ಗುರುಪುರ ನದಿಯಲ್ಲಿ ಉದ್ಯಮಿ ಆಶಿತ್ ಕುಮಾರ್ ಶವವಾಗಿ ಪತ್ತೆ;ಆತ್ಮಹತ್ಯೆ ಶಂಕೆ
Team Udayavani, Mar 6, 2023, 10:02 PM IST
ಮಂಗಳೂರು: ಗುರುಪುರ ಸೇತುವೆ ಬಳಿ ರವಿವಾರ ನದಿಯಲ್ಲಿ ಶವವಾಗಿ ಕಂಡುಬಂದ ವ್ಯಕ್ತಿ ಮೂಡುಬಿದಿರೆಯ ಹೊರವಲಯ, ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಮೂಲದ ಉದ್ಯಮಿ ಆಶಿತ್ ಕುಮಾರ್ (50) ಎಂದು ತಿಳಿದು ಬಂದಿದೆ. ಅವರು ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಮೂಡುಬಿದಿರೆಯಲ್ಲೂ ಶಿಕ್ಷಣ ಪಡೆದಿದ್ದ ಆಶಿತ್ ಕುಮಾರ್ ಮೂಡುಬಿದಿರೆ ತ್ರಿಭುವನ್ ಜೇಸೀ, ಮಹಾವೀರ ಕಾಲೇಜು ಹಳೆವಿದ್ಯಾರ್ಥಿ ಸಂಘ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.
ತ್ರಿಭುವನ್ ಜೇಸೀಸ್ ನಲ್ಲಿ ಅಧ್ಯಕ್ಷ, ವಲಯ 15ರ ಅಧ್ಯಕ್ಷ ಮೊದಲಾದ ಹುದ್ದೆಗಳನ್ನು ನಿರ್ವಹಿಸಿದ್ದರು. ಮೊದಲಿಗೆ ಮಹಾವೀರ ಇಲೆಕ್ಟ್ರಾನಿಕ್ಸ್ ಹೆಸರಿನ ಸಂಸ್ಥೆ ನಡೆಸುತ್ತಿದ್ದ ಅವರು ವಿವಿಧ ವಿಮಾ ಕಂಪೆನಿಗಳ ಪ್ರತಿನಿಧಿಯಾಗಿದ್ದರು. ಕೆಲವು ವರ್ಷಗಳಿಂದ ಅವರು ಮಂಗಳೂರಿನಲ್ಲಿ ನೆಲೆಸಿದ್ದರು.
ಆಶಿತ್ ಕುಮಾರ್ ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ಇವರು ಶನಿವಾರ ಮನೆಯಿಂದ ಹೊರಟಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆತ್ಮಹತ್ಯೆಗೆ ಆರ್ಥಿಕ ಒತ್ತಡವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ವರದಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು