ಪಟ್ಲ ಸತೀಶ್ ಶೆಟ್ರ ಸಾರಥ್ಯದಲ್ಲಿ ಪಾವಂಜೆ ಯಕ್ಷಗಾನ ಮೇಳ? ಈ ಬಗ್ಗೆ ಪಟ್ಲರು ಹೇಳುವುದೇನು?


Team Udayavani, Oct 12, 2020, 12:04 PM IST

ಪಟ್ಲ ಸತೀಶ್ ಶೆಟ್ರ ಸಾರಥ್ಯದಲ್ಲಿ ಪಾವಂಜೆ ಯಕ್ಷಗಾನ ಮೇಳ? ಈ ಬಗ್ಗೆ ಪಟ್ಲರು ಹೇಳುವುದೇನು?

ಮಂಗಳೂರು: ಈ ಹಿಂದೆ ಕಟೀಲು ಯಕ್ಷಗಾನ ಮೇಳದಲ್ಲಿದ್ದ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರ ಸಾರಥ್ಯದಲ್ಲಿ ಶೀಘ್ರದಲ್ಲೇ ಹೊಸ ಮೇಳ ಆರಂಭಗೊಳ್ಳಲಿದ್ದು, ಸಿದ್ಧತೆಗಳು ನಡೆಯುತ್ತಿವೆ.

ಪಟ್ಲ ಸತೀಶ್‌ ಶೆಟ್ಟಿ ಅವರ ಸಾರಥ್ಯದಲ್ಲಿ ಹೊಸ ಮೇಳವೊಂದು ಆರಂಭವಾಗಲಿದೆ ಎಂಬ ಊಹಾಪೋಹ ಹಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಮೇಳ ಆರಂಭವಾಗಲಿದೆ.

ಈ ಬಗ್ಗೆ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ,”ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಮೇಳದ ಭಾಗವತಿಕೆಗೆ ಸಂಬಂಧಪಟ್ಟಂತೆ ಕ್ಷೇತ್ರದ ಕಮಿಟಿ-ನನ್ನ ನಡುವೆ ಮಾತುಕತೆ ನಡೆದಿದೆ. ಆ ಮೇಳದಲ್ಲಿ ನಾನು ಕಲಾವಿದ ಇರಬಹುದಷ್ಟೇ; ಆ ಮೂಲಕ ನಾನು ಸುಬ್ರಹ್ಮಣ್ಯ ದೇವರ ಸೇವೆ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಆಶ್ಲೇಷ‌ ನಕ್ಷತ್ರ ಹಿನ್ನಲೆ ಕುಕ್ಕೆಯಲ್ಲಿ ಭಕ್ತರ ದಂಡು: ರವಿವಾರ ರಾತ್ರಿಯಿಂದಲೇ ಸರತಿ ಸಾಲು

ಪಾವಂಜೆ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಮೇಳ ಆರಂಭದ ಕುರಿತು ಕಳೆದ ಮೂರು ವರ್ಷಗಳ ಹಿಂದೆಯೇ ಚಿಂತನೆ ಇತ್ತು. ಸದ್ಯ ಪ್ರಥಮ ಹಂತದಲ್ಲಿದೆ. ಪಟ್ಲ ಸತೀಶ್‌ ಶೆಟ್ಟಿ ಹೆಸರು ಕೇಳಿಬಂದ ಕಾರಣ ಈ ವಿಚಾರ ಮುನ್ನೆಲೆಗೆ ಬಂದಿದೆ. ಪಟ್ಲ ಸತೀಶ್‌ ಶೆಟ್ಟಿ ಅವರನ್ನು ಭಾಗವತರಾಗಿ ಆಯ್ಕೆ ಮಾಡುವ ಕುರಿತು ಚರ್ಚೆ ನಡೆಯುತ್ತಿದ್ದು, ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್‌ ತಿಳಿಸಿದ್ದಾರೆ.

ಯಕ್ಷಗಾನ

ಎರಡು ವರ್ಷಗಳ ಹಿಂದೆ ಕಟೀಲಿನ ಆರು ಮೇಳಗಳಲ್ಲಿ ಕಲಾವಿದರ ವರ್ಗಾವಣೆ ಮಾಡಲಾಗಿತ್ತು. ಈ ವೇಳೆ ಐದನೇ ಮೇಳದಲ್ಲಿದ್ದ ಪಟ್ಲರನ್ನು ನಾಲ್ಕನೇ ಮೇಳಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ಬೆಳವಣಿಗೆಯನ್ನು ವಿರೋಧಿಸಿ ಐದನೇ ಮೇಳದ ಕೆಲವು ಕಲಾವಿದರು ಬಂಡೆದಿದ್ದರು. ಇದಾಗಿ ವರ್ಷಗಳ ನಂತರ ಪಟ್ಲರನ್ನೇ ಮೇಳದಿಂದ ಹೊರಹಾಕಲಾಗಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು.

ಕಟೀಲು ಮೇಳದಿಂದ ಬಂಡಾಯವೆದ್ದಿದ್ದ ಕೆಲವು ಕಲಾವಿದರು ನಂತರ ಇತರ ಯಕ್ಷಗಾನ ಮೇಳಗಳಿಗೆ ಸೇರಿದ್ದರು. ಈ ಕಲಾವಿದರು ಮತ್ತೆ ಪಟ್ಲರ ಜೊತೆ ಸೇರಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.