ಭಟ್ಕಳದ ವ್ಯಕ್ತಿ ಬಳಿ 25.7 ಲ. ರೂ. ವಿದೇಶಿ ಕರೆನ್ಸಿ ಪತ್ತೆ


Team Udayavani, Jan 6, 2017, 3:45 AM IST

currency.jpg

ಮಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿ.ಆರ್‌.ಐ.) ಮಂಗಳೂರು ಕೇಂದ್ರದ ಅಧಿಕಾರಿಗಳು ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ವಿದೇಶಕ್ಕೆ ಹಾರಲೆತ್ನಿಸುತ್ತಿದ್ದ ಭಟ್ಕಳದ ಮೊಹಮದ್‌ ಫಾರೂಕ್‌ ಆರ್ಮರ್‌ (51)ನನ್ನು ಬಂಧಿಸಿ ಅಕ್ರಮವಾಗಿ ಸಾಗಿಸಲೆತ್ನಿಸಿದ 25,07, 162 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶ ಪಡಿಸಿಕೊಂಡಿದ್ದಾರೆ. 

ಅಮೆರಿಕನ್‌ ಡಾಲರ್‌, ಬ್ರಿಟಿಷ್‌ ಪೌಂಡ್‌, ಯೂರೋ, ಯುಎಇ ಧಿರಂ, ಸೌದಿ ರಿಯಾಲ್‌, ಖತಾರ್‌ ರಿಯಾಲ್‌ಗ‌ಳು ವಶ ಪಡಿಸಿಕೊಂಡಿರುವ ವಿದೇಶಿ ಕರೆನ್ಸಿಯಲ್ಲಿ ಒಳಗೊಂಡಿವೆ. 

ಖಚಿತ ಮಾಹಿತಿ ಮೇರೆಗೆ ಗುರುವಾರ ಮುಂಜಾನೆ ಮಿಂಚಿನ ಕಾರ್ಯಾಚರಣೆ ನಡೆಸಿದ ಡಿ.ಆರ್‌.ಐ. ಅಧಿಕಾರಿಗಳು ದುಬಾೖಗೆ ತೆರಳಲಿದ್ದ  ಸ್ಪೈಸ್‌ ಜೆಟ್‌ ವಿಮಾನದಲ್ಲಿ  ಪ್ರಯಾಣಿಸಲು ಸಿದ್ಧತೆ ಮಾಡಿದ್ದ ಮೊಹಮದ್‌ ಫಾರೂಕ್‌ ಆರ್ಮರ್‌ನನ್ನು ವಶಕ್ಕೆ ಪಡೆದು ಬಳಿಕ ಬಂಧಿಸಿದರು. 

ಇಮಿಗ್ರೇಶನ್‌ ವಿಭಾಗದ ಅಧಿಕಾರಿಗಳು ಆರೋಪಿಯ ಪಾಸ್‌ಪೋರ್ಟ್‌ ಮತ್ತು ಇತರ ತಪಾಸಣೆಯ ವಿಧಿ ವಿಧಾನಗಳನ್ನು  ಮುಗಿಸಿದ್ದರು. ಆದರೆ ಡಿ.ಆರ್‌.ಐ. ಅಧಿಕಾರಿಗಳಿಗೆ ಸಂಶಯ ಉಳಿದಿತ್ತು. ಅವರು ಮೊಹಮದ್‌ ಫಾರೂಕ್‌ ಆರ್ಮರ್‌ನ ಲಗ್ಗೇಜ್‌ನ್ನು ಕೂಲಂಕುಷವಾಗಿ ತಪಾಸಣೆಗೆ ಒಳ ಪಡಿಸಿದಾಗ ಬಿಸ್ಕೆಟ್‌ ಮತ್ತು ಬೇಕರಿ ಉತ್ಪನ್ನಗಳ ಪ್ಯಾಕೆಟ್‌ಗಳೆಡೆಯಲ್ಲಿ  ವಿದೇಶಿ ಕರೆನ್ಸಿಗಳ ಕಂತೆಯನ್ನು ಬಚ್ಚಿಟ್ಟಿರುವುದು ಕಂಡು ಬಂತು.  

ಆರೋಪಿಯನ್ನು ವಿಚಾರಣೆಗೆ ಒಳ ಪಡಿಸಿದಾಗ ಈ ಹಿಂದೆ ಆತ ಕೊಲ್ಲಿ ರಾಷ್ಟ್ರಗಳಿಂದ ಬರುವಾಗ ಹಲವು ಬಾರಿ ಮೊಬೈಲ್‌ ಫೋನ್‌ಗಳನ್ನು ಹಾಗೂ ಚಾಕೊಲೇಟ್‌ ಮತ್ತಿತರ ತಿಂಡಿ ತಿನಿಸುಗಳನ್ನು ಅಕ್ರಮವಾಗಿ ಭಾರತಕ್ಕೆ ತಂದಿರುವ ಬಗ್ಗೆ ತಿಳಿಸಿದ್ದಾನೆ. 

ಹಾಗೆ ತಂದ ವಸ್ತುಗಳನ್ನು ಭಟ್ಕಳ ಪರಿಸರದಲ್ಲಿರುವ ಭೂಗತ ವ್ಯಕ್ತಿಗಳಿಗೆ ಮಾರಾಟ ಮಾಡಿ ಅವರಿಂದ ವಿದೇಶಿ ಕರೆನ್ಸಿಗಳನ್ನು ಸಂಗ್ರಹಿಸಿರುವ ಬಗೆಗೂ ಈ ಸಂಧಧಿರ್ಭಧಿದಲ್ಲಿ ಆತ ತಿಳಿಧಿಸಿದ್ದಾನೆ. 

ಈ ಭೂಗತ ವ್ಯಕ್ತಿಗಳು ಹಾಗೂ ಅವರ ಚಟುವಟಿಕೆಗಳ ಕುರಿತು ತನಿಖೆ ನಡೆಸ ಬೇಕಾಗಿದೆ ಎಂದು ಡಿ.ಆರ್‌.ಐ. ಅಧಿಕಾರಿಗಳು ತಿಳಿಸಿದ್ದಾರೆ. 

ಮುಂದಿನ ತನಿಖೆಯು ಅನಧಿಕೃತ ಕರೆನ್ಸಿ ವ್ಯವಹಾರ ನಡೆಸುವವರು ಮತ್ತು ಹವಾಲಾ ನಿರ್ವಾಹಕರ ಬಗ್ಗೆ ಬೆಳಕು ಚೆಲ್ಲುವ ಸಾಧ್ಯತೆ ಇದೆ ಎಂದು ಡಿಆರ್‌ಐ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.