BJP ಶಾಸಕರ ವಿರುದ್ಧ ಕೇಸ್: ಮಂಗಳೂರು ಪೊಲೀಸ್ ಠಾಣೆಗಳ ಎದುರು ಹರತಾಳಕ್ಕೆ ಕರೆ
ಶಿಕ್ಷಕಿ ಮೇಲೆ ಕೇಸು ದಾಖಲಿಸಿ ಬಂಧಿಸಬೇಕು.. ವಿಎಚ್ ಪಿ, ಬಿಜೆಪಿ ಒತ್ತಾಯ
Team Udayavani, Feb 15, 2024, 5:55 PM IST
ಸಾಂದರ್ಭಿಕ ಚಿತ್ರ ಮಾತ್ರ
ಮಂಗಳೂರು: ಹಿಂದೂ ಧರ್ಮದ ಅವಹೇಳನ ಆರೋಪ ಹೊತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕಿಯನ್ನು ಅಮಾನತು ಮಾಡಲು ಆಗ್ರಹಿಸಿ ಪ್ರತಿಭಟನೆ ನಡೆಸಿದವರ ಮೇಲೆ ಎಫ್ ಐ ಆರ್ ದಾಖಲು ಮಾಡಿದ ಕುರಿತು ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದ್ದು ಮಂಗಳೂರು ನಗರದ ಪೊಲೀಸ್ ಠಾಣೆಗಳ ಎದುರು ಜೈಶ್ರೀರಾಮ್ ಘೋಷಣೆಯೊಂದಿಗೆ ಹರತಾಳ ನಡೆಸಲು ಗುರುವಾರ ಕರೆ ನೀಡಿದೆ.
ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧವೂ ಪ್ರಕರಣ ದಾಖಲು ಹಿನ್ನೆಲೆಯಲ್ಲಿ ಫೆ.19(ಸೋಮವಾರ) ಪೊಲೀಸ್ ಠಾಣೆಗಳ ಎದುರು ಹರತಾಳಕ್ಕೆ ಕರೆ ನೀಡಿರುವುದಾಗಿ ವಿಎಚ್ ಪಿ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಹೇಳಿಕೆ ನೀಡಿದ್ದಾರೆ ನೀಡಿದ್ದಾರೆ.
ಘಟನೆಯಿಂದ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಆಗಿದೆ. ಎಫ್.ಐ.ಆರ್ ದಾಖಲಿಸಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಜೈ ಶ್ರೀರಾಮ್ ಹೇಳಿದ್ದಕ್ಕೆ ಹಿಂದೂ ವಿರೋಧಿ ಸರಕಾರ ಕೇಸ್ ಹಾಕಿದೆ. ಮಂಗಳೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆಗಳ ಎದುರು ಜೈಶ್ರೀರಾಮ್ ಘೋಷಣೆಯೊಂದಿಗೆ ಹರತಾಳ ಮಾಡುತ್ತೇವೆ. ಹಿಂದೂ ಸಮಾಜದ ಬಂಧುಗಳು ಪೊಲೀಸ್ ಠಾಣೆಗಳ ಮುಂದೆ ಜೈಶ್ರೀರಾಮ್ ಘೋಷಣೆಯೊಂದಿಗೆ ಧರಣಿ ಮಾಡುತ್ತೇವೆ, ವಿಶೇಷವಾಗಿ ಪಾಂಡೇಶ್ವರ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸುತ್ತೇವೆ ಎಂದು ತಿಳಿಸಿ ತಿಳಿಸಿದರು.
ಶಿಕ್ಷಕಿ ಪ್ರಭಾ ರಾಮ ದೇವರು, ನಾಗದೇವರು, ಕೊರಗಜ್ಜನ ಬಗ್ಗೆ ಅವಹೇಳನ ಮಾಡಿದ್ದಾರೆ. ಇದರ ವಿರುದ್ಧ ಪೋಷಕರು ಪೊಲೀಸ್ ದೂರು ನೀಡಿದರೂ ಇನ್ನೂ ಪ್ರಕರಣ ದಾಖಲಿಸಿಲ್ಲ. ಶರಣ್ ಪಂಪ್ ವೆಲ್ ವಿರುದ್ಧ ಸುಳ್ಳು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿದ ಬಗ್ಗೆ ಪ್ರಶ್ನಿಸಿದರೆ ಮೇಲಿನಿಂದ ಒತ್ತಡ ಇದೆ ಎಂದು ಪೊಲೀಸರು ಹೇಳುತ್ತಾರೆ. ನಮ್ಮ ನಾಯಕರ ಮೇಲೆ ಹಾಕಿರುವ ಕೇಸು ವಾಪಾಸ್ ಪಡೆಯಬೇಕು. ಶಿಕ್ಷಕಿ ಪ್ರಭಾ ಮೇಲೆ ಕೇಸು ದಾಖಲಿಸಿ ಬಂಧಿಸಬೇಕು ಎಂದು ಶಿವಾನಂದ ಮೆಂಡನ್ ಒತ್ತಾಯಿಸಿದ್ದಾರೆ.
ಸತೀಶ್ ಕುಂಪಲ ಎಚ್ಚರಿಕೆ
ಖಾಸಗಿ ಶಾಲೆಯಲ್ಲಿ ವಿರೋಧಿ ಶಿಕ್ಷಕರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಶಾಸಕರು, ಮನಪಾ ಸದಸ್ಯರು, ಹಿಂದೂ ಸಂಘಟನೆಗಳು ಪ್ರಮುಖರ ಮೇಲಿನ ಪ್ರಕರಣ ಒಂದು ವಾರದೊಳಗೆ ವಾಪಾಸು ಪಡೆಯಬೇಕು. ಇಲ್ಲವಾದಲ್ಲಿ ಜಿಲ್ಲಾದ್ಯಂತ ಹಿಂದೂ ಸಮಾಜ ಒಟ್ಟು ಸೇರಿ ಪ್ರತಿಭಟನೆಯ ಹಾದಿ ಹಿಡಿಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಎಚ್ಚರಿಸಿದ್ದಾರೆ.
ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಭಾಗಿಯಾಗದ ಶಾಸಕ ಭರತ್ ಶೆಟ್ಟಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಿರುವುದು ಖಂಡನೀಯ. ಪ್ರಕರಣದಲ್ಲಿ ಆರೋಪಿಗಳ ಸ್ಥಾನದಲ್ಲಿರುವ ಶಿಕ್ಷಕರ ವಿರುದ್ಧ ಮತ್ತು ಶಾಲೆಗೆ ಭೇಟಿ ನೀಡಿ ಆರೋಪಿಗಳಿಗೆ ಸಮಾಧಾನ ಹೇಳಿದ ಕಾಂಗ್ರೆಸ್ ನಾಯಕರ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ