![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
4 ವರ್ಷಗಳಿಂದ ಜಾಗೃತಿ: ಮಂಗಳೂರು ಧರ್ಮಪ್ರಾಂತದಿಂದ ಜಲಬಂಧನ್!
Team Udayavani, May 23, 2024, 5:50 PM IST
![4 ವರ್ಷಗಳಿಂದ ಜಾಗೃತಿ: ಮಂಗಳೂರು ಧರ್ಮಪ್ರಾಂತದಿಂದ ಜಲಬಂಧನ್!](https://www.udayavani.com/wp-content/uploads/2024/05/Jala-620x429.jpg)
ಮಹಾನಗರ: ಮಳೆಗಾಗಿ ದೇವರನ್ನು ಪ್ರಾರ್ಥಿ ಸಿದರೆ ಸಾಲದು. ದೇವರು ಕೊಟ್ಟ ನೀರನ್ನು ರಕ್ಷಿಸಿ ಸದುಪಯೋಗಪಡಿಸಿಕೊಳ್ಳುವ ಚಿಂತನೆ ಯೊಂದಿಗೆ ಮಂಗಳೂರು ಧರ್ಮ ಪ್ರಾಂತ ಆರಂಭಿಸಿದ “ಜಲಬಂಧನ್’ ಎಂಬ ವಿಶೇಷ ಜಲ ಜಾಗೃತಿ ಅಭಿಯಾನ ಮೂರನೇ ಅವತರಣಿಕೆಗೆ ಕಾಲಿಟ್ಟಿದೆ.
ಬೇಸಗೆಯಲ್ಲಿ ಎದುರಾಗುವ ನೀರಿನ ಕೊರತೆ ನೀಗಿಸಲು ಮಂಗಳೂರು ಬಿಷಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಮಾರ್ಗದರ್ಶನದಲ್ಲಿ ಧರ್ಮಪ್ರಾಂತದ ಪರಿಸರ ಆಯೋಗ 2020ರಿಂದ ಈ ಅಭಿಯಾನ ನಡೆಸುತ್ತಿದೆ. ಈ ವರ್ಷವೂ ಮುಂಗಾರು ಪೂರ್ವದಲ್ಲೇ “ಜಲ ಬಂಧನ್ 2024′ ಕಾರ್ಯಕ್ರಮ ಆರಂಭಿಸಿದೆ.
ಈಗಾಗಲೇ ಮಿಲಾಗ್ರಿಸ್ ಚರ್ಚ್, ಬೆಂದೂರ್, ಬೊಂದೇಲ್, ವೆಲೆನ್ಸಿಯ, ಸೈಂಟ್ ಜೋಸೆಫ್ ಚರ್ಚ್ ಸೆಮಿನರಿ, ಸಿಎಸ್ಐ ಚರ್ಚ್, ಸಿಒಡಿಪಿ ಸಹಿತ ವಿವಿಧ ಕಡೆಗಳಲ್ಲಿ ಮಳೆ ನೀರಿಂಗಿಸಲು ಯೋಜನೆ ರೂಪಿಸಿದ್ದು, ಈ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗಿದೆ.
ಧರ್ಮಪ್ರಾಂತ ವ್ಯಾಪ್ತಿಯ ಎಲ್ಲ ಚರ್ಚ್ ಹಾಗೂ ವಿವಿಧ ಸಂಸ್ಥೆಗಳಿಗೆ 35 ಸಾವಿರ ಜಲಬಂಧನ್ ಕೈಪಿಡಿ ಹಂಚಲಾಗಿದೆ. ಈ ಬಾರಿ
ವೈಯುಕ್ತಿಕ ನೆಲೆಯಲ್ಲಿ ಪ್ರತೀ ಮನೆಗಳಲ್ಲೂ ಈ ಯೋಜನೆ ಆರಂಭಗೊಳ್ಳಬೇಕೆನ್ನುವ ಗುರಿ ಹೊಂದಲಾಗಿದೆ.
ಬಹುಮಾನ ಯೋಜನೆ
ಪರಿಸರ ಆಯೋಗ ನೀಡಿರುವ ಕೈಪಿಡಿಯನ್ನು 3 ವರ್ಷಗಳ ಕಾಲ ಜೋಪಾನವಾಗಿ ಇರಿಸಿದ್ದಲ್ಲಿ ಕೈಪಿಡಿಯಲ್ಲಿರುವ ನಂಬರ್ ಆಧರಿಸಿ ಲಕ್ಕಿಡ್ರಾ ಮೂಲಕ ಮೂವರಿಗೆ ತಲಾ 10 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ.
ಏನಿದು “ಜಲಬಂಧನ್’?
*ಮಂಗಳೂರು ಧರ್ಮಪ್ರಾಂತದ ವಿವಿಧ ಆಯೋಗಗಳಲ್ಲಿ ಪರಿಸರ ಆಯೋಗವೂ ಒಂದಾಗಿದ್ದು, ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸುವ ಕೆಲಸ ನಡೆಸುತ್ತಿದೆ.
*2020ರಲ್ಲಿ ಮೊದಲ ಬಾರಿಗೆ ಜೀವಜಲ ಉಳಿಸುವ ನಿಟ್ಟಿನಲ್ಲಿ “ಜಲಬಂಧನ್’ ಎನ್ನುವ ಕೈಪಿಡಿ ತಯಾರಿಸಿ ಚರ್ಚ್ಗಳು, ಶಿಕ್ಷಣ ಸಂಸ್ಥೆಗಳಿಗೆ ವಿತರಿಸಿ ಜಾಗೃತಿ ಮೂಡಿಸಲಾಗಿತ್ತು.
*2022ರಲ್ಲಿ ನಡೆದ ಎರಡನೇ ಅಭಿಯಾನದಲ್ಲಿ ಕೆಲವು ಸಂಸ್ಥೆಗಳು ನೀರು ಇಂಗಿಸುವ ಯೋಜನೆ ನಡೆದಿತ್ತು.
*2024ರಲ್ಲಿ ಮುಂಗಾರು ಪೂರ್ವದಲ್ಲೇ ಹಮ್ಮಿಕೊಂಡ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಾರಿ ಹೆಚ್ಚು ಮನೆಗಳಲ್ಲಿ ಮಳೆ ಕೊಯ್ಲಿಗೆ ಸಿದ್ಧತೆ ನಡೆದಿದೆ.
ಬೇಸಗೆಯ ಸಮಸ್ಯೆ ನಿವಾರಿಸಬಹುದು
ಕಡು ಬೇಸಗೆಯಲ್ಲಿ ನೀರಿನ ಮಹತ್ವ ಅರಿವಿಗೆ ಬರುತ್ತದೆ. ನೀರಿಗಾಗಿ ಮಳೆಗಾಗಿ ಪ್ರಾರ್ಥಿಸುತ್ತೇವೆ. ಮಳೆ ಬಂದರೆ ಸಾಕು ನೀರನ್ನು ಪೋಲು ಮಾಡಿ ಸಮುದ್ರಕ್ಕೆ ಸೇರಿಸುತ್ತೇವೆ. ಮಳೆಗಾಲದಲ್ಲಿ ಹರಿಯುವ ನೀರನ್ನು ತಡೆದು ಇಂಗಿಸುವುದರಿಂದ ಬೇಸಗೆಯ ನೀರಿನ ಸಮಸ್ಯೆ ನಿವಾರಿಸಬಹುದು. ಇದಕ್ಕಾಗಿ ಜಲಬಂಧನ್ ಅಭಿಯಾನ ನಡೆಸುತ್ತಿದ್ದೇವೆ.
*ಲುವಿಸ್ ಜೆ. ಪಿಂಟೊ,
ಮಂಗಳೂರು ಧರ್ಮ ಪ್ರಾಂತದ
ಪರಿಸರ ಆಯೋಗದ ಕಾರ್ಯದರ್ಶಿ
ಈಗಾಗಲೇ ಯಶಸ್ವಿ ಅಳವಡಿಕೆ
ಮಿಲಾಗ್ರಿಸ್ ಚರ್ಚ್, ಮಿಲಾಗ್ರಿಸ್ ಕಾಲೇಜು, ಬೊಂದೇಲ್ ಚರ್ಚ್, ಬೆಂದೂರು ಚರ್ಚ್, ವಲೆನ್ಶಿಯಾ ಚರ್ಚ್, ಫಜೀರು ಚರ್ಚ್,
ಅಲೋಶಿಯಸ್ ಕಾಲೇಜು, ಸಂತ ಜೋಸೆಫ್ ಸೆಮಿನರಿ, ಗ್ಲಾಂಡ್ ಸನ್ ಹೋಮ್ ಮೈನರ್ ಸೆಮಿನರಿ, ಬೆಥನಿ ಸಂಸ್ಥೆ, ಸಿಒಡಿಪಿ ಮಂಗಳೂರು, ಕಲಾಂಗನ ಸಂಸ್ಥೆ, ಸಿಎಸ್ಐ ಚರ್ಚ್ ಕಾಪಿಕಾಡ್ ಹಾಗೂ ಆಕಾಶಭವನ, ಫಜೀರು ಮುಖ್ಯ ರಸ್ತೆ ಸಹಿತ ಹಲವು ಮನೆಗಳಲ್ಲೂ ಈ ಯೋಜನೆಯನ್ನು ಅಳವಡಿಸಲಾಗಿದೆ.
*ಸಂತೋಷ್ ಮೊಂತೇರೊ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.