‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ’: ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ
Team Udayavani, Nov 29, 2020, 9:10 AM IST
ಮಂಗಳೂರು: ಕೆಲವೇ ದಿನಗಳ ಹಿಂದೆ ಲಷ್ಕರ್ ಉಗ್ರರನ್ನು ಬೆಂಬಲಿತ ಗೋಡೆ ಬರಹದಿಂದ ಸುದ್ದಿಯಾಗಿದ್ದ ಮಂಗಳೂರಿನಲ್ಲಿ ಇಂದು ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಬರೆಯಲಾಗಿದೆ. ನಗರದ ಕೋರ್ಟ್ ರಸ್ತೆಯಲ್ಲಿ ಉರ್ದು ಭಾಷೆಯಲ್ಲಿ ಈ ಬರಹ ಬರೆಯಲಾಗಿದೆ.
‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡುವುದು’ ಎಂಬರ್ಥದಲ್ಲಿ ಉರ್ದು ಭಾಷೆಯಲ್ಲಿಆಂಗ್ಲ ಅಕ್ಷರಗಳಲ್ಲಿ ಗೋಡೆಯ ಮೇಲೆ ಬರೆಯಲಾಗಿದೆ.
ಮಂಗಳೂರಿನ ಕೋರ್ಟ್ ರಸ್ತೆಯ ಕೋರ್ಟ್ ಆವರಣದಲ್ಲಿರುವ ಪೊಲೀಸ್ ಔಟ್ ಪೋಸ್ಟ್ ಕಟ್ಟಡದ ಮೇಲೆ ಉರ್ದು ಭಾಷೆಯಲ್ಲಿ ಬರೆಯಲಾಗಿದೆ.
ಇದನ್ನೂ ಓದಿ:ಲಷ್ಕರ್ ಬೆಂಬಲಿಸಿ ಬೆದರಿಕೆ ಪ್ರಕರಣ ; 3 ತಂಡಗಳಿಂದ ತನಿಖೆ
ಕಪ್ಪು ಬಣ್ಣದ ಪೈಂಟ್ ಬಳಸಿ ರಾತ್ರಿ ವೇಳೆ ಬರೆಯಲಾಗಿದ್ದು, ರವಿವಾರ ಬೆಳಗ್ಗೆ ವಿಷಯ ಬೆಳಕಿಗೆ ಬಂದಿದೆ. ಬಂದರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಕ್ರಮ ಕೈಗೊಂಡಿದ್ದಾರೆ.
ಕೆಲವೇ ದಿನಗಳ ಹಿಂದೆ ನಗರದ ಅಪಾರ್ಟ್ಮೆಂಟ್ನ ಆವರಣ ಗೋಡೆ ಮೇಲೆ ಲಷ್ಕರ್-ಎ-ತಯ್ಯಬಾ ಮತ್ತು ತಾಲಿಬಾನಿ ಉಗ್ರ ಸಂಘಟನೆಗಳನ್ನು ಬೆಂಬಲಿಸಿದ ಬೆದರಿಕೆ ಬರಹವೊಂದನ್ನು ಬರೆಯಲಾಗಿತ್ತು. ಪ್ರಕರಣದ ಬಗ್ಗೆ ಮೂರು ಪ್ರತ್ಯೇಕ ಪೊಲೀಸ್ ತಂಡಗಳು ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿವ ಸಮಯದಲ್ಲೇ ಮತ್ತೊಂದು ಗೋಡೆ ಬರಹ ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ