ತೆಕ್ಕಟ್ಟೆ: ಬೈಕ್ ಗೆ ಕಾರು ಢಿಕ್ಕಿ; ಗಂಭೀರ ಗಾಯಗೊಂಡ ಬೈಕ್ ಸವಾರ
Team Udayavani, Jan 31, 2021, 7:37 PM IST
ತೆಕ್ಕಟ್ಟೆ: ತೆಕ್ಕಟ್ಟೆ ರಾ.ಹೆ. 66 ಶ್ರೀ ಮಹಾಲಿಂಗೇಶ್ವರ ದೇವಳದ ಸಮೀಪ ಬೈಕ್ಗೆ ಮಾರುತಿ 800 ಕಾರು ಢಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜ.31ರ ಸಂಜೆ ಸಂಭವಿಸಿದೆ.
ಕೋಟದಿಂದ ಕೋಟೇಶ್ವರ ಕಡೆಗೆ ಸಾಗುತ್ತಿದ್ದ ಮಾರುತಿ 800 ಕಾರು ನೇರವಾಗಿ ಬಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಣೂರು ನಿವಾಸಿ ದಾರುಅಜ್ಜಿಮನೆ ಆನಂದ ಕಾಂಚನ್ (62) ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಹಿಂಬದಿ ಸವಾರ ರತ್ನಾಕರ ದೇವಾಡಿಗ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ತತ್ ಕ್ಷಣವೇ ಸ್ಥಳೀಯರು ಕೋಟೇಶ್ವರ ಖಾಸಗಿ ಆಸ್ಪತೆಗೆ ಸಾಗಿಸಿದ್ದಾರೆ.
ಮಾನವೀಯತೆ ಮೆರೆದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ:
ತೆಕ್ಕಟ್ಟೆ ರಾ.ಹೆ.66 ರ ಪ್ರಮುಖ ಭಾಗದಲ್ಲಿ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಲವಾರು ಮಂದಿ ಒಂದೆಡೆ ನೆರೆದಿದ್ದರು. ಈ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು ತತ್ಕ್ಷಣವೇ ಘಟನಾ ಸ್ಥಳಕ್ಕೆ ಬಂದು ಸಾರ್ವಜನಿಕರಿಂದ ಮಾಹಿತಿ ಪಡೆದು ಕೋಟ ಪೊಲೀಸ್ ಠಾಣಾ ಗಮನಕ್ಕೆ ತರುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ