ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡ ನೆಲಸಮ ಕಾಮಗಾರಿ ಮರು ಆರಂಭ


Team Udayavani, Apr 15, 2022, 10:58 AM IST

demolish

ಸ್ಟೇಟ್‌ಬ್ಯಾಂಕ್‌: ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿದ್ದ ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡವನ್ನು ಕೆಡಹಲು ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿದೆ. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯಿಂದಲೇ ಹಳೆಯ ಮಾರ್ಕೆಟ್‌ನ ಬಾಕಿ ಇರುವ ಕಟ್ಟಡವನ್ನು ಕೆಡಹುವ ಕಾರ್ಯಾಚರಣೆ ಮತ್ತೆ ಆರಂಭಿಸಲಾಗಿದ್ದು, ಗುರು ವಾರ ದಿನಪೂರ್ತಿ ಕಾರ್ಯಾಚರಣೆ ನಡೆಯಿತು.

ಮುಂದಿನ ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಕಟ್ಟಡ ತೆರವು ಮಾಡುವ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕಾರ್ಯಾಚರಣೆಯ ಗುತ್ತಿಗೆ ವಹಿಸಿದ ಸಂಸ್ಥೆಯೇ ಕಟ್ಟಡ ತ್ಯಾಜ್ಯವನ್ನು ನಿರ್ವಹಣೆ ಮಾಡಲಿದೆ.

ನಗರದ ಅಧಿಕ ವಾಹನ, ಜನದಟ್ಟಣೆ ಇರುವ ಸ್ಥಳದಲ್ಲಿ ಕಟ್ಟಡ ತೆರವು, ಕಟ್ಟಡ ತ್ಯಾಜ್ಯ ತೆರವು ಮಾಡುವ ಕಾರಣದಿಂದ ಮಾರ್ಕೆಟ್‌ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಕಾಣಿಸಿಕೊಂಡಿದೆ. ಮುಂದಿನ ನಾಲ್ಕೈದು ದಿನವೂ ಇಂತಹ ಪರಿಸ್ಥಿತಿ ಇರಲಿದೆ.

ತಡೆಯಾಜ್ಞೆ ಸೋಮವಾರವೇ ತೆರವು ಗೊಂಡಿದ್ದರೂ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯ ಕ್ರಮ ಹಿನ್ನೆಲೆಯಲ್ಲಿ ಕಟ್ಟಡ ತೆರವು ಕಾರ್ಯಾಚರಣೆ ನಡೆಸಿರಲಿಲ್ಲ ಎನ್ನಲಾಗಿದೆ. ಬುಧವಾರ ರಾತ್ರಿ 8ರ ಬಳಿಕ ಕಾರ್ಯಾಚರಣೆಗೆ ನಿರ್ಧರಿಸಲಾಗಿತ್ತಾದರೂ ಮಳೆಯ ಹಿನ್ನೆಲೆ ಯಲ್ಲಿ ಸಾಧ್ಯವಾಗಿರಲಿಲ್ಲ. ಮಳೆ ನಿಂತ ಅನಂತರ ಕಾರ್ಯಾಚರಣೆ ಆರಂಭಿಸಲಾಗಿದೆ. ಗುರುವಾರವೂ ಬೆಳಗ್ಗಿನಿಂದಲೇ ಕಾರ್ಯಾ ಚರಣೆ ನಡೆಸಲಾಗಿದ್ದು, ಸೆಂಟ್ರಲ್‌ ಮಾರುಕಟ್ಟೆ ಪ್ರವೇಶಕ್ಕೆ ಇದ್ದ ರಸ್ತೆ ಬಂದ್‌ ಮಾಡಿ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು.

ದ್ವಿಚಕ್ರ ವಾಹನದವರು, ಪಾದಚಾರಿಗಳು ಸ್ಥಳ ಮಾಡಿಕೊಂಡು ಮಾರ್ಕೆಟ್‌ ವ್ಯಾಪ್ತಿಯಲ್ಲಿ ತೆರಳುವಂತಾಯಿತು. ಬೀದಿ ಬದಿ ವ್ಯಾಪಾರಕ್ಕೆ ಮಾತ್ರ ಯಾವುದೇ ಸಮಸ್ಯೆ ಇರಲಿಲ್ಲ.

62 ವರ್ಷ ಹಿಂದಿನ ಕಟ್ಟಡ

ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡಕ್ಕೆ (ತರಕಾರಿ/ ಹಣ್ಣು ಹಂಪಲು ಮತ್ತು ಮೀನು/ ಮಾಂಸದ ಮಾರ್ಕೆಟ್‌ನ 2 ಕಟ್ಟಡಗಳು) ಸುಮಾರು 62 ವರ್ಷಗಳ ಇತಿಹಾಸವಿದೆ. ಹಳೆಯದಾದ ಈ ಕಟ್ಟಡ ಶಿಥಿಲವಾಗಿತ್ತು. ಇಲ್ಲಿರುವ ಮೀನು/ ಮಾಂಸದ ಮಾರ್ಕೆಟ್‌ ಕಟ್ಟಡದ ಕೆಲವು ಭಾಗಗಳು ಕೆಲವು ವರ್ಷಗಳ ಹಿಂದೆಯೇ ಕುಸಿದಿದ್ದು, ಬಳಿಕ ಅದಕ್ಕೆ ತೇಪೆ ಹಚ್ಚಲಾಗಿತ್ತು. ಬಳಿಕ ಮಾರುಕಟ್ಟೆಯನ್ನು ಆಧುನೀಕರಿಸಬೇಕಾಗಿ ಬಂದಿರುವ ಕಾರಣ ಸ್ಮಾರ್ಟ್‌ ಸಿಟಿ ಯೋಜನೆಯಡಿ ನೂತನ ಮಾರ್ಕೆಟ್‌ ಕಟ್ಟಡವನ್ನು ಕಟ್ಟಿಸಲು 2016 ಜೂ. 29ರಂದು ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಬಳಿಕ ಸ್ಮಾರ್ಟ್‌ ಸಿಟಿ ಮಂಡಳಿ ಸಭೆಯಲ್ಲಿ ಅನುಮೋದನೆ ಪಡೆಯಲಾಗಿತ್ತು. 2018 ಸೆ. 22ರಂದು ನಡೆದ ಉನ್ನತಾಧಿಕಾರ ಸ್ಟಿಯರಿಂಗ್‌ ಕಮಿಟಿ ಸಭೆಯಲ್ಲಿ ಮಂಜೂರಾತಿ ನೀಡಲಾಗಿತ್ತು. ಬಳಿಕ ಟೆಂಡರ್‌ ಪ್ರಕ್ರಿಯೆಯೂ ಮುಗಿದು, ಪಿಪಿಪಿ ಪಾಲುದಾರಿಕೆಯನ್ನೂ ಅಂತಿಮಗೊಳಿಸಲಾಗಿತ್ತು.

ಈ ಮಧ್ಯೆ ಕೊರೊನಾ ತೀವ್ರವಾದಾಗ 2020 ಎ. 2ರಂದು ಕಟ್ಟಡ ಪುನಃ ನಿರ್ಮಾಣಕ್ಕೆ ಇದು ಸೂಕ್ತ ಸಮಯ ಎಂದು ಮಾರ್ಕೆಟ್‌ನಲ್ಲಿ ವ್ಯಾಪಾರ ಚಟುವಟಿಕೆಗಳನ್ನು ನಿಷೇಧಿಸಿ, ಶಿಥಿಲವಾದ ಹಳೆಯ ಕಟ್ಟಡವನ್ನು ಕೆಡಹಲು ನಿರ್ಧರಿಸಿ ಎ. 4ರಂದು ಸಾರ್ವಜನಿಕ ಪ್ರಕಟನೆ ಹೊರಡಿಸಿತ್ತು. ಕೆಡಹುವ ಕಾಮಗಾರಿಯನ್ನೂ ಆರಂಭಿಸಲಾಗಿತ್ತು. ಇದನ್ನು ಆಕ್ಷೇಪಿಸಿ ಕೆಲವು ಮಂದಿ ವ್ಯಾಪಾರಿಗಳು ಹೈಕೋರ್ಟ್‌ ನಿಂದ ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ ಕಳೆದ ವರ್ಷ ಮೇ 29ರಂದು ಕಾಮಗಾರಿ ನಿಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯ ತಡೆಯಾಜ್ಞೆ ತೆರವು ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಶೀಘ್ರ ಹೊಸ ಮಾರ್ಕೆಟ್‌

ಹಳೆಯ ಸೆಂಟ್ರಲ್‌ ಮಾರ್ಕೆಟ್‌ ಕೆಡಹುವ ಕಾಮಗಾರಿ ಪೂರ್ಣವಾದ ಬಳಿಕ ಅದೇ ಸ್ಥಳದಲ್ಲಿ ಹೊಸ ಮಾರುಕಟ್ಟೆಯನ್ನು ಸ್ಮಾರ್ಟಸಿಟಿ ಯೋಜನೆಯಡಿ ನಿರ್ಮಿಸಲಾಗುತ್ತದೆ. ಈಗಾಗಲೇ ಹೊಸ ಮಾರುಕಟ್ಟೆ ನಿರ್ಮಾಣಕ್ಕೆ ಟೆಂಡರ್‌ ಕೂಡ ಅಂತಿಮಗೊಂಡಾಗಿದೆ. ಅವರ ಜತೆಗೆ ಮಾತುಕತೆ ನಡೆಸಿ ಕಾಮಗಾರಿ ಆರಂಭಕ್ಕೆ ನಿರ್ಧರಿಸಲಾಗುವುದು. – ಪ್ರೇಮಾನಂದ ಶೆಟ್ಟಿ, ಮೇಯರ್‌, ಮಂಗಳೂರು ಪಾಲಿಕೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.