ನೀತಿಸಂಹಿತೆ ಉಲ್ಲಂಘಿಸಿ ಪುಸ್ತಕ ಹಂಚಿಕೆ: ಬಿಜೆಪಿ ದೂರು
Team Udayavani, Apr 18, 2019, 6:43 AM IST
ಮಂಗಳೂರು: ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಸುಳ್ಳು ಆರೋಪದ ಪುಸ್ತಕಗಳನ್ನು ಚುನಾವಣ ನೀತಿ ಸಂಹಿತೆಗೆ ವಿರುದ್ಧವಾಗಿ ಮುದ್ರಿಸಿ ಹಂಚಲಾಗಿದೆ ಎಂದು ಆರೋಪಿಸಿ ದ.ಕ. ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ವಿರುದ್ಧ ದ.ಕ.ಬಿಜೆಪಿ ಕಾನೂನು ಘಟಕ ಚುನಾವಣಾಧಿಕಾರಿಗೆ ಬುಧವಾರ ದೂರು ನೀಡಿದೆ.
ರಫೇಲ್ ಯುದ್ಧ ವಿಮಾನ ಖರೀದಿ ವ್ಯವಹಾರದಲ್ಲಿ ವಿಮಾನದ ಬೆಲೆಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಮತ್ತು ಇಲ್ಲಿ ಅವ್ಯವಹಾರ ಕಂಡು ಬಂದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆರೋಪ ಹೊರಿಸಿ ಪುಸ್ತಕವನ್ನು ಹಂಚಿಕೆ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜಿಲ್ಲಾ ಚುನಾವಣಾಧಿಕಾರಿ ಶಶಿಕಾಂತ ಸೆಂಥಿಲ್ ಅವರಿಗೆ ದೂರು ಸಲ್ಲಿಸಿದ ನಿಯೋಗದಲ್ಲಿ ವಕೀಲರಾದ ಸುಧಾಕರ ಜೋಶಿ, ಸಂತೋಷ್ ನಾಯಕ್ ಮತ್ತು ಪುರಂದರ ಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ