ಉಳ್ಳಾಲ: ಚೆಂಬುಗುಡ್ಡೆ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಅಸ್ತು


Team Udayavani, Apr 29, 2021, 12:32 PM IST

ಉಳ್ಳಾಲ: ಚೆಂಬುಗುಡ್ಡೆ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಅಸ್ತು

ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿರುವ ಚೆಂಬುಗುಡ್ಡೆ ಹಿಂದೂ ರುದ್ರಭೂಮಿ ಸುಮಾರು ಐವತ್ತು ವರ್ಷಕ್ಕಿಂತಲೂ ಹೆಳೆಯ ರುದ್ರಭೂಮಿ. ಸುಮಾರು ಎರಡು ಎಕರೆ ಪ್ರದೇಶದಲ್ಲಿರುವ ಈ ರುದ್ರಭೂಮಿಯಲ್ಲಿ ವಿದ್ಯುತ್‌ ಚಿತಾಗಾರದ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ ಇದೀಗ ವಿದ್ಯುತ್‌ ಚಿತಾಗಾರ ನಿರ್ಮಿಸಲು ಜಿಲ್ಲಾಡಳಿತ ಒಪ್ಪಿಗೆ ನೀಡಿದ್ದು, ಸುಮಾರು 80 ಲಕ್ಷ ರೂ ವೆಚ್ಚದ ವಿದ್ಯುತ್‌ ಚಿತಾಗಾರ ಸದ್ಯದಲ್ಲೇ ಚೆಂಬುಗುಡ್ಡೆಯಲ್ಲಿ ನಿರ್ಮಾಣವಾಗಲಿದೆ.

ಉಳ್ಳಾಲ ನಗರಸಭಾ ವ್ಯಾಪ್ತಿಯ ಉಳ್ಳಾಲ ಪೆರ್ಮನ್ನೂರು ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ಚೆಂಬುಗುಡ್ಡೆ ರುದ್ರಭೂಮಿ ಶವ ಸಂಸ್ಕಾರಕ್ಕೆ ಹೆಚ್ಚು ಬಳಕೆಯಾಗುತ್ತಿರುವ ರುದ್ರಭೂಮಿ ವರ್ಷಕ್ಕೆ ಸುಮಾರು 400ಕ್ಕೂ ಹೆಚ್ಚು ಶವಸಂಸ್ಕಾರ ಈ ರುದ್ರಭೂಮಿಯಲ್ಲಿ ಆಗುತ್ತಿದೆ. ಈ ನಡುವೆ ಕಳೆದ 10 ವರ್ಷಗಳಿಂದ ಈಚೆಗೆ ಈ ಪ್ರದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿದ್ದು, ರುದ್ರಭೂಮಿಯ ಸುತ್ತಮುತ್ತ ಮನೆಗಳ ಶಾಲಾ ಕಾಲೇಜುಗಳು ತಲೆ ಎತ್ತಿದ್ದು, ವಾಯುಮಾಲಿನ್ಯವೂ ಇಲ್ಲಿನ  ಜನರಿಗೆ ಸಮಸ್ಯೆಯಾಗುತ್ತಿದೆ. ಇನ್ನೊಂದೆಡೆ ಈ ರುದ್ರಭೂಮಿಯಲ್ಲಿ ಸಾವಿರಗಟ್ಟಲೆ ಕ್ವಿಂಟಾಲ್‌ ಲೆಕ್ಕದಲ್ಲಿ ಕಟ್ಟಿಗೆಯೂ ಅವಶ್ಯಕತೆಯಿದ್ದು, ಈ ನಿಟ್ಟಿನಲ್ಲಿ ವಿದ್ಯುತ್‌ ಚಿತಾಗಾರದ ಬೇಡಿಕೆಯಿಡಲಾಗಿತ್ತು.

ಇದನ್ನೂ ಓದಿ:ಕೋವಿಡ್‌-19 ಎದುರಿಸಲು ಉಳ್ಳಾಲ ಆರೋಗ್ಯ ಕೇಂದ್ರ ಸಜ್ಜು

ಸ್ಮಶಾನ ನಿರ್ವಹಣಾ ಸಮಿತಿಯ ಅಧ್ಯಕ್ಷ ಚಂದ್ರಹಾಸ್‌ ಉಳ್ಳಾಲ್‌, ಪದಾಧಿಕಾರಿಗಳಾದ ಈಶ್ವರ್‌ ಉಳ್ಳಾಲ್‌, ಸುರೇಶ್‌ ಭಟ್ನಗರ, ವಿಠಲ ಶ್ರೀಯಾನ್‌,ರಾಜೀವ ಮೆಂಡನ್‌, ರಮೇಶ್‌ ಮೆಂಡನ್‌, ಭಾಸ್ಕರ ಶೆಟ್ಟಿ, ಸುಂದರ ಅಮೀನ್‌ , ಶೇಖರ್‌ ಚೊಂಬುಗುಡ್ಡೆ ಸ್ಥಳೀಯ ನಗರ ಸಭೆ ಸದಸ್ಯರಾದ ಶಶಿಕಲಾ ಹಾಗೂ ಬಾಝಿಲ್‌ ಡಿಸೋಜ ಏಳು ತಿಂಗಳ ಹಿಂದೆ ಕ್ಷೇತ್ರದ ಶಾಸಕ ಯು.ಟಿ.ಖಾದರ್‌ ರವರಿಗೆ ಮನವಿಯನ್ನು ಸಲ್ಲಿಸಿದ್ದರು. ಸಮಿತಿಯ ಮನವಿಯನ್ನು ಶಾಸಕರು ಜಿಲ್ಲಾಧಿಕಾರಿಗೆ ನೀಡಿದ್ದು ವಿದ್ಯುತ್‌ ಚಿತಾಗಾರ ನಿರ್ಮಾಣಕ್ಕೆ ಸಂಬಂಧಿಸಿದ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದ್ದರು. ಇದೀಗ ವಿದ್ಯುತ್‌ ಚಿತಾಗಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಇದೀಗ ಅನುಮೋದನೆಯನ್ನು ನೀಡಿದ್ದಾರೆ.

ರುದ್ರಭೂಮಿ ಸುಮಾರು ಎರಡು ಎಕರೆ ಪ್ರದೇಶದಲ್ಲಿದ್ದು ಇದರಲ್ಲಿ ಐವತ್ತು ಸೆಂಟ್ಸ್‌ ಪ್ರದೇಶವನ್ನು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಬೇಕಾದ ದೊಡ್ಡ ನೀರಿನ ಟ್ಯಾಂಕ್‌ಗೆ ನೀಡಿದ್ದು, ದಫನ ಭೂಮಿಯಲ್ಲಿಯೂ ಅಂಡರ್‌ಗ್ರೌಂಡ್‌ ಟ್ಯಾಂಕ್‌ ನಿರ್ಮಾಣಕ್ಕೆ ನೀಡಿದ್ದರಿಂದ ಸ್ಥಳದ ಅಭಾವ ಹೆಚ್ಚಾಗಿದ್ದು ಇರುವ ಸ್ಥಳದಲ್ಲಿ ಶವಸಂಸ್ಕಾರ ನಡೆಸಲು ಮತ್ತು ಮುಂದಿನ ಜನಸಂಖ್ಯೆಯ ಆಧಾರದಲ್ಲಿ ವಿದ್ಯುತ್‌ ಚಿತಾಗಾರಕ್ಕೆ ಸಮಿತಿ ಶಾಸಕ ಯು.ಟಿ.ಖಾದರ್‌ ಅವರ ಮೂಲಕ ಬೇಡಿಕೆಯಿಟ್ಟಿದ್ದು ಇದೀಗ ಬೇಡಿಕೆಗೆ ಮನ್ನಣೆ ಸಿಕ್ಕಿದ್ದು ವಿದ್ಯುತ್‌ ಚಿತಾಗಾರ ನಿರ್ಮಾಣ ಸದಸ್ಯದಲ್ಲೇ ಆಗಲಿದೆ.

– ಚಂದ್ರಹಾಸ ಉಳ್ಳಾಲ್‌, ಅಧ್ಯಕ್ಷರು, ರುದ್ರಭೂಮಿ ನಿರ್ವಹಣಾ ಸಮಿತಿ

ಉಳ್ಳಾಲ ಬೆಳೆಯುತ್ತಿರುವ ಪಟ್ಟಣವಾಗಿದ್ದು ಇಲ್ಲಿ ಪ್ರಮುಖ  ಮೂರು ಮೆಡಿಕಲ್‌ ಕಾಲೇಜು ಆಸ್ಪತ್ರೆಗಳು ಕಾರ್ಯಾಚರಿಸುತ್ತಿದ್ದು, ಅಲ್ಲದೇ ನಗರಕ್ಕೂ ಬಹಳ ಹತ್ತಿರವಾದ ಪ್ರದೇಶವಾದ್ದರಿಂದ ಕೋವಿಡ್‌ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯುತ್‌ ಚಿತಾಗಾರದ ಅವಶ್ಯಕತೆಯನ್ನು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದ್ದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ರವರನ್ನು ಸ್ಥಳಕ್ಕೆ ಕರೆದುಕೊಂಡು ಸ್ಥಳ ಪರಿಶೀಲನೆ ಕೂಡಾ ನಡೆಸಿದ್ದರು. ಇದೀಗ ವಿದ್ಯುತ್‌ ಚಿತಾಗಾರಕ್ಕೆ ಅನುಮೋದನೆ ಸಿಕ್ಕಿದ್ದು  ಅತೀ ಶೀಘ್ರದಲ್ಲಿ ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸ್ಮಶಾನ ಸಮಿತಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ವಿದ್ಯುತ್‌ ಚಿತಾಗಾರ ನಿರ್ಮಾಣದ ಬಗ್ಗೆ ಕಾರ್ಯಸೂಚಿಯನ್ನು ತಯಾರಿಸುಲಾಗುವುದು.

-ಯು.ಟಿ.ಖಾದರ್‌, ಶಾಸಕರು, ಮಂಗಳೂರು ವಿಧಾನಸಬಾ ಕ್ಷೇತ್ರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.