ಕಪಿತಾನಿಯೋ: ಪೈಪ್ ಒಡೆದು ಪೋಲಾಗುತ್ತಿದೆ ನೀರು
Team Udayavani, Jan 22, 2023, 10:14 AM IST
ಕಪಿತಾನಿಯೋ: ಕಪಿತಾನಿಯೋ ಬಳಿ ಕುಡಿಯುವ ನೀರಿನ ಕೊಳವೆಯೊಂದು ಕಳೆದ ಒಡೆದು ಹಲವು ದಿನಗಳಿಂದ ನೀರು ಪೋಲಾಗುತ್ತಿದ್ದು, ಸಂಬಂಧಪಟ್ಟವರು ಈ ಬಗ್ಗೆ ಮಾಹಿತಿ ನೀಡಿದರೂ ಗಮನ ಹರಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಮಾರ್ಟ್ ಸಿಟಿ ವತಿಯಿಂದ ಪಡೀಲ್ -ಪಂಪ್ವೆಲ್ ನಡುವಿನ ರಸ್ತೆ ಕಾಮಗಾರಿ ಇಲ್ಲಿ ನಡೆಯುತ್ತಿದ್ದು, ಒಂದು ತಿಂಗಳ ಹಿಂದೆ ಇಲ್ಲಿ ಕಾಮಗಾರಿಗಾಗಿ ನೆಲವನ್ನು ಅಗೆಯುತ್ತಿರುವಾಗ ನಗರಕ್ಕೆ ನೀರು ಪೂರೆಕೆಯಾಗುವ ಮುಖ್ಯ ಕೊಳವೆ ಪೈಪ್ ಒಡೆದು ಸಾಕಷ್ಟು ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಬಳಿಕ ಅದನ್ನು ದುರಸ್ತಿಗೊಳಿಸಲಾಗಿತ್ತು.
ಇದೀಗ ಮತ್ತೆ 15 ದಿನಗಳಿಂದ ನೀರಿನ ಸೋರಿಕೆ ಕಂಡುಬರುತ್ತಿದ್ದು, ಈ ಮೊದಲು ನೀರು ಸೋರಿಕೆ ಸಂದರ್ಭ ತೆಗೆಯಲಾಗಿದ್ದ ಗುಂಡಿಯಲ್ಲಿ ನೀರು ತುಂಬಿದೆ. ನೆಲದಡಿಯಲ್ಲಿ ಮತ್ತೆ ಪೈಪ್ ಒಡೆದಿರುವ ಸಾಧ್ಯತೆಯಿದ್ದು, ತತ್ಕ್ಷಣ ದುರಸ್ತಿ ಮಾಡುವ ಅಗತ್ಯವಿದೆ. ಈಗಾಗಲೇ ನಗರದ ವಿವಿಧೆಡೆ ನೀರಿನ ಸಮಸ್ಯೆ ಎದುರಾಗುತ್ತಿದ್ದು, ತುಂಬೆಯಲ್ಲಿ ನೀರಿನ ಒಳ ಹರಿವು ಕಡಿಮೆಯಾಗಿರುವುದರಿಂದ ಬೇಸಗೆಯಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆಯಿದೆ.
ಪರಿಸ್ಥಿತಿ ಹೀಗಿರುವಾಗ ನೀರು ಪೋಲಾಗುವುದನ್ನು ತಡೆಯುವ ಅಗತ್ಯವಿದೆ. ಮೇಯರ್, ಪಾಲಿಕೆ ಸದಸ್ಯರಿಗೆ ತಿಳಿಸಿದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ತತ್ ಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪೈಪ್ನಲ್ಲಿ ಉಂಟಾಗುತ್ತಿರುವ ಸೋರಿಕೆ ತಡೆಗಟ್ಟಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ