ಮಹಿಳೆಯ ಬ್ಯಾಗ್ ಕಳವಿಗೆ ಯತ್ನ : ಜಾಗೃತಿಗಾಗಿ ಅಣಕು ಕಾರ್ಯಾಚರಣೆ : ಶಶಿಕುಮಾರ್ ಸ್ಪಷ್ಟನೆ


Team Udayavani, Sep 12, 2021, 6:23 PM IST

Attempt to steal woman’s bag: mock campaign for awareness: Sashikumar clarifies

ಪ್ರಾತಿನಿಧಿಕ ಚಿತ್ರ

ಮಂಗಳೂರು : ಕಾರಿನಲ್ಲಿ ಬಂದ ತಂಡ ಮಹಿಳೆಯ ಬ್ಯಾಗ್‌ ಕಸಿದುಕೊಳ್ಳಲು ಪ್ರಯತ್ನಿಸುವ ಮತ್ತು ಆಗ ಮಹಿಳೆ ಪ್ರತಿರೋಧ ವ್ಯಕ್ತಪಡಿಸುವ ಅಣಕು ಕಾರ್ಯಾಚರಣೆಯನ್ನು ಮಂಗಳೂರು ಪೊಲೀಸರು ನಡೆಸಿದ್ದು ಇದರ ವೀಡಿಯೋ ವೈರಲ್‌ ಆಗಿದೆ.

ರವಿವಾರ(ಸೆ.12) ಬೆಳಗ್ಗೆ ಸುಮಾರು 11 ಗಂಟೆಯ ವೇಳೆಗೆ ಮಂಗಳೂರು ನಗರದ ಸೈಂಟ್‌ ಆ್ಯಗ್ನೆಸ್‌ ಕಾಲೇಜು ಮುಂಭಾಗದಲ್ಲಿ ಮಹಿಳೆಯೋರ್ವರು ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳ ಪೈಕಿ ಓರ್ವ ದುಷ್ಕರ್ಮಿಯು ಮಹಿಳೆಯನ್ನು ದೂಡಿ ಬ್ಯಾಗ್‌ ಕಸಿದುಕೊಳ್ಳಲು ಯತ್ನಿಸುತ್ತಾನೆ. ಮಹಿಳೆಯು ಪ್ರತಿಯಾಗಿ ಆತನ ಮೇಲೆ ಹಲ್ಲೆ ನಡೆಸಲು ಮುಂದಾಗಿ ತನ್ನನ್ನು ರಕ್ಷಿಸಿಕೊಳ್ಳುತ್ತಾರೆ. ಈ ದೃಶ್ಯ ಸಿಸಿ ಕೆಮರಾ ಹಾಗೂ ಪೊಲೀಸರು ಅಳವಡಿಸಿದ ಕೆಮರಾದಲ್ಲಿ ದಾಖಲಾಗಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕಾರ್ಯಾಚರಣೆ ಯಶಸ್ವಿ

ಅಣಕು ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಅವರು, ಕಾರ್ಯಾಚರಣೆ ಯಶಸ್ವಿಯಾಗಿದೆ. ಶೋಭಲತಾ ಕಟೀಲ್‌ ಅವರ ಸ್ವರಕ್ಷಾ ಫಾರ್‌ ವುಮೆನ್‌ ಟ್ರಸ್ಟ್‌ನ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು ಶೋಭಲತಾ ಅವರು ಪಾದಚಾರಿ ಮಹಿಳೆಯಾಗಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.

“112 ತುರ್ತು ಸಹಾಯವಾಣಿ’ಗೆ ಕರೆ
ಘಟನೆ (ಅಣಕು ಕಾರ್ಯಾಚರಣೆ) ಸಂದರ್ಭ ಸ್ಥಳದಲ್ಲಿದ್ದ ಸಾರ್ವಜನಿಕರೋರ್ವರು 11.03 ಕ್ಕೆ “ತುರ್ತು ಸಹಾಯವಾಣಿ 112’ಗೆ( ಇಆರ್‌ಎಸ್‌ಎಸ್‌-112) ಕರೆ ಮಾಡಿದ್ದರು. 112 ರಕ್ಷಣಾ ವಾಹನ 11.08ಕ್ಕೆ ಸ್ಥಳಕ್ಕೆ ಆಗಮಿಸಿತ್ತು. ಕದ್ರಿ ಪೊಲೀಸ್‌ ಠಾಣೆಯ ನಿರೀಕ್ಷಕರು ಮತ್ತು ಸಿಬಂದಿ 11.18ಕ್ಕೆ ಆಗಮಿಸಿದ್ದರು. ಮೇಲಧಿಕಾರಿಗಳು ಕೂಡ ಭೇಟಿ ನೀಡಿದ್ದರು. ಮಾಹಿತಿ ಪಡೆದ ಪೊಲೀಸ್‌ ಕಂಟ್ರೋಲ್‌ ರೂಮ್‌ನವರು ನಗರದಾದ್ಯಂತ ಚೆಕ್‌ಪೋಸ್ಟ್‌ಗಳನ್ನು ಅಲರ್ಟ್‌ ಮಾಡಿ ಸಂಶಯಾಸ್ಪದ ವಾಹನ ಪತ್ತೆ ಹಚ್ಚಿದ್ದಾರೆ.

ಸಾರ್ವಜನಿಕರಿಂದ ವಾಹನ ತಡೆಯುವ ಯತ್ನ
ಘಟನಾ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರಿಕ್ಷಾ ಚಾಲಕರು ಹಾಗೂ ಆ್ಯಗ್ನೆಸ್‌ ಕಾಲೇಜು ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ಮಹಿಳಾ ಮತ್ತು ಪುರುಷ ಪಾದಚಾರಿಯವರು ಅಣಕು ದುಷ್ಕರ್ಮಿಗಳಿದ್ದ ವಾಹನ ತಡೆಯುವ, ಗುರುತು ಹಚ್ಚುವ ಹಾಗೂ ಕಾರನ್ನು ಹಿಂಬಾಲಿಸುವ ಪ್ರಯತ್ನ ಮಾಡಿದ್ದು ಇದು ಅಭಿನಂದನಾರ್ಹ. ಅಲ್ಲದೆ ಸಾರ್ವಜನಿಕರು 2 ಬೈಕ್‌ ಹಾಗೂ 1 ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಯ ಚಹರೆ ಮತ್ತು ವಾಹನದ ಬಗ್ಗೆ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಅದರಂತೆ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ದಷ್ಕರ್ಮಿಗಳ ವಾಹನವನ್ನು ಅಡ್ಡಗಟ್ಟಿ ವಶಪಡಿಸಿಕೊಂಡಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.
ಕಾರು ಅಡ್ಡ ಇಡಲು ಯತ್ನ ಸಾರ್ವಜನಿಕರೋರ್ವರು ದುಷ್ಕರ್ಮಿಗಳ ಕಾರಿಗೆ ಅವರ ಕಾರನ್ನು ಅಡ್ಡಲಾಗಿ ನಿಲ್ಲಿಸಲು ಯತ್ನಿಸಿರುವುದು ಕೂಡ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಆ ವ್ಯಕ್ತಿಯನ್ನು ಪತ್ತೆ ಹಚ್ಚಿ ಅಭಿನಂದಿಸಲಾಗುವುದು. ಸಾರ್ವಜನಿಕರ ಸ್ಪಂದನೆ ಉತ್ತಮವಾಗಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.

ಜಾಗೃತಿಗಾಗಿ ಅಣಕು ಕಾರ್ಯಾಚರಣೆ : 
ದರೋಡೆ, ಸುಲಿಗೆಯಂತಹ ಸಂದರ್ಭದಲ್ಲಿ ಸಾರ್ವಜನಿಕರು, ಸಂತ್ರಸ್ತೆ, ಪೊಲೀಸರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದರ ಪುನರಾವಲೋಕನಕ್ಕಾಗಿ ಈ ಅಣಕು ಕಾರ್ಯಾಚರಣೆ ನಡೆಸಲಾಗಿದೆ. ಈ ರೀತಿಯ ನೈಜ ಘಟನೆಗಳು ನಡೆದರೆ ಸಾರ್ವಜನಿಕರು ಕೂಡ ತತ್‌ಕ್ಷಣ ಸ್ಪಂದಿಸಬೇಕು ಎಂಬ ಸಂದೇಶವನ್ನು ಈ ಅಣಕು ಕಾರ್ಯಾಚರಣೆ ಮೂಲಕ ನೀಡುವ ಪ್ರಯತ್ನ ನಡೆಸಿದ್ದೇವೆ. ಈ ಕಾರ್ಯಾಚರಣೆ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಮಹಿಳೆಯರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆಯಾಗಿದ್ದು ಮಹಿಳೆಯರು, ಹಿರಿಯ ನಾಗರಿಕರು ಸಾರ್ವಜನಿಕವಾಗಿ ಓಡಾಡುವಾಗ ಜಾಗರೂಕರಾಗಿರಬೇಕು.
-ಎನ್‌.ಶಶಿಕುಮಾರ್‌,
ಪೊಲೀಸ್‌ ಆಯುಕ್ತರು, ಮಂಗಳೂರು

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.