ತುಂಬೆ ಗ್ರೂಪ್ ಮತ್ತು ಬ್ಯಾರೀಸ್ ಕಲ್ಚರಲ್ ಫೋರಮ್ UAE TO ಮಂಗಳೂರಿಗೆ ಚಾರ್ಟರ್ಡ್ ವಿಮಾನ
Team Udayavani, Jul 23, 2020, 8:41 AM IST
ತುಂಬೆ ಸಮೂಹ ಸಂಸ್ಥೆಗಳು ಮತ್ತು ಬಿಸಿಎಫ್ ವತಿಯಿಂದ ಯುಎಇಯಿಂದ ಮಂಗಳೂರಿಗೆ ಚಾರ್ಟರ್ಡ್ ವಿಮಾನದ ವ್ಯವಸ್ಥೆ ಮಾಡಲಾಯಿತು.
ಮಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ಡೌನ್ನಿಂದಾಗಿ ಯುಎಇಯಲ್ಲಿ ಸಿಲುಕಿಕೊಂಡಿದ್ದವರನ್ನು ಮಂಗಳೂರಿಗೆ ಕರೆತರಲು ತುಂಬೆ ಸಮೂಹ ಸಂಸ್ಥೆ ಮತ್ತು ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಚಾರ್ಟರ್ಡ್ ವಿಮಾನ ವ್ಯವಸ್ಥೆ ಮಾಡಲಾಗಿದೆ. ಮೊದಲ ಹಂತವಾಗಿ ಬಿಎಸ್ಎಫ್ ಚಾರ್ಟರ್ಡ್ ವಿಮಾನ ಮಂಗಳವಾರ ಯುಎಇ ರಾಸ್ ಅಲ್ ಖೈಮಾದಿಂದ ಮಂಗಳೂರಿಗೆ ತಲುಪಿತು. ನೌಕರಿ ಕಳೆದುಕೊಂಡವರು, ವೀಸಾ ಅವಧಿ ಮುಗಿದವರು, ವಿವಿಧ ರೀತಿಯ ಅನಾರೋಗ್ಯದಿಂದ ಬಳಲುತ್ತಿದ್ದವರು, ಹಿರಿಯ ನಾಗರಿಕರು, ಗರ್ಭಿಣಿಯರು, ಮಕ್ಕಳ ಸಹಿತ 185 ಪ್ರಯಾಣಿಕರು ತಾಯ್ನಾಡಿಗೆ ತಲುಪಿದರು.
ತುಂಬೆ ಗ್ರೂಪ್ ಮಾಲಕ, ಬಿಸಿಎಫ್ ಸ್ಥಾಪಕ ಪೋಷಕ ಡಾ| ತುಂಬೆ ಮೊಯಿದೀನ್ ಹಾಗೂ ಬಿಎಸ್ಎಫ್ ಅಧ್ಯಕ್ಷ ಡಾ | ಬಿ.ಕೆ. ಯೂಸುಫ್ ಅವರ ನೇತೃತ್ವದಲ್ಲಿ ಬಿಸಿಎಫ್ ಪ್ರಧಾನ ಕಾರ್ಯದರ್ಶಿ ಡಾ| ಕಾಪು ಮೊಹಮದ್ ಹಾಗೂ ತುಂಬೆ ಗ್ರೂಪ್ನ ಫರ್ಹಾದ್ ಅವರ ಉಸ್ತುವಾರಿಯಲ್ಲಿ ಈ ಕಾರ್ಯ ನಡೆಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಸಿಎಫ್ ಪೋಷಕ ಮುಮ್ತಾಜ್ ಅಲಿಯವರ ನೇತೃತ್ವದಲ್ಲಿ ಮಾಜಿ ಶಾಸಕ ಮೊದಿನ್ ಬಾವಾ, ಯು.ಟಿ . ಇಫ್ತಿಕಾರ್, ಬಿಸಿಎಫ್ ಕೇಂದ್ರ ಅಧ್ಯಕ್ಷ ಎಸ್ಎಂಆರ್ ರಶೀದ್ ಅವರು ಪ್ರಯಾಣಿಕರನ್ನು ಸ್ವಾಗತಿಸಿದರು.
ಜು.24ಕ್ಕೆ ಇನ್ನೊಂದು ವಿಮಾನ
ಜು.24ರಂದು ತುಂಬೆ ಬಿಸಿಎಫ್ ಸಹಭಾಗಿತ್ವದಲ್ಲಿ ಇನ್ನೊಂದು ಚಾರ್ಟರ್ಡ್ ವಿಮಾನ ಮಂಗಳೂರಿಗೆ ಆಗಮಿಸಲಿದೆ. ಅಲ್ಲದೆ ಶೀಘ್ರದಲ್ಲಿ ಇನ್ನೂ ಇಂತಹ ಹಲವಾರು ವಿಮಾನಗಳು ತುಂಬೆ ಬಿಸಿಎಫ್ ಸಹಭಾಗಿತ್ವದಲ್ಲಿ ಆಗಮಿಸಲಿವೆ ಎಂದು ತುಂಬೆ ಬಿಸಿಎಫ್ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…