ಆಯೋಧ್ಯೆ ರಾಮಮಂದಿರ ಶಿಲಾನ್ಯಾಸ: ಪೊಳಲಿ ದೇವಳದಲ್ಲಿ ವಿಶೇಷ ಪೂಜೆ
Team Udayavani, Aug 5, 2020, 10:46 AM IST
ಬಂಟ್ವಾಳ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ಶ್ರೀರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರೆವೇರಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ ಮತ್ತು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಯೋಧ್ಯೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆಶಿರ್ವಾದ ಪಡೆದರು.ಇವರ ಜೊತೆಗೆ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಮಾನಾಥ ರಾಯಿ ಯವರು ಉಪಸ್ಥಿರಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ, ವೆಂಕಟೇಶ್ ನಾವಡ, ತಾ.ಪಂ ಸದಸ್ಯ ಯಶವಂತ ಪೊಳಲಿ,ಯುವ ಮೋರ್ಚಾದ ಸುದರ್ಶನ್ ಬಜ,ಪ್ರದೀಪ್ ಅಜ್ಜಿಬೆಟ್ಟು,ಅಶ್ವಥ್,ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ.ಲೋಕೇಶ್ ಭರಣಿ,ನಂದರಾಮ್ ರೈ,,ಸುಕೇಶ್ ಚೌಟ,ವಾಮನ ಆಚಾರ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ