ಪಾಲಿಕೆ: ಬ್ಲ್ಯಾಕ್‌ಸ್ಪಾಟ್‌ ಜಾಗವಿನ್ನು ಮಿನಿ ಗಾರ್ಡನ್‌!


Team Udayavani, Apr 4, 2022, 11:21 AM IST

mini-garden

ಮಹಾನಗರ: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದರೂ ಕೆಲವು ಕಡೆಗಳಲ್ಲಿ ಕಸ ರಾಶಿ ಬಿದ್ದು, ಬ್ಲ್ಯಾಕ್‌ಸ್ಪಾಟ್‌ ಆಗಿ ಪರಿವರ್ತನೆಯಾಗುತ್ತಿದೆ. ಆ ಪ್ರದೇಶವನ್ನು ಸುಂದರೀಕರಣ, ಮಿನಿ ಗಾರ್ಡನ್‌ ನಿರ್ಮಿಸುವ ಮುಖೇನ ಸ್ವಚ್ಛತೆಗೆ ಗಮನ ನೀಡಲು ಪಾಲಿಕೆ ಮುಂದಾಗಿದೆ.

ಇತ್ತೀಚಿನ ಕೆಲವು ದಿನಗಳಲ್ಲಿ ನಗರದ 11 ಕಡೆಗಳಲ್ಲಿ ಬ್ಲ್ಯಾಕ್‌ಸ್ಪಾಟ್‌ ಸುಂದರೀಕರಣ ಗೊಳಿಸಲಾಗಿದೆ. ಮುಖ್ಯವಾಗಿ ಮಣ್ಣಗುಡ್ಡೆ ವಾರ್ಡ್‌, ಕನಕರಬೆಟ್ಟು, ಅಳಪೆ ಮಾರುಕಟ್ಟೆ ಪ್ರದೇಶದ ತಲಾ ಎರಡು ಕಡೆಗಳಲ್ಲಿ ಜಪ್ಪು, ಡೊಂಗರಕೇರಿ, ಬಾಬುಗುಡ್ಡೆ ಮೆಸ್ಕಾಂ ರಸ್ತೆ, ಅತ್ತಾವರದ ಕೆಎಂಸಿ ಆಸ್ಪತ್ರೆ ಹಿಂಭಾಗ, ರಥಬೀದಿ ಹೂವಿನ ಮಾರುಕಟ್ಟೆಯ ತಲಾ ಒಂದು ಕಡೆಯಲ್ಲಿ ವಿವಿಧ ಪರಿಕಲ್ಪನೆಯ ಮುಖೇನ ಸುತ್ತಲಿನ ಪ್ರದೇಶ ಸುಂದರಗೊಳಿಸಲಾಗಿದೆ.

ಕಸ ರಾಶಿ ಬಿದ್ದು, ಬ್ಲ್ಯಾಕ್‌ಸ್ಪಾಟ್‌ ಆಗಿರುವ ಪ್ರದೇಶವನ್ನು ಸ್ವತ್ಛಗೊಳಿಸಿ ಆ ಜಾಗದಲ್ಲಿ ಸ್ವತ್ಛತೆಯ ಅರಿವು ಮೂಡಿಸುವ ಬ್ಯಾನರ್‌ ಅಳವಡಿಸಲಾಗುತ್ತಿದೆ. ಕೆಲವು ಕಡೆಗಳಲ್ಲಿ ಗೋಡೆ ಬರಹದ ಮುಖೇನ ಸ್ವಚ್ಛತೆಯ ಜಾಗೃತಿ ಮೂಡಿಸಲಾಗುತ್ತಿದೆ. ಇನ್ನೂ ಕೆಲವೆಡೆ ಮಿನಿ ಪಾರ್ಕ್‌ ನಿರ್ಮಿಸುವ ಮೂಲಕ ನಿರ್ವಹಣೆಗೂ ಒತ್ತು ನೀಡಲಾಗುತ್ತದೆ. ಈ ರೀತಿಯಾಗಿ ನಗರದ ಸ್ವಚ್ಛತೆಯ ಕಡೆ ಗಮನ ನೀಡಲು ಪಾಲಿಕೆ ಮುಂದಾಗಿದೆ.

12 ಕಡೆ ಸೋಲಾರ್‌ ಸಿಸಿ ಕೆಮರಾ

ಬ್ಲ್ಯಾಕ್‌ಸ್ಪಾಟ್‌’ಗಳನ್ನು ನಿಯಂತ್ರಿಸಲು ನಗರದ 12 ಕಡೆಗಳಲ್ಲಿ ಸೋಲಾರ್‌ ಚಾಲಿತ ಸಿಸಿ ಕೆಮರಾ ಅಳವಡಿಸಲಾಗಿದೆ. ಈ ಸಿಸಿ ಕೆಮರಾಕ್ಕೆ ಸೋಲಾರ್‌ ವ್ಯವಸ್ಥೆ ಅಳವಡಿಸಿರುವ ಕಾರಣ ಯಾವುದೇ ರೀತಿಯ ಕೇಬಲ್‌ ಸಂಪರ್ಕ ಅಳವಡಿಸುವ ಆವಶ್ಯಕತೆ ಇರುವುದಿಲ್ಲ. ಇದೇ ಕಾರಣಕ್ಕೆ ಈ ಕೆಮರಾ ಕಂಬವನ್ನು ಒಂದು ಕಡೆಯಿಂದ ಮತ್ತೂಂದು ಕಡೆಗೆ ಸ್ಥಳಾಂತರ ಮಾಡಲೂ ಸಾಧ್ಯವಿದೆ. ಇದೇ ಕಾರಣಕ್ಕೆ ನಗರದಲ್ಲಿ ಯಾವ ಪ್ರದೇಶಕ್ಕೆ ಸಿಸಿ ಕೆಮರಾ ಅಗತ್ಯವಿದೆ ಎಂಬುವುದನ್ನು ತಿಳಿದು ಸ್ಥಳಾಂತರಿಸುವ ಕೆಲಸವೂ ನಡೆಯುತ್ತಿದೆ.

ಆರು ತಿಂಗಳಲ್ಲಿ 65,000 ರೂ. ದಂಡ ವಸೂಲಿ

ಇತ್ತೀಚಿನ ದಿನಗಳಲ್ಲಿ ನಗರದ ರಸ್ತೆ ಬದಿಗಳಲ್ಲಿ ಕಸ ಎಸೆದಿರುವುದು ಕಾಣುವುದು ಸಾಮಾನ್ಯವಾಗಿದೆ. ಈ ನಿಟ್ಟಿನಲ್ಲಿ ಮನಪಾ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ದುಬಾರಿ ದಂಡ ಪ್ರಯೋಗಕ್ಕೆ ಮುಂದಾಗಿದೆ. ಆರು ತಿಂಗಳಿನಲ್ಲಿ ಪಾಲಿಕೆ ವ್ಯಾಪ್ತಿ ಸುಮಾರು 65,000 ರೂ. ದಂಡ ವಸೂಲಿ ಮಾಡಲಾಗಿದೆ. ಒಂದು ವೇಳೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಕಸ ಎಸೆಯುವುದು/ಹಾಕುವುದು ಕಂಡುಬಂದಲ್ಲಿ ಅವರ ಮೇಲೆ 10,000 ರೂ.ದಿಂದ ಭಾರೀ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ‘ಉದಯವಾಣಿ ಸುದಿನ’ ಕ್ಕೆ ತಿಳಿಸಿದ್ದಾರೆ.

ಬ್ಲ್ಯಾಕ್‌ಸ್ಪಾಟ್‌  ನಿರ್ಮೂಲನೆಗೆ ಒತ್ತು

ಬ್ಲ್ಯಾಕ್‌ಸ್ಪಾಟ್‌ ಪ್ರದೇಶ ನಿರ್ಮೂಲನೆ ನಿಟ್ಟಿನಲ್ಲಿ ಪಾಲಿಕೆ ಕ್ರಮಕೈಗೊಂಡಿದ್ದು, ಆ ಪ್ರದೇಶದಲ್ಲಿ ಸುಂದರೀಕರಣಗೊಳಿಸಲಾಗಿದೆ. ಇಂತಹ ಪ್ರದೇಶಗಳಲ್ಲಿ ಕಸ ಎಸೆಯುವವರ ಸಂಖ್ಯೆ ಕಡಿಮೆಯಾಗಿದೆ. ರಸ್ತೆ ಬದಿಗಳಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ನಗರದ 12 ಕಡೆಗಳಲ್ಲಿ ಸೋಲಾರ್‌ ಸಿಸಿ ಕೆಮರಾ ಅಳವಡಿಸಲಾಗಿದ್ದು, ಕಸ ಎಸೆಯುವವರನ್ನು ಪತ್ತೆ ಹಚ್ಚಿ ಅವರಿಗೆ ದಂಡ ವಿಧಿಸಲಾಗುತ್ತಿದೆ. -ಶಬರೀನಾಥ್‌, ಪಾಲಿಕೆ ಪರಿಸರ ಅಭಿಯಂತ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.