ಮಂಗಳೂರು ವಿ.ವಿ.ಯಲ್ಲಿ ಅಂಧ ಅತಿಥಿ ಉಪನ್ಯಾಸಕ; ಸಾಧನೆಗೆ ಅಡ್ಡಿಯಾಗದ ಅಂಧತ್ವ

ಅನ್ವಿತ್‌ಗೆ ಅಂತಾರಾಷ್ಟ್ರೀಯ ವ್ಯವಹಾರ ವಿಷಯದಲ್ಲಿ ಪಿಎಚ್‌ಡಿ ಮಾಡುವ ಬಯಕೆ

Team Udayavani, Jan 17, 2023, 3:53 PM IST

ಮಂಗಳೂರು ವಿ.ವಿ.ಯಲ್ಲಿ ಅಂಧ ಅತಿಥಿ ಉಪನ್ಯಾಸಕ; ಸಾಧನೆಗೆ ಅಡ್ಡಿಯಾಗದ ಅಂಧತ್ವ

ಮಹಾನಗರ: ಛಲ- ಆತ್ಮವಿಶ್ವಾಸ ವಿದ್ದರೆ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು ಎಂಬುದನ್ನು ಸಾಬೀತು ಪಡಿಸಿದ್ದಾರೆ ಬಿಎಯಲ್ಲಿ ಚಿನ್ನದ ಪದಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್‌ ಗಳಿಸಿದ್ದ ಅನ್ವಿತ್‌ ಜಿ. ಕುಮಾರ್‌. ಮಂಗಳೂರು ವಿಶ್ವವಿದ್ಯಾ ನಿಲಯದಲ್ಲಿ ಅತಿಥಿ  ಉಪನ್ಯಾಸಕರಾಗಿ ನೇಮಕ ಗೊಳ್ಳುವ ಮೂಲಕ “ಅಂಧತ್ವ’ ವೆಂಬುದು ಸಮಸ್ಯೆಯೇ ಅಲ್ಲ ಎಂದು ತೋರಿಸಿಕೊಟ್ಟಿದ್ದಾರೆ 2021ರಲ್ಲಿ ಮಂಗಳೂರು ವಿ.ವಿ. ಯಿಂದ ಎಂಎ (ರಾಜಕೀಯ ಶಾಸ್ತ್ರ)ಯಲ್ಲಿ ಪ್ರಥಮ ರ್‍ಯಾಂಕ್‌ ಗಳಿಸಿದ್ದ ಅನ್ವಿತ್‌ ಜಿ. ಕುಮಾರ್‌, ಒಂದು ತಿಂಗಳ ಕಾಲ ಮಂಗಳೂರು ವಿ.ವಿ. ಕಾಲೇಜಿನಲ್ಲಿ ರಾಜಕೀಯ ಶಾಸ್ತ್ರ ಉಪನ್ಯಾಸಕ ರಾಗಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ವಾರದಿಂದೀಚೆಗೆ ವಿ.ವಿ.ಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ.

ಅಖಿಲ ಭಾರತ ಅಂಧರ ಒಕ್ಕೂಟದಿಂದ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಹಾಗೂ ದ್ವಿತೀಯ ರ್‍ಯಾಂಕ್‌ ಪಡೆದವರಿಗೆ ನೀಡಲಾಗುವ ರಾಷ್ಟ್ರ ಮಟ್ಟದ ಕೃಷ್ಣ ಕುಮಾರಿ ಮೆಮೋರಿಯಲ್‌ ಪ್ರಶಸ್ತಿಯನ್ನು ಪಡೆದಿರುವ ಅನ್ವಿತ್‌ಗೆ ಅಂತಾರಾಷ್ಟ್ರೀಯ ವ್ಯವಹಾರ ವಿಷಯದಲ್ಲಿ ಪಿಎಚ್‌ಡಿ ಮಾಡುವ ಬಯಕೆ. ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದಾರೆ.

ಕುಂಪಲ ನಿವಾಸಿ, ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್‌ ಆಗಿರುವ ಯಾದವಿ ಅವರ ಪುತ್ರ ಅನ್ವಿತ್‌ 6ನೇ ತರಗತಿವರೆಗೆ ಸಾಮಾನ್ಯ (ಶೇ. 30 ಮಾತ್ರ ಅಂಧತ್ವ ಹೊಂದಿದ್ದವರು) ವಿದ್ಯಾರ್ಥಿಯಾಗಿ ಶಾಲೆಗೆ ಹೋದವರು. ಬಳಿಕ “ರೆಟಿನಲ್‌ ಡಿಟಾಚ್‌ಮೆಂಟ್‌’ ಎಂಬ ಕಾಯಿಲೆ ಯಿಂದ ಸಂಪೂರ್ಣ ಅಂಧ್ವತ್ವಕ್ಕೊಳಗಾದರು. ಶಿವಮೊಗ್ಗದ ಶಾರದಾ ದೇವಿ ವಿಕಾಸ ಕೇಂದ್ರದಲ್ಲಿ ಬ್ರೈಲ್‌ ಲಿಪಿಯನ್ನು ಅಭ್ಯಾಸ ಮಾಡಿ ಮಂಗಳೂರಿನ ರೋಮನ್‌ ಮತ್ತು ಕ್ಯಾಥರಿನ್‌ ಲೋಬೋ ದೃಷ್ಟಿಮಾಂದ್ಯ   ಮಕ್ಕಳ ವಸತಿ ಶಾಲೆಯಲ್ಲಿ 7ರಿಂದ ಮತ್ತೆ ಕ್ಷಣ ಆರಂಭಿಸಿ, 2015ರಲ್ಲಿ ಶೇ. 87.5 ಅಂಕಗಳೊಂ ಗೆ ಎಸೆಸೆಲ್ಸಿ ಉತ್ತೀರ್ಣ ರಾದರು. ಗೋಕರ್ಣನಾಥ ಕಾಲೇಜಿನಲ್ಲಿ ಶೇ. 88.1 ಅಂಕಗಳೊಂದಿಗೆ ಪಿಯುಸಿ ಬಳಿಕ ಸೈಂಟ್‌ ಅಲೋಶಿಯಸ್‌ ಕಾಲೇಜಿನಲ್ಲಿ ಶೇ. 89.5 ಅಂಕಗಳೊಂದಿಗೆ ಬಿಎಯಲ್ಲಿ ಚಿನ್ನದ ಪದಕ ಪಡೆದಿದ್ದರು.

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಕಂಪ್ಯೂಟರ್‌, ಮೊಬೈಲ್‌ ನಿರ್ವಹಣೆಯಲ್ಲಿ ನಿಪುಣರಾಗಿರುವ ಅನ್ವಿತ್‌ ಮಕ್ಕಳಿಗೆ ಪಾಠ ಹೇಳುವುದಕ್ಕಾಗಿ ಈ ತಂತ್ರಜ್ಞಾನದ ಸಹಾಯ ದಿಂದಲೇ ತಯಾರಿ ನಡೆಸುತ್ತೇನೆ ಎನ್ನುತ್ತಾರೆ. “ಹಂಪನಕಟ್ಟೆಯ ವಿ.ವಿ. ಕಾಲೇಜಿ ನಲ್ಲಿ ಒಂದು ತಿಂಗಳು ಅತಿಥಿ ಉಪನ್ಯಾಸಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಸಹೋದ್ಯೋಗಿ ಗಳು, ವಿದ್ಯಾರ್ಥಿಗಳು ಬಸ್‌ ಹತ್ತಿಸಿ, ಇಳಿಸುವ ವರೆಗೂ ನನ್ನ ಜತೆಯಾಗಿರುತ್ತಿದ್ದರು. ಈಗಲೂ
ಸಹಕಾರ ದೊರೆಯುತ್ತಿದೆ ಎನ್ನುತ್ತಾರೆ ಅನ್ವಿತ್‌.

ನನ್ನ ಸಾಧನೆಯ ಹಿಂದಿನ ಶಕ್ತಿ ತಾಯಿ. ಸ್ನಾತಕೋತ್ತರ ಪದವಿ ವರೆಗೂ ಪಾಠವನ್ನು ಮನನ ಮಾಡಿಕೊಳ್ಳುವಲ್ಲಿ ಸಹಕರಿಸಿದಾಕೆ. ಪದವಿ ಶಿಕ್ಷಣ ಸಂದರ್ಭ ಸಹಪಾಠಿಗಳು ನನಗೆ ತಂತ್ರಜ್ಞಾನ ಬಳಕೆಯ ಪರಿಚಯ ಮಾಡಿಸಿದ್ದರು. 12ನೇ ವಯಸ್ಸಿನಲ್ಲಿ ಸಂಪೂರ್ಣ ಅಂಧತ್ವ ಆವರಿಸಿ ಶಿವಮೊಗ್ಗದ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಅಲ್ಲಿನ ಶಿಕ್ಷಕರ ಶ್ರಮವನ್ನು ಕಂಡು ನಾನೂ ಉಪನ್ಯಾಸಕನಾಗಬೇಕೆಂಬ ಆಸೆ ಚಿಗುರೊಡೆದಿತ್ತು. ಮುಂದೆ ಪಿಎಚ್‌ಡಿ ಮಾಡಿ ಸರಕಾರಿ ಕಾಲೇಜಿನಲ್ಲಿ ಉದ್ಯೋಗ ಪಡೆಯುವಗುರಿ ನನ್ನದು.
-ಅನ್ವಿತ್‌ ಜಿ. ಕುಮಾರ್‌, ಅತಿಥಿ ಉಪನ್ಯಾಸಕ

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.