ಬೈಕಂಪಾಡಿ: ಸಮಸ್ಯೆ ಬಗೆಹರಿಸಲು ಕೈಗಾರಿಕೆ ಅದಾಲತ್‌ ನೆರವಾಗಲಿ


Team Udayavani, May 11, 2022, 11:43 AM IST

kaigarike

ಬೈಕಂಪಾಡಿ: ರಾಜ್ಯದ 2ನೇ ಅತೀ ದೊಡ್ಡ ಕೈಗಾರಿಕೆ ಪ್ರದೇಶವಾದ ಬೈಕಂಪಾಡಿ ಕೈಗಾರಿಕೆ ಪ್ರದೇಶದಲ್ಲಿ ತುರ್ತಾಗಿ ಆಗಬೇಕಾದ ಮೂಲಸೌಕರ್ಯ ಅಭಿವೃದ್ಧಿಗಳು ಆಡಳಿತ ಯಂತ್ರದ ನಿರ್ಲಕ್ಷ್ಯ ದಿಂದ ನಿಧಾನಗತಿಯಲ್ಲಿ ಸಾಗಿವೆ.

2015ರಿಂದ ಟೌನ್‌ಶಿಪ್‌ ಯೋಜನೆಗೆ ಬೈಕಂಪಾಡಿ ಸಣ್ಣ ಕೈಗಾರಿಕೆ ಸಂಘವು ಸತತ ಒತ್ತಡ ಹೇರುತ್ತಾ ಬಂದಿದ್ದರೂ ನಗರಾಭಿವೃದ್ಧಿ ಇಲಾಖೆಯಿಂದ ಪೂರಕ ಸ್ಪಂದನೆ ದೊರಕಿಲ್ಲ. ಕಾಯ್ದೆಯಲ್ಲಿ ತಿದ್ದುಪಡಿ ಮಾಡದೆ ಯಾವುದೇ ಕಡತಗಳು ಮುಂದೆಹೋಗುತ್ತಿಲ್ಲ. ಇದರಿಂದಾಗಿ ಇಲ್ಲಿನ ಸಮಸ್ಯೆಗಳು ಬಾಕಿಯುಳಿದಿವೆ. ತಂತ್ರಜ್ಞಾನ ದಿನದಿಂದ ದಿನಕ್ಕೆ ಬದಲಾವಣೆ ಆಗುತ್ತಿದ್ದರೂ ಇದರ ಉಪಯೋಗ ಮಾಡಿಕೊಳ್ಳುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಲಾಗುತ್ತಿಲ್ಲ ಏಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುವಂತಾಗಿದೆ.

ನೀರು ಶುದ್ಧೀಕರಣ ಘಟಕದ ಆವಶ್ಯಕತೆ ಯಿದ್ದು, ಈ ಹಿಂದಿನಂತೆ ಕೋಟ್ಯಂತರ ರೂ. ಖರ್ಚು ಮಾಡುವ ಪ್ರಮೇಯವಿಲ್ಲ. ನದಿ, ತೊರೆ, ಸಮುದ್ರದ ಮಾಲಿನ್ಯ ತಡೆಯಲು ಎಸ್‌ಟಿಪಿ ಘಟಕ ಪ್ರಾಮುಖ್ಯವಾಗಿದೆ. ಜಲಮಾಲಿನ್ಯಕ್ಕೆ ಕುಳಾಯಿ ಸಮೀಪದ ಬಗ್ಗುಂಡಿ ಕೆರೆ, ಜೋಕಟ್ಟೆ ಪ್ರದೇಶದ ಹಳ್ಳ, ತೊರೆಗಳು ಹರಿಯುವ ಪ್ರಕೃತಿ ರಮಣೀಯ ಪ್ರದೇಶ ಇಂದು ದುರ್ವಾಸನೆ ಬೀರುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಹದೆಗೆಟ್ಟ ಸರ್ವಿಸ್‌ ರಸ್ತೆ

ಕೈಗಾರಿಕೆ ಪ್ರದೇಶ, ಎನ್‌ಎಂಪಿಟಿಗೆ ನಿತ್ಯ ಸಾವಿರಾರು ಲಾರಿಗಳ ಓಡಾಟವಿದ್ದು, ಬೈಕಂಪಾಡಿ ಕೈಗಾರಿಕೆ ಪ್ರದೇಶಕ್ಕೆ ತಿರುಗುವ ರಸ್ತೆ, ಸರ್ವಿಸ್‌ ರಸ್ತೆಯ ಸ್ಥಿತಿ ಹದೆಗೆಟ್ಟಿದೆ. ಇಲ್ಲಿನ ರೈಲ್ವೇ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್‌ ಪಾಸ್‌ ಮಾಡಲು ಯೋಜನೆ ರೂಪಿಸಿದ್ದರೂ ಅರೆ ಬರೆ ಕಾಮಗಾರಿಯಿಂದ ಇದರ ಪ್ರಯೋಜನ ಕೈಗಾರಿಕೆ ಪ್ರದೇಶಕ್ಕೆ ಇನ್ನೂ ಸಿಕ್ಕಿಲ್ಲ. ಪರಿಣಾಮ ಕೂಳೂರು, ಪಣಂಬೂರು, ಬೈಕಂಪಾಡಿ ಮತ್ತಿತರ ಕಡೆಯಿಂದ ಬರುವ ಸಾವಿರಾರು ಲಾರಿಗಳು ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದು, ಸುಲಲಿತ ಓಡಾಟಕ್ಕೆ ಇದು ತಡೆಯಾಗುತ್ತಿದೆ.

ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಹತ್ತು ಹಲವು ಸಭೆ, ಚರ್ಚೆಗಳಾದರೂ ಇದುವರೆಗೂ ಹೇಳಿಕೆಗೆ ಸೀಮಿತವಾಗಿದೆ. ವಿವಿಧೆಡೆ ಜಾಗ ಗುರುತಿಸಿದರೂ ತುರ್ತು ನಿರ್ಧಾರ ಕೈಗೊಳ್ಳುವ, ಅನುಮೋದನೆ ನೀಡುವ ಕೆಲಸ ಕಾರ್ಯಗಳು ಆಡಳಿತ ಯಂತ್ರದ ನಿಧಾನ ಗತಿಯ ಕಾರ್ಯ ವೈಖರಿಯಿಂದ ಮುಂದೆ ಹೋಗುತ್ತಿಲ್ಲ. ಟ್ರಕ್‌ ಟರ್ಮಿನಲ್‌ನಿಂದ ಹೆದ್ದಾರಿ ಬದಿ ನಿಲ್ಲಿಸುವ ಲಾರಿಗಳಿಂದ ಮುಕ್ತಿ ದೊರೆತು ವಾಹನ ಅಪಘಾತ ಇಳಿಕೆಯಾಗುವುದರಲ್ಲಿ ಸಂಶಯವಿಲ್ಲ.

ಲಾರಿಗಳ ಓಡಾಟಕ್ಕೆ ಅಡಚಣೆ

ಕೆಐಡಿಬಿ ವ್ಯಾಪ್ತಿಯ ಈ ಕೈಗಾರಿಕೆ ಪ್ರದೇಶದಲ್ಲಿ ಹಾಕಲಾದ ನೀರಿನ ಕೊಳವೆಗಳು ಓಬಿರಾಯನ ಕಾಲದ್ದಾಗಿದ್ದು, ಇದೀಗ ನೀರಿನ ಒತ್ತಡ ತಾಳಲಾರದೆ ಬಿರುಕು ಬಿಡುತ್ತಿವೆ. ನೀರಿನ ಪೋಲು ತಡೆಯುವ ಉದ್ದೇಶದಿಂದ ಹಾಗೂ ಸಮರ್ಪಕವಾಗಿ ನೀರಿನ ಸರಬರಾಜು ಉದ್ದೇಶದಿಂದ ಹೊಸ ಪೈಪ್‌ಲೈನ್‌ ವ್ಯವಸ್ಥೆ ಅಗತ್ಯವಿದೆ. ಜಲಸಿರಿ ಯೋಜನೆಯ ಬಳಕೆಗೆ ಕೈಗಾರಿಕೆ ಪ್ರದೇಶಕ್ಕೆ ಅವಕಾಶ ನೀಡಲಾಗಿಲ್ಲ. ಕುಡಿಯುವ ನೀರಿನ ಯೋಜನೆಯೆಂದು ಸರಕಾರ ಜಾರಿ ಮಾಡಿರುವುದರಿಂದ ಅವರ ಮನವಿಯನ್ನು ತಳ್ಳಿಹಾಕಲಾಗಿದೆ. ಇನ್ನು ಕಾಮಗಾರಿಗೆಂದು ಅಗೆದು ಹಾಕಲಾದ ರಸ್ತೆಗಳನ್ನು ಕಾಮಗಾರಿ ಮುಗಿದ ಬಳಿಕ ಮತ್ತೆ ಸುಸ್ಥಿತಿಗೆ ತರಲು ವಿಳಂಬಿಸುತ್ತಿರುವುದು ಪ್ರದೇಶಕ್ಕೆ ಬರುವ ಲಾರಿಗಳ ಓಡಾಟಕ್ಕೆ ಅಡಚಣೆಯಾಗುತ್ತಿದೆ. ಇಎಸ್‌ಐ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಮತ್ತೂಂದು ಸಮಸ್ಯೆ,ಸಾವಿರಾರು ನೌಕರರು ಇಲ್ಲಿ ಕೆಲಸ ಮಾಡುತ್ತಿದ್ದು, ಮಹಿಳಾ ವೈದ್ಯೆಯ ನೇಮಕವಾಗಿಲ್ಲ. ಕಂಪೆನಿಗಳು ಇಎಸ್‌ಐಗೆ ನಿಗದಿತ ಪಾವತಿ ಮಾಡುತ್ತಿದ್ದರೂ ಇಲ್ಲಿನ ಆಸ್ಪತ್ರೆಗೆ ಹೆಚ್ಚಿನ ಸೌಕಯಒದಗಿಸದೆ ನೌಕರರು ದಿನವಿಡೀ ಚಿಕಿತ್ಸೆ, ಔಷಧಕ್ಕೆ ಕಾಯುವಂತಾಗಿದೆ.

-ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.