ಶಾಲೆಯಲ್ಲಿ ಧರ್ಮ ಅವಹೇಳನ ಪ್ರಕರಣ: ವಿದ್ಯಾರ್ಥಿನಿಯ ತಾಯಿಗೆ ಜೀವ ಬೆದರಿಕೆ: ಎಫ್ಐಆರ್ ದಾಖಲು
Team Udayavani, Feb 22, 2024, 12:10 AM IST
ಮಂಗಳೂರು: ನಗರದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂಬ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಶಾಲೆಯ ವಿದ್ಯಾರ್ಥಿನಿಯೋರ್ವರ ತಾಯಿ ಕವಿತಾ ಅವರಿಗೆ ಅಪರಿಚಿತರು ಜೀವಬೆದರಿಕೆ ಹಾಕಿರುವ ಕುರಿತಾಗಿ ಕಂಕನಾಡಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಪರಿಚಿತರು ವಾಯ್ಸ ಮೆಸೇಜ್ಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಕವಿತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದು ಕತಾರ್, ಸೌದಿ ಮೊದಲಾದೆಡೆಗಳಿಂದ ಬೆದರಿಕೆಗಳು ಬಂದಿರುವುದು ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕವಿತಾ ಅವರು ತೊಕ್ಕೊಟ್ಟಿನಲ್ಲಿ ಶಿಕ್ಷಕಿಯಾಗಿದ್ದು ಧರ್ಮದ ಅವಹೇಳನ ಪ್ರಕರಣ ನಡೆದಿರುವ ಶಾಲೆಯಲ್ಲಿ ಅವರ ಪುತ್ರಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಆಕೆ ಕೂಡ ತನ್ನ ತಾಯಿ ಕವಿತಾ ಅವರ ಬಳಿ ತರಗತಿಯಲ್ಲಿ ಧರ್ಮದ ಅವಹೇಳನ ಮಾಡುತ್ತಿರುವ ವಿಚಾರ ತಿಳಿಸಿದ್ದಳು. ಇದನ್ನು ಡಿಡಿಪಿಐ ಅವರ ಗಮನಕ್ಕೆ ತರಲು ಕವಿತಾ ಹಾಗೂ ಇತರ ಕೆಲವು ಪೋಷಕರು, ಹಿಂದೂ ಸಂಘಟನೆಯವರು ಡಿಡಿಪಿಐ ಕಚೇರಿ ಬಳಿ ತೆರಳಿದ್ದರು. ಆಗ ಅಲ್ಲಿ ಮಾಧ್ಯಮಗಳಿಗೂ ಹೇಳಿಕೆ ನೀಡಿದ್ದರು. ಆ ಬಳಿಕ ಕವಿತಾ ಅವರನ್ನು ಶಾಲೆಯ ಆಡಳಿತ ಮಂಡಳಿ ಕೆಲಸದಿಂದ ತೆಗೆದು ಹಾಕಿತ್ತು. ಅಲ್ಲದೆ ಅನಂತರ ಆಕೆಗೆ ಅಪರಿಚಿತರಿಂದ ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ