ಕುಖ್ಯಾತ ಕ್ರಿಕೆಟ್ ಬುಕ್ಕಿ ಬಂಧನ; ಮತ್ತೋರ್ವನಿಗೆ ಶೋಧ
ತಾಯಿಯನ್ನು ನೋಡಲು ಗೋವಾ ದಿಂದ ಬಂದಿದ್ದಾಗ ಸೆರೆ
Team Udayavani, Jun 1, 2019, 11:18 AM IST
ಮಂಗಳೂರು: ವಿಶ್ವ ಕಪ್ ಕ್ರಿಕೆಟ್ ಆರಂಭದ ದಿನದಂದೇ ಬೆಟ್ಟಿಂಗ್ನಲ್ಲಿ ತೊಡಗಿದ್ದ ಆರೋಪದಲ್ಲಿ ಬುಕ್ಕಿ, ಕೊಣಾಜೆ ನಿವಾಸಿ ಮೆಲ್ವಿನ್ ವಿಶ್ವಾಸ್ ಡಿ’ಸೋಜಾ (35)ನನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ಈತ ಬಲ್ಮಠದ ರಸ್ತೆ ಬದಿಯಲ್ಲಿ ಗುರುವಾರ ರಾತ್ರಿ ಬೆಟ್ಟಿಂಗ್ ನಿರತರಾಗಿದ್ದಾಗ ಸಿಸಿಬಿ ಪೊಲೀಸರು ಬಂಧಿಸಿದರು. ಆತನಿಂದ ಒಂದು ಮೊಬೈಲ್ ಫೋನ್ ಮತ್ತು 5,200 ರೂ. ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಕದ್ರಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಗೋವಾದಲ್ಲಿಯೇ ಇರುತ್ತಿದ್ದ ವಿಶ್ವಾಸ್, ಪ್ಲೇ 365 ಆ್ಯಪ್ ಮುಖೇನ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಆತ ತಮ್ಮ ಡೆನಿಲ್ ಮೂಲಕ ನಗರದಲ್ಲಿ ಬೆಟ್ಟಿಂಗ್ ವ್ಯವಹಾರ ನಡೆಯುತ್ತಿತ್ತು. ವಿಶ್ವಾಸ್ನ ಬಗ್ಗೆ ಈ ಹಿಂದೆಯೇ ಪೊಲೀಸರು ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ಬಲೆ ಬೀಸಿದ್ದರು.
ಸಹೋದರನಿಗಾಗಿ ಶೋಧ
ವಿಶ್ವಾಸ್ ಗೋವಾದಲ್ಲಿ ತಲೆಮರೆಸಿ ಕೊಂಡಿದ್ದ ಕಾರಣ ಈವರೆಗೆ ಬಂಧನ ಸಾಧ್ಯವಾಗಿರಲಿಲ್ಲ. ಗುರುವಾರ ಆತ ತಾಯಿಯನ್ನು ನೋಡಲು ನಗರಕ್ಕೆ ಬಂದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ಇನ್ನೋರ್ವ ಆರೋಪಿ ಡೆನಿಲ್ ಮಹಾರಾಷ್ಟ್ರಕ್ಕೆ ತೆರಳಿದ್ದಾನೆ ಎನ್ನಲಾಗಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ.
ಕಮಿಷನರ್ ಎಚ್ಚರಿಕೆ
ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ವಿಶ್ವಕಪ್ ಕ್ರಿಕೆಟ್ ಪಂದ್ಯದ ಮೊದಲ ದಿನವಾದ ಮೇ 30ರಂದು ಟ್ವೀಟ್ ಮಾಡಿ, ಕಳೆದ ಐಪಿಎಲ್ ಸಂದರ್ಭದಲ್ಲಿ ಬೆಟ್ಟಿಂಗ್ಗೆ ಸಂಬಂಧಿಸಿ ಪೊಲೀಸರು 18 ಪ್ರಕರಣಗಳನ್ನು ದಾಖಲಿಸಿರುವುದನ್ನು ಉಲ್ಲೇಖೀಸಿದ್ದರು. ವಿಶ್ವ ಕಪ್ ಕ್ರಿಕೆಟ್ ಸಂದರ್ಭದಲ್ಲಿ ಬೆಟ್ಟಿಂಗ್ನಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದ್ದರು.
ವಿಶ್ವಾಸ್ ಬೆಟ್ಟಿಂಗ್ ಜತೆಗೆ ಮಟ್ಕಾ ಮತ್ತು ಜೂಜಾಟವನ್ನೂ ನಡೆಸುತ್ತಿದ್ದು, ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಕಳೆದ ಐಪಿಎಲ್ ಸಂದರ್ಭದಲ್ಲಿ ಬೆಟ್ಟಿಂಗ್ ನಿರತರಾಗಿದ್ದಾಗಲೂ ಪೊಲೀ ಸರು ಈತನ ಬಂಧನಕ್ಕೆ ಶ್ರಮಿಸಿದ್ದರು. ಈತನ ಮೇಲೆ ಪಣಂಬೂರು ಠಾಣೆಯಲ್ಲೂ 4 ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ