ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ
Team Udayavani, Oct 20, 2021, 2:00 PM IST
ಮಂಗಳೂರು : ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ಮನೆಗೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ.
ಕೇಸರಿ ಬಟ್ಟೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಸ್ಥಳಕ್ಕಾಗಮಿಸಿದ ಮಂಗಳೂರು ದಕ್ಷಿಣ ಪೊಲೀಸರು ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದರು.
ಬಜರಂಗದಳದ ಕೆಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.