ನಮಾಜ್ ನಿರತ ಬಾಲಕನಿಗೆ ತಂಡದಿಂದ ಹಲ್ಲೆ
Team Udayavani, Jun 10, 2018, 6:00 AM IST
ಉಳ್ಳಾಲ: ಶಾಲಾ ವಿದ್ಯಾರ್ಥಿಗಳಿಬ್ಬರ ನಡುವಿನ ವಿವಾದಕ್ಕೆ ಸಂಬಂಧಿಸಿ ಓರ್ವನ ಸಂಬಂಧಿಕರು ಇನ್ನೋರ್ವ ಮಸೀದಿಯಲ್ಲಿ ನಮಾಝ್ ಮಾಡುತ್ತಿದ್ದ ವೇಳೆ ಹಲ್ಲೆ ನಡೆಸಿದ ಘಟನೆ ಮಂಜನಾಡಿ ಗ್ರಾಮದ ಮರಾಠಿಮೂಲೆ ಮಸೀದಿಯಲ್ಲಿ ನಡೆದಿದ್ದು, ಹಲ್ಲೆಕೋರರು ತಾವು ಬಂದಿದ್ದ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ನಾಟೆಕಲ್ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕಿನ್ಯಾ ನಿವಾಸಿ ಸಕಲೈನ್ (16) ತಂಡ ದಿಂದ ದಾಳಿಗೊಳಗಾಗಿದ್ದು, ಆತನ ಸಹಪಾಠಿ ಅರಾಫನ ಸಂಬಂಧಿ ಕರು ಆರೋಪಿಗಳು. ಆರೋಪಿ ಗಳೆಲ್ಲರೂ ಮಂಜೇಶ್ವರ ಮೂಲದವರು.
ಘಟನೆ ವಿವರ
ಶುಕ್ರವಾರ ಸಂಜೆ ಉಪವಾಸ ಬಿಡುವ ಸಮಯ ಸಕಲೈನ್ ಮತ್ತು ಆತನ ಸಹಪಾಠಿ ಅರಾಫ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದಿತ್ತು. ಬಳಿಕ ಶಾಲಾ ಅಧ್ಯಾಪಕರು ಅವರನ್ನು ಸಮಾಧಾನಿಸಿ ಇಬ್ಬರನ್ನು ನಮಾಜಿಗೆಂದು ಮರಾಟಿಮೂಲೆ ಮಸೀದಿಗೆ ಕಳುಹಿಸಿದ್ದರು. ಆದರೆ ಅರಾಫ ತನ್ನ ದೊಡ್ಡಪ್ಪನ ಮಕ್ಕಳಿಗೆ ದೂರವಾಣಿ ಮೂಲಕ ಕರೆ ಮಾಡಿ ವಿಷಯ ತಿಳಿಸಿದ್ದಾನೆ.
ಅರಾಫ ನೀಡಿದ ಮಾಹಿತಿಯಂತೆ ಆರೋಪಿಗಳು ಮರಾಠಿಮೂಲೆ ಮಸೀದಿಯ ಹೊರ ಆವರಣದಲ್ಲಿ ನಮಾಜಿನಲ್ಲಿ ನಿರತನಾಗಿದ್ದ ಸಕಲೈನ್ನನ್ನು ಹೊರಗೆಳೆದು ಹಾಕಿ ಸ್ಟಿಕ್ ಮೂಲಕ ಮರಣಾಂತಿಕ ದಾಳಿ ನಡೆಸಿದ್ದಾರೆ. ಈತನ ಕೂಗು ಕೇಳಿ ಮಸೀದಿಯಲ್ಲಿದ್ದವರು ಓಡಿ ಬರುವಷ್ಟರಲ್ಲಿ ಮೂವರು ದುಷ್ಕರ್ಮಿ ಗಳು ಪರಾರಿಯಾಗಿದ್ದಾರೆ. ಅವರು ಬಂದಿದ್ದ ಕೇರಳ ನೋಂದಾಯಿತ ಕ್ವಾಲಿಸ್ ಕಾರನ್ನು ಬಿಟ್ಟು ಹೋಗಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣೆಯ ಎದುರು ಜಮಾಯಿಸಿದ ಜನ ಆರೋಪಿಗಳನ್ನು ತತ್ಕ್ಷಣವೇ ಬಂಧಿಸುವಂತೆ ಆಗ್ರ ಹಿಸಿದರು. ಗಾಯಾಳು ನಾಟೆಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ