ಅಟಲ್‌ ಟಿಂಕರಿಂಗ್‌ ಲ್ಯಾಬ್‌:ಯುವ ವಿಜ್ಞಾನಿಗಳ ತಯಾರಿಗೆ ಯೋಜನೆ 


Team Udayavani, Jul 4, 2018, 2:59 PM IST

4-july-12.jpg

ಬಜಪೆ: ಕೇಂದ್ರ ಸರಕಾರದ ‘ನೀತಿ ಆಯೋಗ’ ಪ್ರಾಯೋಜಿತ ‘ಅಟಲ್‌ ಇನ್ನೋವೇಷನ್‌ ಮಿಷನ್‌’ ಅಡಿಯಲ್ಲಿ ‘ಅಟಲ್‌ ಟಿಂಕರಿಂಗ್‌ ಲ್ಯಾಬ್‌’ ಆ. 30ರೊಳಗೆ ಬಜಪೆ ಹೋಲಿ ಫ್ಯಾಮಿಲಿ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸುಮಾರು 20 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವ ಈ ಲ್ಯಾಬ್‌ ಯುವ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕುರಿತು ಆಸಕ್ತಿ ಬೆಳೆಸಿ, ಪೋಷಿಸಿ, ಮಕ್ಕಳಲ್ಲಿ ಸೃಜನಾತ್ಮಕ ವಿಜ್ಞಾನ ಬೆಳವಣಿಗೆ ಮಾಡಿ ಯುವ ವಿಜ್ಞಾನಿಗಳ ತಯಾರಿ ಕೇಂದ್ರ ಸರಕಾರದ ಈ ಯೋಜನೆಯ ಉದ್ದೇಶ. ಸುಸಜ್ಜಿತ ಪ್ರಯೋಗಾಲಯ ಸ್ಥಾಪಿಸಲು ಬೇಕಾದ ವಿಜ್ಞಾನ ಉಪಕರಣಗಳಿಗೆ ಹಾಗೂ ನಿರ್ವಹಣೆಗೆ ಈ ಧನ ಸಹಾಯ ಕೇಂದ್ರ ಸರಕಾರ ನೀಡಲಿದೆ.

ದೇಶಾದ್ಯಂತ 25,000ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಅರ್ಜಿಗಳು ಸಲ್ಲಿಸಿದ್ದವು. ಇದರಲ್ಲಿ 1,500 ವಿದ್ಯಾಸಂಸ್ಥೆಗಳನ್ನು ಮಾತ್ರ ಆಯ್ಕೆ ಮಾಡಲಾಗಿತ್ತು. ಜಿಲ್ಲೆಯಿಂದ 25 ಶಿಕ್ಷಣ ಸಂಸ್ಥೆಗಳು ಆಯ್ಕೆ ಮಾಡಲಾಗಿತ್ತು. 7 ಶೈಕ್ಷಣಿಕ ವಲಯದಲ್ಲಿ ಮಂಗಳೂರು ಉತ್ತರ ವಲಯದಿಂದ ನಾಲ್ಕು ಶಿಕ್ಷಣ ಸಂಸ್ಥೆಗಳಾದ ಬಜಪೆಯ ಹೋಲಿ ಫ್ಯಾಮಿಲಿ ಪ್ರೌಢಶಾಲೆ, ಎಸ್‌ಡಿಪಿಟಿ ಪ್ರೌಢಶಾಲೆ ಕಟೀಲು, ಮೂಲ್ಕಿಯ ವ್ಯಾಸ ಮಹರ್ಷಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸುರತ್ಕಲ್‌ ವಿದ್ಯಾಧಾಯಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಆಯ್ಕೆಯಾಗಿದೆ.

ಆಯ್ಕೆ ಹೇಗೆ?
ಕಳೆದ 5 ವರ್ಷಗಳ ಶಾಲೆಯ ವಿಜ್ಞಾನ ಸಾಧನೆ, ವಿಜ್ಞಾನ ಗೋಷ್ಠಿ, ವಸ್ತು ಪದರ್ಶನ, ರಸಪ್ರಶ್ನೆ, ವಿಜ್ಞಾನ ಜಾಗೃತಿ ಕಾರ್ಯಕ್ರಮ. ನವೀನ ಸಂಶೋಧನೆ, ಎಸೆಸೆಲ್ಸಿ ಫಲಿತಾಂಶ, ಶಾಲೆಯ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಯ ಬಗ್ಗೆ ವರದಿಯನ್ನು ಆಗಸ್ಟ್‌ 2017ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಆಧಾರದ ಮೇಲೆ ಈ ಶಾಲೆಗಳು ಆಯ್ಕೆಯಾಗಿವೆ. ಈ ಲ್ಯಾಬ್‌ನಲ್ಲಿ 2 ಕೊಠಡಿಗಳಿವೆ. ವಿಜ್ಞಾನ ಪ್ರಯೋಗಾಲಯ ಮತ್ತು ಪೊಜೆಕ್ಟರ್‌ ಬಳಸಿ ಪಾಠ ಮಾಡುವುದು. ಶಬ್ದವೇದಿ
ಉಪಕರಣ, ಉಷ್ಣಾಂಶ ಏರಿಳಿತ ಪತ್ತೆ ಹಚ್ಚುವ ಉಪಕರಣ, ನೈಸರ್ಗಿಕ ಅನಿಲ ಸೋರಿಕೆ ಪತ್ತೆ ಹಚ್ಚುವ ಉಪಕರಣ, ಕಂಪನಗಳು, ಮೆಕ್ಯಾನಿಕಲ್‌ , ಎಲೆಕ್ಟ್ರಾನಿಕ್‌ ಉಪಕರಣಗಳು, 30 ಬಗೆಯ ಮಾದರಿಗಳು ಮತ್ತು 3ಡಿ ಪ್ರಿಂಟರ್‌, 3 ಆಯಾಮಗಳ ಮುದ್ರಣಗಳಿರುವ ಚಿತ್ರಣ ಹಾಗೂ ಮಾದರಿ ರಚನೆ ಇದರಲ್ಲಿದೆ. ಕೇಂದ್ರ ಸರಕಾರದ ನೀತಿ ಆಯೋಗದಿಂದ ಅಧಿಕೃತವಾಗಿ ಆಯ್ಕೆಗೊಂಡವರು ಈ ಪ್ರಯೋಗಾಲಯದಲ್ಲಿ ವಿಜ್ಞಾನ ಪ್ರಯೋಗದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿ, ಅಳವಡಿಕೆಯ ಕ್ರಮ ಮತ್ತು ನಿರ್ವಹಣೆಯನ್ನು ಶಿಕ್ಷಕರಿಗೆ ತಿಳಿಸುತ್ತಾರೆ. ‘ಅಟಲ್‌ ಟಿಂಕರಿಂಗ್‌ ಲ್ಯಾಬ್‌’ ಅನ್ನು ಪರಿಸರದ ಶಾಲಾ ಮಕ್ಕಳು ಬಂದು ಪ್ರಯೋಗಾಲಯದ ಸದುಪಯೋಗ ಮಾಡಬಹುದಾಗಿದೆ. ಗ್ರಾಮೀಣ ಪ್ರದೇಶದ ಶಾಲೆಗೆ ಇದು ಹೆಚ್ಚು ಸಹಕಾರಿ ಯಾಗಲಿದೆ. ಬೆಳಗ್ಗೆ 9ರಿಂದ ಸಂಜೆ 4ರ ತನಕ ಇದನ್ನು ಉಪಯೋಗಿಸಬಹುದು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಲಾಭ
ಹೊಸ ತಂತ್ರಜ್ಞಾನ ಉಪಕರಣಗಳ ಜತೆಗೆ ವಿಜ್ಞಾನದ ಬಗ್ಗೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆಸಕ್ತಿ ಮೂಡಿಸುವುದರ ಜತೆಗೆ ಹೊಸ ಸಂಶೋಧನೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿ, ಯುವ ವಿಜ್ಞಾನಿಯನ್ನು ಸೃಷ್ಟಿ ಮಾಡುವ ಕೇಂದ್ರ ಸರಕಾರದ ಉದ್ದೇಶವಾಗಿದ್ದು ಇದರ ಪ್ರಯೋಜನವನ್ನು ಪಡೆಯಬೇಕಾಗಿದೆ. ನಮ್ಮ ಶಾಲೆಯಲ್ಲಿ ಆ. 30ರೊಳಗೆ ಈ ಲ್ಯಾಬ್‌ನ್ನು ಉದ್ಘಾಟನೆ ಮಾಡಲಾಗುವುದು.
ಭಗಿನಿ ಲೊಲಿಟಾ, ಮುಖ್ಯೋಪಾಧ್ಯಾಯಿನಿ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.