ಗಡಿಗಳಲ್ಲಿ ಆ್ಯಪ್‌ ಆಧಾರಿತ ಟ್ರ್ಯಾಕಿಂಗ್‌ ವ್ಯವಸ್ಥೆ

ವಿದೇಶ-ಅನ್ಯರಾಜ್ಯ ಪ್ರಯಾಣಿಕರ ಮೇಲೆ ಕಟ್ಟು-ನಿಟ್ಟಿನ ನಿಗಾ

Team Udayavani, Jul 23, 2020, 7:40 AM IST

ಗಡಿಗಳಲ್ಲಿ ಆ್ಯಪ್‌ ಆಧಾರಿತ ಟ್ರ್ಯಾಕಿಂಗ್‌ ವ್ಯವಸ್ಥೆ

ಸಾಂದರ್ಭಿಕ ಚಿತ್ರ

ಮಂಗಳೂರು: ವಿದೇಶ, ಹೊರ ರಾಜ್ಯಗಳಿಂದ ಆಗಮಿಸಿ ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳುವವರಿಗೆ ಪೂರ್ಣ ಕಡಿವಾಣ ಹಾಕುವುದಕ್ಕಾಗಿ ವಿಮಾನ ನಿಲ್ದಾಣ, ರೈಲು ನಿಲ್ದಾಣ ಮತ್ತು ಪ್ರಮುಖ ಗಡಿಗಳಲ್ಲಿ ಆ್ಯಪ್‌ ಆಧಾರಿತ ಹೊಸ ಟ್ರ್ಯಾಕಿಂಗ್‌ ವ್ಯವಸ್ಥೆ ಅಳವಡಿಸಿ ಕೊಳ್ಳಲಾಗಿದೆ. ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಿ ಅನುಮತಿ ಪಡೆದು ಆಗಮಿಸಿದ ಅನಂತರ ಜಿಲ್ಲಾಡಳಿತ, ಪೊಲೀಸರು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಕಣ್ತಪ್ಪಿಸಿ ಕ್ವಾರಂ ಟೈನ್‌ನಿಂದ ತಪ್ಪಿಸಿಕೊಳ್ಳದಂತೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಬಿಆರ್‌ಸಿ (ಬಾರ್ಡರ್‌ ರಿಸೀವಿಂಗ್‌ ಸೆಂಟರ್‌) ಮತ್ತು ಡಿಆರ್‌ಸಿ ಡಿಸ್ಟ್ರಿಕ್ಟ್ ರಿಸೀವಿಂಗ್‌ ಸೆಂಟರ್‌) ಆ್ಯಪ್‌ನ್ನು ಅಳ ವಡಿಸಿ  ಕೊಳ್ಳಲಾಗಿದೆ. ವಿಮಾನ, ರೈಲ್ವೇ ನಿಲ್ದಾಣಗಳನ್ನು ಬಿಆರ್‌ಸಿ ಹಾಗೂ ಗಡಿಗಳ‌ ಚೆಕ್‌ಪೋಸ್ಟ್‌ಗಳನ್ನು ಡಿಆರ್‌ಸಿ ಗಳಾಗಿ ಗುರು ತಿಸಲಾಗಿದ್ದು, ಇಲ್ಲಿ ವಿಶೇಷ ತರಬೇತಿ ಪಡೆದ ತಂಡಗಳು ಕಾರ್ಯ ನಿರ್ವಹಿಸುತ್ತಿವೆ.

ತತ್‌ಕ್ಷಣ ಮಾಹಿತಿ ರವಾನೆ
ಬೇರೆ ದೇಶ, ಬೇರೆ ರಾಜ್ಯಗಳಿಂದ ವಿಮಾನ/ರೈಲು/ ರಸ್ತೆ ಮಾರ್ಗದ ಮೂಲಕ ಬರು ವವರು ಸಾಮಾನ್ಯವಾಗಿ ಯಾತ್ರಿ ಆ್ಯಪ್‌/ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ ಆಯಾ ಜಿಲ್ಲೆಗಳ ಅನುಮತಿ ಪಡೆದು ಬರುತ್ತಾರೆ. ಆದರೆ, ಅವರ ಪ್ರಯಾಣದ ಕುರಿತ‌ ಪೂರ್ಣ ಮಾಹಿತಿ ಸ್ಥಳೀಯ ಅಧಿಕಾರಿಗಳಿಗೆ ಲಭ್ಯ ವಾಗುತ್ತಿರಲಿಲ್ಲ. ಗಡಿ, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಂದಲೇ ಹೆಚ್ಚಿನ ವಿವರಗಳನ್ನು ಪಡೆಯಬೇಕಿತ್ತು. ಈ ವೇಳೆ ಮಾಹಿತಿ ತಪ್ಪಿ ಹೋಗುವ ಸಾಧ್ಯತೆಯೂ ಇತ್ತು. ಆದರೆ ಈಗ ಪೋರ್ಟಲ್‌ನ್ನು ಮೇಲ್ದರ್ಜೆಗೇರಿಸಿ ಅದಕ್ಕೆ ಪೂರಕವಾಗಿ 2 ಆ್ಯಪ್‌ಗ್ಳನ್ನು ಕೂಡ ಅಳವಡಿಸಲಾಗಿದ್ದು ಇದು ವ್ಯಕ್ತಿಯೋರ್ವರ ಮಾಹಿತಿಯನ್ನು ಶೀಘ್ರ ತಿಳಿದುಕೊಂಡು ಕಾರ್ಯ ಪ್ರವೃತ್ತವಾಗಲು ಅಧಿಕಾರಿಗಳಿಗೆ ನೆರವಾಗುತ್ತದೆ.

ಕಾರ್ಯನಿರ್ವಹಣೆ ಹೇಗೆ?
ಜಿಲ್ಲೆಯ ಯಾವುದೇ ಬಿಆರ್‌ಸಿ ಅಥವಾ ಡಿಆರ್‌ಸಿಗಳಿಗೆ ಆಗಮಿಸಿದವರು ಅರ್ಜಿ ಸಲ್ಲಿಸುವ ವೇಳೆ ಪಡೆದುಕೊಂಡಿರುವ ನೋಂದಣಿ ಸಂಖ್ಯೆಯನ್ನು ಆಯಾ ಕೇಂದ್ರ ಗಳಲ್ಲಿರುವ ಅಧಿಕಾರಿ/ಸಿಬಂದಿಗೆ ನೀಡಿದಾಗ ಅವರ ಸಮಗ್ರ ವಿವರಗಳು ಆ್ಯಪ್‌ ಮೂಲಕ ಲಭ್ಯವಾಗುತ್ತವೆ. ಇದೇ ಮಾಹಿತಿ ಮುಂದೆ ಅವರು ಎಲ್ಲಿಗೆ ತೆರಳಬೇಕೋ ಅಲ್ಲಿನ ನೋಡೆಲ್‌ ಅಧಿಕಾರಿ ಸಹಿತ ಸಂಬಂಧಿಸಿದ ಎಲ್ಲ ಅಧಿಕಾರಿ, ತಂಡಗಳಿಗೆ ರವಾನೆಯಾಗುತ್ತದೆ. ಅನಂತರ ಕ್ವಾರಂಟೈನ್‌ಗೆ
ವ್ಯವಸ್ಥೆ ನಡೆಯುತ್ತದೆ. ಇದರಿಂದ ನಿಗದಿತ ಸ್ಥಳಕ್ಕೆ ತೆರಳಿದ್ದಾರೆಯೇ ಎಂಬ ಬಗ್ಗೆ ತಿಳಿಯಲು ಸಾಧ್ಯವಾಗುತ್ತದೆ. ಇದು ಪ್ರಯಾಣಿಕರ ಟ್ರ್ಯಾಕಿಂಗ್‌ ಮಾಡಲು ನೆರವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗರಿಷ್ಠ ಟ್ರ್ಯಾಕಿಂಗ್‌
ಈ ಹಿಂದೆ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಿ ಅನುಮತಿ ಪಡೆದು ಆಗಮಿಸಿದರೂ ಅವರ ಟ್ರ್ಯಾಕಿಂಗ್‌ ಕಷ್ಟವಿತ್ತು. ಕೆಲವೊಮ್ಮೆ ಕಣ್ತಪ್ಪಿ ಹೋಗುವ ಸಾಧ್ಯತೆಗಳಿತ್ತು. ಇದೀಗ ಬಿಆರ್‌ಸಿ, ಡಿಆರ್‌ಸಿ ಆ್ಯಪ್‌/ಸೆಂಟರ್‌ಗಳಿಂದಾಗಿ ಶೇ.100ರಷ್ಟು ಟ್ರ್ಯಾಕಿಂಗ್‌(ನಿಗಾ) ಸಾಧ್ಯವಾಗುತ್ತದೆ.
-ದಿನೇಶ್‌ ಕುಮಾರ್‌, ನೋಡಲ್‌ ಅಧಿಕಾರಿ, ಅಂತಾರಾಜ್ಯ ಪ್ರಯಾಣಿಕರ ಸೇವಾ ವಿಭಾಗ, ದ.ಕ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.