ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ


Team Udayavani, Mar 21, 2023, 7:32 AM IST

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಮಂಗಳೂರು: ರಾ.ಹೆ. 169 ಚತುಷ್ಪಥ ಯೋಜನೆಯಲ್ಲಿ ಭೂಸ್ವಾಧೀನ ಸರಿಯಾಗಿ ಆಗದ ಕಾರಣ ಕಾಮಗಾರಿ ನಿಧಾನವಾಗಿದ್ದು, ಇದೇ ರೀತಿ ಮುಂದುವರಿದರೆ ಗುತ್ತಿಗೆದಾರ ಕಂಪೆನಿ ದಿಲೀಪ್‌ ಬಿಲ್ಡ್‌ ಕಾನ್‌ ಕಾಮಗಾರಿಯನ್ನು ಅರ್ಧಕ್ಕೆ ಕೈಬಿಡುವ ಆತಂಕ ಇದೆ ಎಂದು ರಾ. ಹೆ. ಪ್ರಾದೇಶಿಕ ಅಧಿಕಾರಿ ವಿವೇಕ್‌ ಜೈಸ್ವಾಲ್‌ ತಿಳಿಸಿದ್ದಾರೆ.

ಅವರು ರಾ.ಹೆ. 169ಗೆ ಸಂಬಂಧಿಸಿದ ಭೂಮಾಲಕರ ಜತೆ ನಡೆದ ಸಭೆಯಲ್ಲಿ ಈ ವಿಚಾರ ತಿಳಿಸಿದರು. ಭೂಮಾಲಕರ ಹೋರಾಟ ಸಮಿತಿಯ ಅಧ್ಯಕ್ಷೆ ಮರಿಯಮ್ಮ ಥಾಮಸ್‌ ಮಾತನಾಡಿ, ಭೂಸ್ವಾಧೀನ ಪ್ರಕ್ರಿಯೆ ನಿಧಾನಗೊಳ್ಳಲು ಭೂಸ್ವಾಧೀನಾಧಿಕಾರಿ ಕಚೇರಿ ಮತ್ತು ರಾ.ಹೆ. ಪ್ರಾಧಿಕಾರವೇ ಹೊಣೆೆ ಎಂದರು.

ಸಮಿತಿಯ ಸಂಚಾಲಕ ಪ್ರಕಾಶ್‌ಚಂದ್ರ ಮಾತನಾಡಿ, ಸಮಿತಿಯ ವತಿಯಿಂದ ಇಲಾಖೆಗೆ ಸಲ್ಲಿಸಿದ ಆಕ್ಷೇಪ ಮತ್ತು ದಾಖಲೆಗಳನ್ನು ಸರಿಯಾಗಿ ಓದದೆ ಅಸಡ್ಡೆ ಮತ್ತು ಬೇಜವಾಬ್ದಾರಿ ವರ್ತನೆಯನ್ನು ಪ್ರಾಧಿಕಾರ ತೋರ್ಪಡಿಸುತ್ತಿದೆ ಎಂದರು.

ಹೋರಾಟ ಸಮಿತಿಯ ಪ್ರಮುಖ ರತ್ನಾಕರ ಶೆಟ್ಟಿ, ಹೆದ್ದಾರಿ ಪ್ರಾಧಿಕಾರವು ಯೋಜನೆಯನ್ನು ರದ್ದು ಪಡಿಸಲು ಯೋಚಿಸುತ್ತಿರುವುದಾದರೆ ಕೂಡಲೇ ರದ್ದು ಪಡಿಸಲಿ ಎಂದರು.
ಅವೈಜ್ಞಾನಿಕವಾಗಿ ಮಾರ್ಗನಕ್ಷೆಯ ಬದಲಾವಣೆ ಮತ್ತು ಅಸುರಕ್ಷಿತ ರಸ್ತೆ ಕಾಮಗಾರಿಗಳ ಬಗ್ಗೆ ರವೀಂದ್ರನ್‌ ಗಮನ ಸೆಳೆದರು. ಸರಿಯಾಗಿ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳದೆ ಕಾಮಗಾರಿ ಪ್ರಾರಂಭಿಸಿರುವುದರಿಂದ ಅಪಘಾತಗಳು ಸಂಭವಿಸಿವೆ. ಸೂಕ್ತ ಸುರಕ್ಷ ಕ್ರಮ, ರಸ್ತೆ ವಿಭಜನ ಸ್ಥಳಗಳಲ್ಲಿ ಪ್ರತಿಫಲಕಗಳು, ಸೂಚನ ಫಲಕ ಅಳವಡಿಸಬೇಕು ಎಂದು ಸಾಣೂರು ನರಸಿಂಹ ಕಾಮತ್‌ ತಿಳಿಸಿದರು.

ಡಾ| ಪ್ರೇಮಲತಾ ಶೆಟ್ಟಿ ಮಾತ ನಾಡಿ, ಪರಿಹಾರ ಮೊತ್ತವನ್ನು ನಿರ್ಧರಿಸುವಾಗ ಅಕ್ಕಪಕ್ಕದ ಉಡುಪಿ ಮತ್ತು ದ. ಕನ್ನಡ ಜಿಲ್ಲೆಯಲ್ಲಿ ವ್ಯತಿರಿಕ್ತವಾದ ಮಾನದಂಡವನ್ನು ಏಕೆ ಅನುಸರಿಸಿದ್ದೀರಿ ಎಂದು ಪ್ರಶ್ನಿಸಿದರು. ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಜರಿದ್ದರು.

ತಿಂಗಳಲ್ಲಿ ಪರಿಹಾರ ನಿರೀಕ್ಷೆ
ಪರಿಷ್ಕೃತ ಪರಿಹಾರವನ್ನು ನೀಡುವಂತೆ ಹೈಕೋರ್ಟ್‌ ನೀಡಿರುವ ಆದೇಶದ ಅನ್ವಯ ಒಂದು ತಿಂಗಳಲ್ಲಿ ಪರಿಹಾರ ನೀಡುವುದಾಗಿ ತಿಳಿಸಿದ ಅಧಿಕಾರಿ, ರಾ.ಹೆ. ನಿರ್ಮಾಣ ವಿನ್ಯಾಸ ಕುರಿತ ಆಯಾ ಗ್ರಾಮಗಳ ನಕ್ಷೆಯನ್ನು ಪ್ರತೀ ಪಂಚಾಯತ್‌ ಕಚೇರಿಗೆ ನೀಡುವುದಕ್ಕೂ ಒಪ್ಪಿಗೆಯಿತ್ತರಲ್ಲದೆ ಈ ಬಗ್ಗೆ ಯೋಜನಾಧಿಕಾರಿಗೆ ಸೂಚಿಸಿದರು. ಪರಿಹಾರ ಮೊತ್ತದಲ್ಲಿ ಜಿಎಸ್‌ಟಿ ಮತ್ತು ಟಿಡಿಎಸ್‌ ಕಡಿತಗೊಳಿಸುತ್ತಿರುವ ಬಗ್ಗೆ ಸನತ್‌ ಕುಮಾರ್‌ ಶೆಟ್ಟಿ ಅವರ ಆಕ್ಷೇಪಕ್ಕೆ ಉತ್ತರಿಸಿ, ಯಾವುದೇ ರಾಜ್ಯದಲ್ಲಿಯೂ ಕೂಡ ಪರಿಹಾರ ಮೊತ್ತದಿಂದ ಜಿಎಸ್‌ಟಿ ಮತ್ತು ಟಿಡಿಎಸ್‌ ಕಡಿತಗೊಳಿಸುತ್ತಿಲ್ಲ. ಕರ್ನಾಟಕದಲ್ಲಿ ಈ ರೀತಿ ಯಾಕೆ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Retired ACP ಸುಭಾಷ್ ಚಂದ್ರ ವಿಧಿವಶ ; ಗಣ್ಯರ ಸಂತಾಪ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ಶಾಲಾರಂಭ: ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಸಿದ್ಧ

ಶಾಲಾರಂಭ: ಚಿಣ್ಣರ ಸ್ವಾಗತಕ್ಕೆ ಶಾಲೆಗಳು ಸಿದ್ಧ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮೂರು ತಿಂಗಳಿಂದ ಅಂಗನವಾಡಿ ಮಕ್ಕಳಿಗಿಲ್ಲ ಹಾಲು

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಮಳೆಗಾಲ: ವಾಹನ ಸವಾರರಿಗೆ ಮುನ್ನೆಚ್ಚರಿಕೆ