ಮಂಗಳೂರು: ನೂತನ ಆಯುಷ್ಮತಿ ಕ್ಲಿನಿಕ್‌ ಉದ್ಘಾಟನೆ


Team Udayavani, Mar 28, 2023, 6:12 AM IST

ಮಂಗಳೂರು:  ನೂತನ ಆಯುಷ್ಮತಿ ಕ್ಲಿನಿಕ್‌ ಉದ್ಘಾಟನೆ

ಮಂಗಳೂರು: ನಗರ ವ್ಯಾಪ್ತಿಯ ಪಡೀಲ್‌, ಬಿಜೈ, ಬಂದರು ಮತ್ತು ಸುರತ್ಕಲ್‌ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಮವಾರ ನೂತನ ಆಯುಷ್ಮತಿ ಕ್ಲಿನಿಕ್‌ ಉದ್ಘಾಟನೆಗೊಂಡಿತು.

ಪಡೀಲ್‌ ಆರೋಗ್ಯ ಕೇಂದ್ರದಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮ ದಲ್ಲಿ ಸ್ಥಳೀಯ ಕಾರ್ಪೋರೆಟರ್‌ ರೂಪಶ್ರೀ ಪೂಜಾರಿ ಕ್ಲಿನಿಕ್‌ ಉದ್ಘಾಟಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್‌ ಕುಮಾರ್‌ ಮತ್ತು ಆರೋಗ್ಯ ಇಲಾಖೆ ಇತರ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಬಿಜೈ, ಬಂದರು, ಸುರತ್ಕಲ್‌ನ ಕ್ಲಿನಿಕ್‌ಗಳನ್ನೂ ಸ್ಥಳೀಯವಾಗಿಯೇ ಜನಪ್ರತಿನಿಧಿಗಳು ಉದ್ಘಾಟಿಸಿದರು.

ಇಂದಿನಿಂದ ಸೇವೆ
ನಗರದ ಎಲ್ಲ ಆಯುಷ್ಮತಿ ಕ್ಲಿನಿಕ್‌ಗಳು ಮಂಗಳವಾರದಿಂದ ಅಧಿಕೃತವಾಗಿ ಕಾರ್ಯಾಚರಣೆ ಆರಂಭಿಸಲಿವೆ. ಪಡೀಲ್‌ನಲ್ಲಿ ಎ.ಜೆ. ಆಸ್ಪತ್ರೆ, ಬಂದರ್‌ನಲ್ಲಿ ಫಾದರ್‌ ಮುಲ್ಲರ್‌, ಬಿಜೈನಲ್ಲಿ ಕೆ.ಎಂ.ಸಿ. ಮತ್ತು ಸುರತ್ಕಲ್‌ನಲ್ಲಿ ಶ್ರೀನಿವಾಸ ಆಸ್ಪತ್ರೆಗೆ ಕ್ಲಿನಿಕ್‌ ಉಸ್ತುವಾರಿ ವಹಿಸಲಾಗಿದ್ದು, ತಲಾ ಇಬ್ಬರಂತೆ ತಜ್ಞ ವೈದ್ಯರು ಪ್ರತಿದಿನ ಕ್ಲಿನಿಕ್‌ನಲ್ಲಿ ಇರುತ್ತಾರೆ. ಎಲ್ಲ ಕ್ಲಿನಿಕ್‌ಗಳು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಕಾರ್ಯಾಚರಿಸಲಿವೆ.

ಸೋಮವಾರ- ಶುಕ್ರವಾರದ ವರೆಗೆ
ಆಯುಷ್ಮತಿ ಕ್ಲಿನಿಕ್‌ಗಳು ಸೋಮವಾರದಿಂದ -ಶುಕ್ರವಾರದ ವರೆಗೆ ಕಾರ್ಯಾಚರಿಸಲಿವೆ. ಸೋಮವಾರ ವೈದ್ಯಕೀಯ ತಜ್ಞರು ಮತ್ತು ಚರ್ಮರೋಗ ತಜ್ಞರು, ಮಂಗಳವಾರ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಕಿವಿ, ಮೂಗು, ಗಂಟಲು ತಜ್ಞರು, ಬುಧವಾರ ಮೂಳೆ ಮತ್ತು ಕೀಲು ಹಾಗೂ ನೇತ್ರ ತಜ್ಞರು, ಗುರುವಾರ ಸ್ತ್ರೀರೋಗ ಮತ್ತು ಮಕ್ಕಳ ತಜ್ಞರು, ಶುಕ್ರವಾರ ಮಾನಸಿಕ ರೋಗ ಮತ್ತು ದಂತ ತಜ್ಞರು ಲಭ್ಯರಿರುತ್ತಾರೆ. ಪ್ರಯೋಗಾಲಯ ಸೇವೆ, ಉಚಿತ ತಪಾಸಣೆ, ಔಷಧ, ಆಪ್ತ ಸಮಾಲೋಚನೆ, ರೆಫರಲ್‌ ಸೇವೆ ದೊರೆಯುತ್ತದೆ.

ಉಡುಪಿಯಲ್ಲೂ ಉದ್ಘಾಟನೆ
ಉಡುಪಿ: ನಗರದ ಅಲಂಕಾರ್‌ ಚಿತ್ರಮಂದಿರದ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಯುಷ್ಮತಿ ಕ್ಲಿನಿಕ್‌ ಉದ್ಘಾಟನೆಗೊಂಡಿತು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌ ಉದ್ಘಾಟಿಸಿದರು. ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್‌, ಉಡುಪಿ ತಾ| ಆರೋಗ್ಯಾಧಿಕಾರಿ ಡಾ| ವಾಸುದೇವ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

ಮಡಿಕೇರಿಯಲ್ಲೂ ಚಾಲನೆ
ಮಡಿಕೇರಿ: ಕೊಡಗು ಜಿಲ್ಲಾಡಳಿತ, ಜಿ.ಪಂ., ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮತಿ ಕ್ಲಿನಿಕ್‌ಗೆ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಮತ್ತು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಸೋಮವಾರ ಚಾಲನೆ ನೀಡಿದರು. ಕ್ಲಿನಿಕ್‌ ನಗರದ ಮಹದೇವ ಪೇಟೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತೆರೆಯಲಾಗಿದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.