುನ್ನೆಲೆಗೆ ಬಂದೇ ಇಲ್ಲ!

ಸ್ಥಳೀಯರ ಸಮಸ್ಯೆಗೆ ಪರಿಹಾರ ನೀಡುವಂತೆ ಆಗ್ರಹಿಸಿ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರು, ಮಂಗಳೂರು ಪಾಲಿಕೆ, ಮೇಯರ್‌, ಕಾರ್ಪೊರೇಟರ್‌, ರೈಲ್ವೇ ಅಧಿಕಾರಿಗಳು ಸಹಿತ ಹಲವು ವಿಭಾಗಗಳಿಗೆ ಮನವಿ ನೀಡಿದ್ದರೂ ಇನ್ನೂ ಪರಿಹಾರ ಮಾತ್ರ ದೊರಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳೀಯರ ಸಮಸ್ಯೆಗೆ ಪರಿಹಾರವೇ ಇಲ್ಲ

ಗೂಡ್ಸ್‌ಶೆಡ್‌ಗೆ ಬರುವ ರೈಲ್ವೇ ಗೂಡ್ಸ್‌ಗಳ ಕೇವಲ ಎಂಜಿನ್‌ಗಳನ್ನು ಹೊಗೆಬಜಾರ್‌ ಪರಿಸರದಲ್ಲಿ ಅತ್ತಿಂದಿತ್ತ ಓಡಿಸುತ್ತ ಹಾಗೂ ರಾತ್ರಿ ಹ್ಯೊಗೆಬಜಾರ್‌ ವ್ಯಾಪ್ತಿಯ ಹಳಿಯಲ್ಲಿ ನಿಲ್ಲಿಸಿ ಕರ್ಕಶ ಶಬ್ದ ಮಾಡುವ ಪರಿಪಾಠದಿಂದ ಸ್ಥಳೀಯರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ಸ್ಥಳೀಯಾಡಳಿತಕ್ಕೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಿರಿಯರು, ಮಕ್ಕಳ ಬವಣೆಗೆ ಇಲ್ಲಿ ಪರಿಹಾರವೇ ಸಿಕ್ಕಿಲ್ಲ. ಕೆ.ಜೆ. ಪಿಂಟೋ, ಸ್ಥಳೀಯರು, ಹ್ಯೊಗೆಬಜಾರ್‌

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.