ಕೃಷ್ಣ ಅಳಿಯ ನಾಪತ್ತೆ ಪ್ರಕರಣ: ಶೋಧ ಕಾರ್ಯಕ್ಕೆ ಸೇನಾ ಹೆಲಿಕಾಪ್ಟರ್
Team Udayavani, Jul 30, 2019, 8:44 AM IST
ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅಳಿಯ ವಿ.ಜಿ. ಸಿದ್ದಾರ್ಥ್ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದು, ತೀವ್ರ ಶೊಧ ಕಾರ್ಯ ನಡೆಯುತ್ತಿದೆ. ಕಾರ್ಯಾಚರಣೆಗೆ ಸೇನಾ ಹೆಲಿಕಾಪ್ಟರ್ ಬಳಸುವ ಬಗ್ಗೆಚಿಂತನೆ ನಡೆಯುತ್ತಿದೆ ಎಂದು ವರದಿಯಾಗಿದೆ.
ವಿ.ಜಿ. ಸಿದ್ದಾರ್ಥ್ ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದರು.
ಜಪ್ಪಿನ ಮೊಗರು, ಅಳಿವೆ ಬಾಗಿಲು, ಉಳ್ಳಾಲ ಸುತ್ತಮುತ್ತ ತೀವ್ರ ಶೋಧ
ಕಾರ್ಯ ನಡೆಯುತ್ತಿದೆ. 30ಕ್ಕೂ ಹೆಚ್ಚು ಬೋಟ್ ಗಳಲ್ಲಿ 300ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಹುಡುಕಾಟ ನಡೆಯುತ್ತಿದೆ. ಸ್ಥಳಕ್ಕೆ ಎನ್ ಡಿ ಆರ್ ಎಫ್ ತಂಡ ಆಗಮಿಸುತ್ತಿದೆ.
ಕಾರಿನ ಚಾಲಕ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಸಿದ್ದಾರ್ಥ್ ಬೆಂಗಳೂರಿನಿಂದ ಮಂಗಳೂರಿಗೆಂದು ಹೇಳಿ ಚಾಲಕ ಮತ್ತು ಇಬ್ಬರ ಜತೆಗೂಡಿ ಕಾರಿನಲ್ಲಿ ಹೊರಟಿದ್ದರು. ಪಂಪ್ವೆಲ್ ತಲುಪಿದಾಗ ಜತೆಗಿದ್ದ ಇಬ್ಬರು ಕಾರಿನಿಂದ ಇಳಿದಿದ್ದರು. ಬಳಿಕ ಮಾಲಕನ ಸೂಚನೆಯಂತೆ ಚಾಲಕ ಕಾರನ್ನು ಕಾಸರಗೋಡು ಹೆದ್ದಾರಿಯತ್ತ ತಿರುಗಿಸಿದ್ದನು. ನೇತ್ರಾವತಿ ಸೇತುವೆ ಬಳಿ ತಲುಪುತ್ತಿದ್ದಂತೆ ಕಾರನ್ನು ಎಡ ಬದಿಯಲ್ಲಿರುವ ಕಂರ್ಬಿಸ್ಥಾನದ ರಸ್ತೆಯಲ್ಲಿ ಚಲಾಯಿಸಲು ಹೇಳಿದ್ದರು. ಕೆಲವು ಮೀಟರ್ ಮುಂದೆ ಸಾಗಿದ ಬಳಿಕ ಕಾರನ್ನು ನಿಲ್ಲಿಸಲು ಹೇಳಿ ಮೊಬೈಲ್ನಲ್ಲಿ ಮಾತನಾಡುತ್ತ ಸ್ವಲ್ಪ ಮುಂದಕ್ಕೆ ಹೋದವರು ಬಳಿಕ ನಾಪತ್ತೆಯಾಗಿದ್ದಾರೆ. ಮೊಬೈಲ್ಗೆ ಕರೆ ಮಾಡಿದರೆ ಸ್ವಿಚ್ ಆಫ್ ಸಂದೇಶ ಬರುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಸಿದ್ದಾರ್ಥ್ ಅವರ ಕಾರು ಚಾಲಕ ಬಸವರಾಜು ಕಂಕನಾಡಿ ಪೊಲೀಸ್ ಠಾನೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ, ಶಾಸಕ ಯು.ಟಿ ಖಾದರ್ ಆಗಮಿಸಿದ್ದಾರೆ. ಅಗ್ನಿಶಾಮಕ ದಳ, ತಣ್ಣೀರುಬಾವಿಯಿಂದ ಮುಳುಗು ತಜ್ಞರು ಆಗಮಿಸಿದ್ದು ನೇತ್ರಾವತಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ