ಎನ್‌ಎಂಪಿಟಿಯಲ್ಲಿ ನಿರ್ಮಾಣಗೊಳ್ಳಲಿದೆ ಇನ್ನೊಂದು ಹೊಸ ಜೆಟ್ಟಿ


Team Udayavani, Oct 21, 2020, 2:08 AM IST

ಎನ್‌ಎಂಪಿಟಿಯಲ್ಲಿ ನಿರ್ಮಾಣಗೊಳ್ಳಲಿದೆ ಇನ್ನೊಂದು ಹೊಸ ಜೆಟ್ಟಿ

ಮಂಗಳೂರು: ಕರಾವಳಿಯಲ್ಲಿ ಇನ್ನಷ್ಟು ಸರಕು ತುಂಬಿದ ಹಡಗುಗಳ ನಿರ್ವಹಣೆಯ ಉದ್ದೇಶದಿಂದ ನವಮಂಗಳೂರು ಬಂದರಿನಲ್ಲಿ (ಎನ್‌ಎಂಪಿಟಿ) ಮತ್ತೂಂದು ನೂತನ ಜೆಟ್ಟಿ (ಬರ್ತ್‌) ನಿರ್ಮಾಣಕ್ಕೆ ಕೇಂದ್ರ ಸರಕಾರ ನಿರ್ಧಾರ ಕೈಗೊಂಡಿದೆ.

ಎನ್‌ಎಂಪಿಟಿಯಲ್ಲಿ ಸದ್ಯ 1ರಿಂದ 16 ಜೆಟ್ಟಿಗಳಿದ್ದು, ಮುಂದೆ 17ನೇ ಜೆಟ್ಟಿಯನ್ನು ಸಾಗರಮಾಲಾ ಯೋಜನೆಯಲ್ಲಿ 150 ಕೋ.ರೂ. ವೆಚ್ಚದಲ್ಲಿ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಎನ್‌ಎಂಪಿಟಿ ಹಾಗೂ ಉದ್ದಿಮೆದಾರರ ಪ್ರಸ್ತಾವನೆಯ ಮೇರೆಗೆ ಹೊಸ ಜೆಟ್ಟಿ ಅನುಷ್ಠಾನವಾಗಲಿದೆ.

ಎನ್‌ಎಂಪಿಟಿಯ ಕುದುರೆ ಮುಖ ಜೆಟ್ಟಿಯ ಸಮೀಪ ನೂತನ ಜೆಟ್ಟಿ ನಿರ್ಮಾಣವಾಗುವ ನಿರೀಕ್ಷೆ ಯಿದೆ. ಇದಕ್ಕಾಗಿ ಸುಮಾರು 14 ಮೀ. ಆಳ ಡ್ರೆಜ್ಜಿಂಗ್‌ ಮಾಡಬೇಕಾ ಗಿದೆ. ಜತೆಗೆ ಸಾಮಗ್ರಿಗಳ ನಿರ್ವಹಣೆಗಾಗಿ ಕಾಂಕ್ರೀಟ್‌ ಜೆಟ್ಟಿ ಬೇಕಿದೆ. ಹೊಸ ಜೆಟ್ಟಿ ಆದ ಬಳಿಕ ಇದರಲ್ಲಿ ಕಬ್ಬಿಣದ ಅದಿರು ನಿರ್ವಹಿ ಸುವ ಹಡಗು ನಿಲುಗಡೆಗೆ ಅವಕಾಶ ದೊರೆಯುವ ಸಾಧ್ಯತೆಯಿದೆ.

ಎಂಆರ್‌ಪಿಎಲ್‌, ಎಂಸಿಎಫ್‌, ಕುದುರೆಮುಖ, ಬಿಎಎಸ್‌ಎಫ್‌, ಎಚ್‌ಪಿಸಿಎಲ್‌, ಪಡುಬಿದ್ರಿಯ ಅದಾನಿ ಸಹಿತ ಹಲವಾರು ದೊಡ್ಡ, ಮಧ್ಯಮ, ಸಣ್ಣ ಕೈಗಾರಿಕೆಗಳಿಗೆ ಮೂಲ ನವಮಂಗಳೂರು ಬಂದರು. ಇಲ್ಲಿಂದಲೇ ಕಚ್ಚಾ ವಸ್ತುಗಳು ಆಮದು- ರಫ್ತು ಆಗುತ್ತವೆ. ಹೀಗಾಗಿ ಬೃಹತ್‌ ಪ್ರಮಾಣದ ಹಡಗುಗಳು ಸರಕುಗಳೊಂದಿಗೆ ಎನ್‌ಎಂಪಿಟಿಗೆ ಆಗಮಿಸುತ್ತವೆ. ಹಡಗುಗಳ ನಿಲುಗಡೆಗಾಗಿ ಸದ್ಯ ಎನ್‌ಎಂಪಿಟಿಯಲ್ಲಿ 1ರಿಂದ 16 ಪ್ರತ್ಯೇಕ ಜೆಟ್ಟಿಗಳಿವೆ. ಈ ಪೈಕಿ 1, 2, 3, 6, 7 ಹಾಗೂ 14ನೇ ಜೆಟ್ಟಿಯಲ್ಲಿ ಸಾಮಾನ್ಯ ಸರಕು ಆಗಮನ-ನಿರ್ಗಮನವಾಗುತ್ತದೆ. 4ನೇ ಜೆಟ್ಟಿಯಲ್ಲಿ ದ್ರವೀಕೃತ ಅಮೋನಿಯ, 5ರಲ್ಲಿ ಸಿಮೆಂಟ್‌, ಖಾದ್ಯ ತೈಲ, 8ರಲ್ಲಿ ಕಲ್ಲಿದ್ದಲು, ಕಬ್ಬಿಣದ ಅದಿರು, 9ರಲ್ಲಿ ಎಲ್‌ಪಿಜಿ, 10, 11ರಲ್ಲಿ ಕಚ್ಚಾ ತೈಲ, 12, 13ರಲ್ಲಿ ಪೆಟ್ರೋಲಿಯಂ ಉತ್ಪನ್ನ, ಎಲ್‌ಪಿಜಿ ನಿರ್ವಹಣೆ ಮಾಡಲಾಗುತ್ತದೆ.

ರಫ್ತು-ಆಮದು
ತೈಲೋತ್ಪನ್ನ, ಗ್ರಾನೈಟ್‌ ಶಿಲೆಗಳು, ಆಹಾರ ಧಾನ್ಯ, ಕಬ್ಬಿಣದ ಅದಿರಿನ ಉಂಡೆಗಳು, ಕಾರ್ಗೋಗಳು ಇಲ್ಲಿಂದ ರಫ್ತಾಗುತ್ತವೆ. ಎಂಆರ್‌ ಪಿಎಲ್‌ಗಾಗಿ ಕಚ್ಚಾತೈಲ, ಉಳಿದಂತೆ ಮರದ ದಿಮ್ಮಿಗಳು, ಕಾರ್ಗೊ ಪಾರ್ಸೆಲ್‌ಗ‌ಳು, ಘನೀಕೃತ ಪುಡಿಗಳು, ಸಿಮೆಂಟ್‌, ಕಲ್ಲಿದ್ದಲು, ರಸಗೊಬ್ಬರ, ಅಡುಗೆ ಎಣ್ಣೆ, ರಾಸಾಯನಿಕ ದ್ರವಗಳು ಮುಂತಾದ ಕಾರ್ಗೊ ರಫ್ತುಗಳು, ಕಬ್ಬಿಣ ಅದಿರಿನ ಉಂಡೆಗಳು, ಗ್ರಾನೈಟ್‌, ಮೈದಾ, ತೈಲೋತ್ಪನ್ನಗಳು, ಕಾಫಿ, ಸಂಸ್ಕರಿತ ಗೋಡಂಬಿ ಇತ್ಯಾದಿಗಳನ್ನು ಆಮದು ಮಾಡಲಾಗುತ್ತದೆ.

3 ಖಾಸಗಿ ಹಿಡಿತದಲ್ಲಿ !
ಎನ್‌ಎಂಪಿಟಿಯಲ್ಲಿರುವ 15ನೇ ಜೆಟ್ಟಿಯನ್ನು ಯುಪಿಸಿಎಲ್‌ ಪಡೆದಿರುವುದರಿಂದ ಸದ್ಯ ಇದನ್ನು ಅದಾನಿ ಸಂಸ್ಥೆ ನಿರ್ವಹಿಸುತ್ತಿದೆ. 16ನೇ ಜೆಟ್ಟಿಯನ್ನು ಇತ್ತೀಚೆಗೆ ಚೆಟ್ಟಿನಾಡ್‌ ಸಂಸ್ಥೆಗೆ ನೀಡಲಾಗಿದೆ. 14ನೇ ಜೆಟ್ಟಿಯನ್ನು ಜೆಎಸ್‌ಡಬ್ಲ್ಯೂ ಕಂಪೆನಿಗೆ ನೀಡುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ಉಳಿದ ಜೆಟ್ಟಿಗಳನ್ನು ಎನ್‌ಎಂಪಿಟಿ ನಿರ್ವಹಿಸುತ್ತಿದೆ. ನವಮಂಗಳೂರು ಬಂದರಿನಲ್ಲಿ ಇನ್ನೊಂದು ಹೊಸ ಜೆಟ್ಟಿ ನಿರ್ಮಾಣಕ್ಕೆ ಸಾಗರ ಮಾಲಾ ಯೋಜನೆಯಲ್ಲಿ ನಿರ್ಧರಿಸಲಾಗಿದೆ. ಈ ಮೂಲಕ ಎನ್‌ಎಂಪಿಟಿಯಲ್ಲಿ ಸರಕು ಆಮದು-ರಫ್ತು ಪ್ರಕ್ರಿಯೆಗಳಿಗೆ ಇನ್ನಷ್ಟು ಅವಕಾಶಗಳು ದೊರೆಯಲಿವೆ.
ನಳಿನ್‌ ಕುಮಾರ್‌ ಕಟೀಲು,ಸಂಸದರು, ದ.ಕ

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.