ರಸ್ತೆ ಬದಿಯಲ್ಲೇ ನಿಲ್ದಾಣ; ನಗರದಲ್ಲಿ ಸಂಚಾರ ಸಂಕಷ್ಟ!

ಸಮಸ್ಯೆ ಪರಿಹಾರಕ್ಕೆ ಸ್ಥಳೀಯಾಡಳಿತ ಮುಂದಾಗುವುದು ಅಗತ್ಯ

Team Udayavani, Jan 12, 2022, 5:28 PM IST

ರಸ್ತೆ ಬದಿಯಲ್ಲೇ ನಿಲ್ದಾಣ; ನಗರದಲ್ಲಿ ಸಂಚಾರ ಸಂಕಷ್ಟ!

ಮಹಾನಗರ: ಪ್ರಯಾಣಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ನಗರದ ಕೆಲವು ಕಡೆಗಳಲ್ಲಿ ಬಸ್‌ ತಂಗುದಾಣ ಇದ್ದರೂ, ಪ್ರಯಾಣಿಕರು ಮಾತ್ರ ಬಸ್‌ಗಾಗಿ ರಸ್ತೆ ಬದಿ ಕಾಯುತ್ತಾರೆ. ಪರಿಣಾಮ ಬಸ್‌ ತಂಗುದಾಣ ಇಲ್ಲದಿದ್ದರೂ ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸ ಲಾಗುತ್ತಿದೆ. ಪಾದಚಾರಿಗಳಿಗೆ, ಸಾರ್ವಜನಿಕರಿಗೆ ಇದರಿಂದ ಬಹು ತೊಂದರೆ ಉಂಟಾಗುತ್ತಿದೆ.

ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಬಂಟ್ಸ್‌ಹಾಸ್ಟೆಲ್‌ ರಸ್ತೆಯಲ್ಲಿ ಬಸ್‌ ತಂಗುದಾಣ ಇಲ್ಲ. ಆದರೆ ದಿನನಿತ್ಯ ಹಲವು ಮಂದಿ ಪ್ರಯಾಣಿಕರು ರಸ್ತೆ ಬದಿ ಬಸ್‌ಗಾಗಿ ಕಾಯುತ್ತಾರೆ. ನವಭಾರತ ವೃತ್ತದಲ್ಲಿ ಬಸ್‌ ತಂಗುದಾಣ ಇದ್ದರೂ ಕೆಲವು ಮಂದಿ ಬಸ್‌ಗಾಗಿ ಪಿವಿಎಸ್‌ ಜಂಕ್ಷನ್‌ ಬಳಿ ಬರುತ್ತಾರೆ. ಬಂಟ್ಸ್‌ಹಾಸ್ಟೆಲ್‌ನಿಂದ-ಪಿವಿಎಸ್‌ ಜಂಕ್ಷನ್‌ ರಸ್ತೆಯಲ್ಲೂ ಬಸ್‌ ತಂಗುದಾಣ ಇಲ್ಲ. ಕೆಲವೆಡೆ ಬಸ್‌ ತಂಗುದಾಣದ ಬದಲಿಗೆ ಬಸ್‌ಲೇನ್‌ ವ್ಯವಸ್ಥೆ ಮಾಡಲಾಗಿದೆ. ಬಸ್‌ ಬೇ ನಿರ್ಮಾಣಕ್ಕೆ ಸ್ಥಳಾವಕಾಶದ ಕೊರತೆಯ ಕಾರಣ ಲೇನ್‌ಗಳಾಗಿ ನಿರ್ಮಾಣ ಮಾಡಲಾಗಿದೆ. ಆದರೆ, ಬಹುತೇಕ ಬಸ್‌ ಲೇನ್‌ ಒಳಗೆ ಬರುತ್ತಿಲ್ಲ. ಬದಲಾಗಿ ರಸ್ತೆಯಲ್ಲೇ ನಿಲ್ಲುತ್ತಿವೆ. ಇನ್ನು, ಬಸ್‌ ಲೇನ್‌ಗಳಲ್ಲಿ ಬಸ್‌ ಹೊರತುಪಡಿಸಿ ಇತರ ವಾಹನಗಳೂ ಸಂಚರಿಸುತ್ತಿವೆ. ಇದೀಗ ಮತ್ತೆ ಹೊಸದಾಗಿ ಬಸ್‌ ಬೇ ನಿರ್ಮಾಣಕ್ಕೆ ಸ್ಥಳೀಯಾಡಳಿತ ಮುಂದಾಗಿದೆ. ಹೀಗಿದ್ದಾಗ ಹೊಸದಾಗಿ ಬಸ್‌ ಬೇ ನಿರ್ಮಾಣಕ್ಕೂ ಮುನ್ನ ಈ ರೀತಿಯ ಸಮಸ್ಯೆಗಳ ಬಗ್ಗೆಯೂ ಸ್ಥಳೀಯಾಡಳಿತ ಗಮನ ನೀಡಬೇಕಾಗಿದೆ.

ಬಸ್‌ ತಂಗುದಾಣ ಕೆಡಹಿದರು !
ನಗರದ ಪಿವಿಎಸ್‌ ಜಂಕ್ಷನ್‌ ಬಳಿ ನಾಲ್ಕು ದಿನಗಳ ಹಿಂದೆ ಬಸ್‌ ತಂಗುದಾಣ ಇತ್ತು. ರಾತೋರಾತ್ರಿ ತಂಗುದಾಣ ಕೆಡಹಲಾಗಿದೆ. ನಗರದ ಬಂಟ್ಸ್‌ಹಾಸ್ಟೆಲ್‌, ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ, ಪಂಪ್‌ವೆಲ್‌, ಬಲ್ಮಠ, ಸ್ಟೇಟ್‌ಬ್ಯಾಂಕ್‌ ಸಹಿತ ಹಲವು ಕಡೆಗಳಿಗೆ ತೆರಳುವ ಖಾಸಗಿ, ಸಿಟಿ, ಸರಕಾರಿ ಬಸ್‌ಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತದೆ.
ಇದರಿಂದಾಗಿ ಪ್ರತೀ ದಿನ ಹಲವು ಮಂದಿ ಇದೇ ಬಸ್‌ ತಂಗುದಾಣದಲ್ಲಿ ನಿಲ್ಲುತ್ತಿದ್ದರು. ಆದರೆ, ಸದ್ಯ ಈ ಬಸ್‌ ತಂದುದಾಣ ಇಲ್ಲದ ಪರಿಣಾಮ ಬಿಸಿಲಿನಲ್ಲಿಯೇ ಬಸ್‌ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಎಚ್ಚರಿಕೆ ಇದ್ದರೂ ಬಸ್‌ ನಿಲ್ಲುತ್ತೆ
ನಗರದಲ್ಲಿ ಲಾಲ್‌ಬಾಗ್‌ ಕಡೆಗೆ ಹೋಗುವ ರಸ್ತೆಯಲ್ಲಿ ಬೆಸೆಂಟ್‌ ಕಾಲೇಜು, ಹಂಪನಕಟ್ಟೆ ಸಿಗ್ನಲ್‌ ಬಳಿ ಬಸ್‌ ನಿಲ್ಲಿಸಬಾರದು ಎಂದು ಮಂಗಳೂರು ಸಂಚಾರ ಪೊಲೀಸರು ಈಗಾಗಲೇ ಬಸ್‌ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ, ಅಲ್ಲಿ ಸದ್ಯ ಬಸ್‌ ನಿಲ್ಲಿಸಲಾಗುತ್ತಿದೆ. ಬೆಸೆಂಟ್‌ ಅಕ್ಕಪಕ್ಕ ಕೆಲವೊಂದು ಕಾಲೇಜುಗಳಿದ್ದು, ಶಾಲಾ-ಕಾಲೇಜು ಬಿಡುವ ವೇಳೆ ಇಲ್ಲಿ ನಿತ್ಯ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ಅಲ್ಲೇ ಪಕ್ಕದಲ್ಲಿ ಟಿಎಂಎ ಪೈ ಕನ್ವೆನ್ಶನ್‌ ಸೆಂಟರ್‌ ಬಳಿ ಈಗಾಗಲೇ ಬಸ್‌ ತಂಗುದಾಣ ಇದ್ದು, ಬೆಸೆಂಟ್‌ ಬದಲು ಅಲ್ಲೇ ಬಸ್‌ ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಕಾನೂನು ಕ್ರಮ
ಬೆಸೆಂಟ್‌ ಕಾಲೇಜು ಬಳಿ, ಹಂಪನಕಟ್ಟೆ ಸಹಿತ ನಗರದ ಕೆಲವೊಂದು ಕಡೆಗಳಲ್ಲಿ ಬಸ್‌ ನಿಲ್ಲಿಸಬಾರದು ಎಂದು ಈಗಾಗಲೇ ಸೂಚನೆ ನೀಡಿದ್ದೇವೆ. ಆದರೂ ಕೆಲವೆಡೆ, ಅದರಲ್ಲೂ ಜಂಕ್ಷನ್‌, ಸಿಗ್ನಲ್‌ ಬಳಿ ಪ್ರಯಾಣಿಕರನ್ನು ಬಸ್‌ಗೆ ಹತ್ತಿಸುವುದು, ಇಳಿಸುವುದು ಗಮನಕ್ಕೆ ಬಂದಿದೆ. ಈ ರೀತಿ, ನಿಯಮ ಉಲ್ಲಂಘಿಸುತ್ತಿರುವ ಬಸ್‌ಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ.
– ಎಂ.ಎ. ನಟರಾಜ್‌, ಟ್ರಾಫಿಕ್‌ ಎಸಿಪಿ ಮಂಗಳೂರು

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.