ಗೋವಧೆ ನಿಷೇಧ; ರಾಷ್ಟ್ರ ಮಟ್ಟದಲ್ಲಿ ತೀರ್ಮಾನವಾಗಲಿ: ಸಚಿವ ಖಾದರ್‌


Team Udayavani, Apr 10, 2018, 7:00 AM IST

27.jpg

ಮಂಗಳೂರು: ಗೋವಧೆ ನಿಷೇಧದ ಬಗ್ಗೆ ಕೇಂದ್ರ ಸರಕಾರ ರಾಷ್ಟ್ರ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಿ ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ. ಇಡೀ ಏಷ್ಯಾ ಖಂಡದಲ್ಲಿ ಅತಿ ಹೆಚ್ಚು ಗೋಮಾಂಸ ರಫ್ತು ಭಾರತದಿಂದ ಆಗುತ್ತಿದೆ. ದೇಶದಲ್ಲಿ ಅದರಲ್ಲೂ ಮುಖ್ಯ ವಾಗಿ ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್‌ ಮತ್ತು ತ್ರಿಪುರಾ ರಾಜ್ಯಗಳಿಂದ ಅತ್ಯಧಿಕ ಗೋಮಾಂಸ ರಫ್ತಾಗುತ್ತಿದೆ. ಗೋಮಾಂಸ ಸೇವನೆಗೆ ಸಂಬಂಧಿಸಿ ಕೇರಳ, ಗೋವಾ ಮತ್ತಿತರ ಕೆಲವು ರಾಜ್ಯಗಳಿಗೆ ವಿನಾಯಿತಿ ನೀಡಲಾಗಿದೆ. ಹೀಗೆ ಕೆಲವು ರಾಜ್ಯಗಳಲ್ಲಿ ವಿನಾಯಿತಿ, ಕೆಲವು ರಾಜ್ಯಗಳಲ್ಲಿ ನಿಷೇಧ ಏಕೆ? ಇಡೀ ದೇಶಕ್ಕೆ ಅನ್ವಯವಾಗುವಂತೆ ಗೋವಧೆ ನಿಷೇಧದ ಬಗ್ಗೆ ನೀತಿಯನ್ನು ರೂಪಿಸಲಿ ಎಂದು ಸಚಿವರು ಸೋಮವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಗೋಕಳ್ಳರ ರಕ್ಷಣೆ ಮಾಡಿಲ್ಲ
ಚುನಾವಣೆ ಬಂದಾಗ ಬಿಜೆಪಿಗೆ ಮಾತನಾಡಲು ಬೇರೆ ವಿಷಯವಿಲ್ಲ. ಹಾಗಾಗಿ ಗೋವುಗಳ ವಿಷಯವನ್ನು ಎತ್ತಿಕೊಂಡು ರಾಜಕೀಯ ಮಾಡುತ್ತಿದೆ. ಗೋಕಳ್ಳರ ರಕ್ಷಣೆಗೆ ನಾನೆಂದೂ ಮುಂದಾಗಿಲ್ಲ. ಕೈರಂಗಳ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸುವಂತೆ ಗೃಹ ಸಚಿವರನ್ನು ಕೋರಿದ್ದೇನೆ ಎಂದರು.

ಭಟ್‌ ಹೇಳಿಕೆ ತರವಲ್ಲ
“ಯು.ಟಿ. ಖಾದರ್‌ ಭೇಟಿ ನೀಡಿದ ದೇವಸ್ಥಾನಗಳಲ್ಲೆಲ್ಲ ಬ್ರಹ್ಮಕಲಶ ನಡೆಸಬೇಕು’ ಎಂಬುದಾಗಿ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗ ನನ್ನ ಕ್ಷೇತ್ರದ ಜನರು ತಾವಾಗಿಯೇ ತಮ್ಮ ದೇವಸ್ಥಾನಗಳಿಗೆ ಭೇಟಿ ನೀಡುವಂತೆ ನನಗೆ ಆಹ್ವಾನ ನೀಡುತ್ತಿದ್ದಾರೆ ಎಂದರು. ದೇಶದ ಸಂಸ್ಕೃತಿ ಸಂಸ್ಕಾರವನ್ನು ಚೆನ್ನಾಗಿ ತಿಳಿದುಕೊಂಡವರು ಎಲ್ಲ ಧರ್ಮೀಯರೂ ಸೌಹಾರ್ದದಿಂದ ಬದುಕುತ್ತಿರುವ ಜಿಲ್ಲೆಯಲ್ಲಿ ಇಂತಹ ಹೇಳಿಕೆ ಕೊಡಬಾರದಿತ್ತು, ಅವರಿಗೆ ಇದು ಶೋಭೆ ತಾರದು ಎಂದು ಹೇಳಿದರು.

ಕೇರಳದ ಗಡಿ ಪ್ರದೇಶಗಳಲ್ಲಿ ಚೆಕ್‌ ಪೋಸ್ಟ್‌ ನಿರ್ಮಿಸಿದರೆ ಎಲ್ಲ ಅಕ್ರಮ ಗಳಿಗೂ ಕಡಿವಾಣ ಬಿದ್ದೀತು ಎಂದರು. ಮಂಗಳೂರು ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ಪ್ರಶ್ನಿಸಿದಾಗ, ಚುನಾವಣೆಯಲ್ಲಿ ಯಾರು ಗೆಲ್ಲಬೇಕು ಎಂಬುದನ್ನು ಜನರೇ ತೀರ್ಮಾನಿಸುತ್ತಾರೆ ಎಂದರು. ಸೌದಿ ಅರೇಬಿಯಾದಲ್ಲಿ ಸಭೆ ನಡೆಸಿದ ಬಗ್ಗೆ ಪ್ರಸ್ತಾವಿಸಿದಾಗ, ಉಮ್ರಾ ಪ್ರವಾಸಕ್ಕೆ ಹೋಗಿದ್ದಾಗ ರಾಜ್ಯ ಕರಾವಳಿಯ ಯುವಜನರು ಕಾರ್ಯಕ್ರಮ ವ್ಯವಸ್ಥೆ ಮಾಡಿದ್ದು, ಅದರಲ್ಲಿ ಭಾಗ ವಹಿಸಿದ್ದೆ ಎಂದು ವಿವರಿಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮುಖಂಡರಾದ ಗಂಗಾಧರ ಉಳ್ಳಾಲ, ಸದಾಶಿವ ಉಳ್ಳಾಲ, ಧನಂಜಯ ಅಡ³ಂಗಾಯ, ಮಮತಾ ಡಿ.ಎಸ್‌. ಗಟ್ಟಿ, ಪದ್ಮನಾಭ ನರಿಂಗಾನ, ಸಂತೋಷ್‌ ಕುಮಾರ್‌ ಶೆಟ್ಟಿ, ಎನ್‌.ಎಸ್‌. ಕರೀಂ, ಮಹಮದ್‌ ಮೋನು, ಸಂತೋಷ್‌ ಶೆಟ್ಟಿ ಉಪಸ್ಥಿತರಿದ್ದರು. 

ನೀತಿ ಸಂಹಿತೆ: ಮಾಹಿತಿ ಬೇಕು
ಚುನಾವಣಾ ನೀತಿ ಸಂಹಿತೆ ಸಂಬಂಧ ಜನರಲ್ಲಿರುವ ಗೊಂದಲ ನಿವಾರಣೆಗೆ ಜಿಲ್ಲೆಯ ಎಲ್ಲ ಧಾರ್ಮಿಕ ಸಂಘ ಸಂಸ್ಥೆಗಳು ಮತ್ತು ಯುವಜನ ಸಂಘಟನೆಗಳನ್ನು ಕರೆಸಿ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳುವಂತೆ ಅಧಿಕಾರಿಗಳನ್ನು ಕೇಳಿಕೊಳ್ಳಲಾಗಿದೆ ಎಂದರು ಸಚಿವರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.