ಮಂಗಳೂರು: ಪೊಲೀಸರ ಮೇಲೆ ದಾಳಿ ನಡೆಸಿ ಬಂದೂಕು ಮುರಿದ ನಾಲ್ವರು ಯುವಕರು
Team Udayavani, Dec 19, 2020, 12:35 PM IST
ಮಂಗಳೂರು: ಬೈಕ್ ನಲ್ಲಿ ಆಗಮಿಸಿದ ನಾಲ್ವರು ಯುವಕರು ಪೊಲೀಸರ ಮೇಲೆ ದಾಳಿ ನಡೆಸಿ, ಪೊಲೀಸರ ಬಂದೂಕು ಮುರಿದು ಹಾಕಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ನಗರದ ನೀರುಮಾರ್ಗದ ಕಾಲೇಜೊಂದರ ನಾಲ್ವರು ವಿದ್ಯಾರ್ಥಿಗಳು ಎರಡು ಬೈಕ್ ನಲ್ಲಿ ಬಂದು ಕೂಳೂರು ಸೇತುವೆ ಚೆಕ್ ಪೋಸ್ಟ್ ನಲ್ಲಿ ದಾಳಿ ನಡೆಸಿದ್ದಾರೆ.
ಈ ಯುವಕರು ಇಂದು ನಸುಕಿನ ವೇಳೆ ಲಾರಿಯವರ ಜೊತೆ ಜಗಳವಾಡಿದ್ದರು. ಲಾರಿ ಚಾಲಕನ ನೀಡಿದ ದೂರಿನನ್ವಯ ಪೊಲೀಸರು ಕೂಳೂರು ಚೆಕ್ ಪೋಸ್ಟ್ ನಲ್ಲಿ ಯುವಕರನ್ನು ಅಡ್ಡಹಾಕಿದ್ದರು. ಆದರೆ ಒಂದು ಬೈಕ್ ನ ಸವಾರರು ಪೊಲೀಸರ ಬ್ಯಾರಿಕೇಡ್ ಮುರಿದು ತಪ್ಪಿಸಿಕೊಂಡಿದ್ದಾರೆ.
ಇದನ್ನೂ ಓದಿ:ಉಜಿರೆ ಟು ಕೋಲಾರ: ಬಾಲಕ ಅನುಭವ್ ಅಪಹರಣಕಾರರ ಬಂಧನ ಹೇಗಾಯ್ತು?
ಮತ್ತೊಂದು ಬೈಕ್ ನ್ನು ಪೊಲೀಸರು ತಡೆದಿದ್ದಾರೆ. ಆದರೆ ಪೊಲೀಸರ ಮೇಲೆ ಎಗರಿದ ಯುವಕರು ಹಲ್ಲೆ ನಡೆಸಿ ಪೊಲೀಸರ ಬಂದೂಕು ಕಿತ್ತುಕೊಂಡು ಮುರಿದುಹಾಕಿದ್ದಾರೆ.
ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಕೂಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ