ಬೀದಿ ನಾಯಿಗಳ ದಾಳಿಗೆ ಪಿಲಿಕುಳ ನಿಸರ್ಗಧಾಮದ 15 ಕಾಡುಕುರಿಗಳ ಸಾವು
Team Udayavani, Jun 26, 2020, 12:17 PM IST
ಮಂಗಳೂರು: ಇಲ್ಲಿನ ಪ್ರಸಿದ್ಧ ಪಿಲಿಕುಳ ನಿಸರ್ಗಧಾಮದಲ್ಲಿರುವ ಕಾಡುಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ 15 ಕಾಡುಕುರಿಗಳು ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ನಿಸರ್ಗಧಾಮದ ಬಳಿಯಿರುವ ಡಂಪಿಂಗ್ ಯಾರ್ಡ್ ನಿಂದ ಜಿಗಿದು ಬೀದಿ ನಾಯಿಗಳು ನಿಸರ್ಗಧಾಮದ ಒಳಗೆ ಬಂದಿದ್ದು, ಕಾಡುಕುರಿಗಳ ಮೇಲೆ ದಾಳಿ ಮಾಡಿದೆ. ಕಾಡುಕುರಿಗಳ ಕುತ್ತಿಗೆ ಭಾಗಕ್ಕೆ ತೀವ್ರ ಗಾಯವಾದ ಕಾರಣ 15 ಕಾಡುಕುರಿಗಳು ಸಾವನ್ನಪ್ಪಿದೆ. ಎರಡು ಕಾಡುಕುರಿಗಳಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಇಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ತಡೆಗೋಡೆ ನಿರ್ಮಾಣವಾದರೆ ಬೀದಿನಾಯಿಗಳು ಒಳ ಪ್ರವೇಶಿಸುವುದನ್ನು ತಡೆಯಬಹುದು ಎನ್ನಲಾಗಿದೆ.
ಮೊದಲು ಪಿಲಿಕುಳ ನಿಸರ್ಗಧಾಮದಲ್ಲಿ ಜಿಂಕೆಗಳು ಸಾವನ್ನಪ್ಪಿದೆ ಎಂದು ವರದಿಯಾಗಿತ್ತು. ಆದರೆ ನಂತರ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಬಂಢಾರಿ ಸ್ಪಷ್ಟನೆ ನೀಡಿದ್ದು, ಬೀದಿನಾಯಿಗಳ ದಾಳಿಗೆ ಕಾಡುಕುರಿಗಳು ಸಾವನ್ನಪ್ಪಿದ್ದು, ಜಿಂಕೆಗಳಲ್ಲ. ಅವುಗಳೆರಡು ನೋಡಲು ಒಂದೇ ರೀತಿ ಇರುವ ಕಾರಣ ಗೊಂದಲ ಉಂಟಾಯಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್